AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲಬೆರಕೆಯಿಲ್ಲದ ಉದ್ದೇಶ ನಿಮ್ಮದು, ಎಲ್ಲರೂ ಅದನ್ನು ಅರ್ಥ ಮಾಡಿಕೊಳ್ಳುವುದಿಲ್ಲ’; ವಿರಾಟ್​ ಬಗ್ಗೆ ಅನುಷ್ಕಾ ಭಾವನಾತ್ಮಕ ಪತ್ರ

‘ನಾನು ನಿಮ್ಮ ಬೆಳವಣಿಗೆಯನ್ನು ನೋಡಿದೆ. ಅದೂ ಅಪಾರ ಬೆಳವಣಿಗೆ. ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕನಾಗಿ ನಿಮ್ಮ ಬೆಳವಣಿಗೆ ಮತ್ತು ನಿಮ್ಮ ನಾಯಕತ್ವದಲ್ಲಿ ತಂಡವು ಮಾಡಿದ ಸಾಧನೆ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಅನುಷ್ಕಾ ಹೇಳಿದ್ದಾರೆ.

‘ಕಲಬೆರಕೆಯಿಲ್ಲದ ಉದ್ದೇಶ ನಿಮ್ಮದು, ಎಲ್ಲರೂ ಅದನ್ನು ಅರ್ಥ ಮಾಡಿಕೊಳ್ಳುವುದಿಲ್ಲ’; ವಿರಾಟ್​ ಬಗ್ಗೆ ಅನುಷ್ಕಾ ಭಾವನಾತ್ಮಕ ಪತ್ರ
ವಿರಾಟ್​-ಅನುಷ್ಕಾ
TV9 Web
| Edited By: |

Updated on: Jan 16, 2022 | 7:23 PM

Share

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿ ಸೋತ ಬೆನ್ನಲ್ಲೇ ವಿರಾಟ್​ ಕೊಹ್ಲಿ (Virat Kohli) ಅವರು ಟೆಸ್ಟ್​ ಕ್ರಿಕೆಟ್​ಗೆ ರಾಜೀನಾಮೆ ನೀಡಿದ್ದರು. ಅವರ ಈ ನಿರ್ಧಾರ ಸಾಕಷ್ಟು ಶಾಕಿಂಗ್​ ಆಗಿತ್ತು. ಟೀಂ ಇಂಡಿಯಾವನ್ನು ಅದ್ಭುತವಾಗಿ ಮುನ್ನಡೆಸುತ್ತಿದ್ದ ಹೊರತಾಗಿಯೂ ಅವರು ಏಕಾಏಕಿ ರಾಜೀನಾಮೆ ನೀಡಿದ್ದೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಅವರು ಮಾಡಿದ ಸಾಧನೆಯನ್ನು ಎಲ್ಲರೂ ನೆನಪು ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ವಿರಾಟ್​ ಕೊಹ್ಲಿಯನ್ನು ಅವರ ಪತ್ನಿ ಅನುಷ್ಕಾ ಶರ್ಮಾ ಹೊಗಳಿದ್ದಾರೆ.

