AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲಬೆರಕೆಯಿಲ್ಲದ ಉದ್ದೇಶ ನಿಮ್ಮದು, ಎಲ್ಲರೂ ಅದನ್ನು ಅರ್ಥ ಮಾಡಿಕೊಳ್ಳುವುದಿಲ್ಲ’; ವಿರಾಟ್​ ಬಗ್ಗೆ ಅನುಷ್ಕಾ ಭಾವನಾತ್ಮಕ ಪತ್ರ

‘ನಾನು ನಿಮ್ಮ ಬೆಳವಣಿಗೆಯನ್ನು ನೋಡಿದೆ. ಅದೂ ಅಪಾರ ಬೆಳವಣಿಗೆ. ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕನಾಗಿ ನಿಮ್ಮ ಬೆಳವಣಿಗೆ ಮತ್ತು ನಿಮ್ಮ ನಾಯಕತ್ವದಲ್ಲಿ ತಂಡವು ಮಾಡಿದ ಸಾಧನೆ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಅನುಷ್ಕಾ ಹೇಳಿದ್ದಾರೆ.

‘ಕಲಬೆರಕೆಯಿಲ್ಲದ ಉದ್ದೇಶ ನಿಮ್ಮದು, ಎಲ್ಲರೂ ಅದನ್ನು ಅರ್ಥ ಮಾಡಿಕೊಳ್ಳುವುದಿಲ್ಲ’; ವಿರಾಟ್​ ಬಗ್ಗೆ ಅನುಷ್ಕಾ ಭಾವನಾತ್ಮಕ ಪತ್ರ
ವಿರಾಟ್​-ಅನುಷ್ಕಾ
TV9 Web
| Edited By: |

Updated on: Jan 16, 2022 | 7:23 PM

Share

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿ ಸೋತ ಬೆನ್ನಲ್ಲೇ ವಿರಾಟ್​ ಕೊಹ್ಲಿ (Virat Kohli) ಅವರು ಟೆಸ್ಟ್​ ಕ್ರಿಕೆಟ್​ಗೆ ರಾಜೀನಾಮೆ ನೀಡಿದ್ದರು. ಅವರ ಈ ನಿರ್ಧಾರ ಸಾಕಷ್ಟು ಶಾಕಿಂಗ್​ ಆಗಿತ್ತು. ಟೀಂ ಇಂಡಿಯಾವನ್ನು ಅದ್ಭುತವಾಗಿ ಮುನ್ನಡೆಸುತ್ತಿದ್ದ ಹೊರತಾಗಿಯೂ ಅವರು ಏಕಾಏಕಿ ರಾಜೀನಾಮೆ ನೀಡಿದ್ದೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಅವರು ಮಾಡಿದ ಸಾಧನೆಯನ್ನು ಎಲ್ಲರೂ ನೆನಪು ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ವಿರಾಟ್​ ಕೊಹ್ಲಿಯನ್ನು ಅವರ ಪತ್ನಿ ಅನುಷ್ಕಾ ಶರ್ಮಾ ಹೊಗಳಿದ್ದಾರೆ.