‘2014ರಲ್ಲಿ ಎಂ.ಎಸ್‌. ಧೋನಿ ಅವರು ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿಯಾಗಲು ನಿರ್ಧರಿಸಿದ್ದರು. ಆಗ ನೀವು ನನ್ನ ಬಳಿ ಬಂದು ‘ನನ್ನನ್ನು ಟೀಂ ಇಂಡಿಯಾ ನಾಯಕನನ್ನಾಗಿ ಮಾಡಲು ನಿರ್ಧರಿಸಿದ್ದಾರೆ’ ಎಂದು ಹೇಳಿದ ಮಾತು ನನಗೆ ಈಗಲೂ ನೆನಪಿದೆ. ಆ ಬಳಿಕ ನಾನು, ನೀವು ಮತ್ತು ಎಂಎಸ್​ ಧೋನಿ ಕುಳಿತು ಮಾತನಾಡಿದೆವು. ಈ ವೇಳೆ ನಿಮ್ಮ ಗಡ್ಡ ಎಷ್ಟು ಬೇಗನೆ ಬೂದು ಬಣ್ಣಕ್ಕೆ ತಿರುಗುತ್ತಿದೆ ಎಂದು ಅವರು ತಮಾಷೆ ಮಾಡಿದ್ದರು. ಆಗ ನಾವೆಲ್ಲರೂ ಆ ಬಗ್ಗೆ ಸಾಕಷ್ಟು ನಗುತ್ತಿದ್ದೆವು. ಆ ದಿನದಿಂದ, ನಿಮ್ಮ ಗಡ್ಡವು ಬೂದು ಬಣ್ಣಕ್ಕೆ ತಿರುಗುವುದನ್ನು ಮಾತ್ರ ನಾನು ನೋಡಿಲ್ಲ’ ಎಂದು ಬರೆದುಕೊಂಡಿದ್ದಾರೆ ಅನುಷ್ಕಾ. ಈ ಮೂಲಕ ಕೊಹ್ಲಿ ಕಂಡ ಏಳು-ಬೀಳಿನ ಹಾದಿಯನ್ನೂ ಕಂಡಿದ್ದೇನೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

‘ನಾನು ನಿಮ್ಮ ಬೆಳವಣಿಗೆಯನ್ನು ನೋಡಿದೆ. ಅದೂ ಅಪಾರ ಬೆಳವಣಿಗೆ. ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕನಾಗಿ ನಿಮ್ಮ ಬೆಳವಣಿಗೆ ಮತ್ತು ನಿಮ್ಮ ನಾಯಕತ್ವದಲ್ಲಿ ತಂಡವು ಮಾಡಿದ ಸಾಧನೆ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಅನುಷ್ಕಾ ಹೇಳಿದ್ದಾರೆ.

‘ನೀವು ಮಾದರಿ ಆಗಿ ತಂಡವನ್ನು ಮುನ್ನಡೆಸಿದ್ದೀರಿ. ಕೆಲವು ಸೋಲಿನ ಬಳಿಕ ನಿಮ್ಮ ಪಕ್ಕದಲ್ಲಿ ಬಂದು ಕೂತಾಗ ನಿಮ್ಮ ಒದ್ದೆ ಕಣ್ಣನ್ನು ನಾನು ನೋಡಿದ್ದೇನೆ. ತೋರಿಕೆ ಮಾಡೋದು ನಿಮ್ಮ ವೈರಿ. ಇದು ನನ್ನ ದೃಷ್ಟಿಯಲ್ಲಿ ಮತ್ತು ನಿಮ್ಮ ಅಭಿಮಾನಿಗಳ ದೃಷ್ಟಿಯಲ್ಲಿ ನಿಮ್ಮನ್ನು ಶ್ರೇಷ್ಠರನ್ನಾಗಿ ಮಾಡಿದೆ. ಯಾವಾಗಲೂ ಶುದ್ಧ, ಕಲಬೆರಕೆಯಿಲ್ಲದ ಉದ್ದೇಶಗಳು ನಿಮ್ಮದು. ಪ್ರತಿಯೊಬ್ಬರೂ ಅದನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ’ ಎಂದಿದ್ದಾರೆ ಅನುಷ್ಕಾ.

ಇದನ್ನೂ ಓದಿ: Virat Kohli Resigns: 7 ವರ್ಷಗಳ ಟೆಸ್ಟ್ ನಾಯಕತ್ವದಲ್ಲಿ ಕಿಂಗ್ ಕೊಹ್ಲಿ ಸೃಷ್ಟಿಸಿದ ಅದ್ಭುತ ದಾಖಲೆಗಳಿವು..!

Virat Kohli Resigns: ಎಲ್ಲಾ ಮಾದರಿಯ ನಾಯಕತ್ವ ತೊರೆಯುವ ಕೊಹ್ಲಿಯ ನಿರ್ಧಾರಕ್ಕೆ 4 ಪ್ರಮುಖ ಕಾರಣಗಳಿವು

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