‘2014ರಲ್ಲಿ ಎಂ.ಎಸ್‌. ಧೋನಿ ಅವರು ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿಯಾಗಲು ನಿರ್ಧರಿಸಿದ್ದರು. ಆಗ ನೀವು ನನ್ನ ಬಳಿ ಬಂದು ‘ನನ್ನನ್ನು ಟೀಂ ಇಂಡಿಯಾ ನಾಯಕನನ್ನಾಗಿ ಮಾಡಲು ನಿರ್ಧರಿಸಿದ್ದಾರೆ’ ಎಂದು ಹೇಳಿದ ಮಾತು ನನಗೆ ಈಗಲೂ ನೆನಪಿದೆ. ಆ ಬಳಿಕ ನಾನು, ನೀವು ಮತ್ತು ಎಂಎಸ್​ ಧೋನಿ ಕುಳಿತು ಮಾತನಾಡಿದೆವು. ಈ ವೇಳೆ ನಿಮ್ಮ ಗಡ್ಡ ಎಷ್ಟು ಬೇಗನೆ ಬೂದು ಬಣ್ಣಕ್ಕೆ ತಿರುಗುತ್ತಿದೆ ಎಂದು ಅವರು ತಮಾಷೆ ಮಾಡಿದ್ದರು. ಆಗ ನಾವೆಲ್ಲರೂ ಆ ಬಗ್ಗೆ ಸಾಕಷ್ಟು ನಗುತ್ತಿದ್ದೆವು. ಆ ದಿನದಿಂದ, ನಿಮ್ಮ ಗಡ್ಡವು ಬೂದು ಬಣ್ಣಕ್ಕೆ ತಿರುಗುವುದನ್ನು ಮಾತ್ರ ನಾನು ನೋಡಿಲ್ಲ’ ಎಂದು ಬರೆದುಕೊಂಡಿದ್ದಾರೆ ಅನುಷ್ಕಾ. ಈ ಮೂಲಕ ಕೊಹ್ಲಿ ಕಂಡ ಏಳು-ಬೀಳಿನ ಹಾದಿಯನ್ನೂ ಕಂಡಿದ್ದೇನೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

‘ನಾನು ನಿಮ್ಮ ಬೆಳವಣಿಗೆಯನ್ನು ನೋಡಿದೆ. ಅದೂ ಅಪಾರ ಬೆಳವಣಿಗೆ. ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕನಾಗಿ ನಿಮ್ಮ ಬೆಳವಣಿಗೆ ಮತ್ತು ನಿಮ್ಮ ನಾಯಕತ್ವದಲ್ಲಿ ತಂಡವು ಮಾಡಿದ ಸಾಧನೆ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ಅನುಷ್ಕಾ ಹೇಳಿದ್ದಾರೆ.

‘ನೀವು ಮಾದರಿ ಆಗಿ ತಂಡವನ್ನು ಮುನ್ನಡೆಸಿದ್ದೀರಿ. ಕೆಲವು ಸೋಲಿನ ಬಳಿಕ ನಿಮ್ಮ ಪಕ್ಕದಲ್ಲಿ ಬಂದು ಕೂತಾಗ ನಿಮ್ಮ ಒದ್ದೆ ಕಣ್ಣನ್ನು ನಾನು ನೋಡಿದ್ದೇನೆ. ತೋರಿಕೆ ಮಾಡೋದು ನಿಮ್ಮ ವೈರಿ. ಇದು ನನ್ನ ದೃಷ್ಟಿಯಲ್ಲಿ ಮತ್ತು ನಿಮ್ಮ ಅಭಿಮಾನಿಗಳ ದೃಷ್ಟಿಯಲ್ಲಿ ನಿಮ್ಮನ್ನು ಶ್ರೇಷ್ಠರನ್ನಾಗಿ ಮಾಡಿದೆ. ಯಾವಾಗಲೂ ಶುದ್ಧ, ಕಲಬೆರಕೆಯಿಲ್ಲದ ಉದ್ದೇಶಗಳು ನಿಮ್ಮದು. ಪ್ರತಿಯೊಬ್ಬರೂ ಅದನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ’ ಎಂದಿದ್ದಾರೆ ಅನುಷ್ಕಾ.

ಇದನ್ನೂ ಓದಿ: Virat Kohli Resigns: 7 ವರ್ಷಗಳ ಟೆಸ್ಟ್ ನಾಯಕತ್ವದಲ್ಲಿ ಕಿಂಗ್ ಕೊಹ್ಲಿ ಸೃಷ್ಟಿಸಿದ ಅದ್ಭುತ ದಾಖಲೆಗಳಿವು..!

Virat Kohli Resigns: ಎಲ್ಲಾ ಮಾದರಿಯ ನಾಯಕತ್ವ ತೊರೆಯುವ ಕೊಹ್ಲಿಯ ನಿರ್ಧಾರಕ್ಕೆ 4 ಪ್ರಮುಖ ಕಾರಣಗಳಿವು

Follow Us
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್