AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಬಾರಿ ಪ್ರೆಗ್ನೆಂಟ್​ ಆದ ಅನುಷ್ಕಾ ಶರ್ಮಾ? ನೆಟ್ಟಿಗರಿಗೆ ಸಿಕ್ಕಿದೆ ವಿಡಿಯೋ ಸಾಕ್ಷಿ

ಸದ್ಯಕ್ಕೆ ಅನುಷ್ಕಾ ಶರ್ಮಾ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ಅವಸರ ತೋರುತ್ತಿಲ್ಲ. ಈಗ ಅವರ ಹೊಸ ಜಾಹೀರಾತೊಂದು ಪ್ರಸಾರ ಆಗುತ್ತಿದೆ. ಅದರಿಂದಾಗಿ ಪ್ರೆಗ್ನೆನ್ಸಿ ಗಾಸಿಪ್​ಗೆ ಮತ್ತೆ ಜೀವ ಬಂದಂತೆ ಆಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

2ನೇ ಬಾರಿ ಪ್ರೆಗ್ನೆಂಟ್​ ಆದ ಅನುಷ್ಕಾ ಶರ್ಮಾ? ನೆಟ್ಟಿಗರಿಗೆ ಸಿಕ್ಕಿದೆ ವಿಡಿಯೋ ಸಾಕ್ಷಿ
ವಿರಾಟ್​ ಕೊಹ್ಲಿ, ಅನುಷ್ಕಾ ಶರ್ಮಾ
TV9 Web
| Edited By: |

Updated on: Dec 19, 2023 | 2:52 PM

Share

ನಟಿ ಅನುಷ್ಕಾ ಶರ್ಮಾ (Anushka Sharma) ಅವರು ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ ಎಂಬ ವದಂತಿ ಇತ್ತೀಚೆಗೆ ಜೋರಾಗಿದೆ. ಆದರೆ ಈ ಬಗ್ಗೆ ಅನುಷ್ಕಾ ಅವರಾಗಲಿ ಅಥವಾ ಅವರ ಪತಿ ವಿರಾಟ್​ ಕೊಹ್ಲಿ (Virat Kohli) ಅವರಾಗಲಿ ಏನನ್ನೂ ಬಹಿರಂಗಪಡಿಸಿಲ್ಲ. ಹಾಗಿದ್ದರೂ ಕೂಡ ವದಂತಿ ಬಲವಾಗಿ ಹಬ್ಬಿದೆ. ಅದಕ್ಕೆ ಪೂರಕ ಎಂಬಂತೆ ಈಗೊಂದು ವಿಡಿಯೋ ವೈರಲ್​ ಆಗಿದೆ. ಅದನ್ನು ನೋಡಿದ ಬಳಿಕ ‘ಅನುಷ್ಕಾ ಶರ್ಮಾ 2ನೇ ಬಾರಿ ಪ್ರೆಗ್ನೆಂಟ್​ ಆಗಿರುವುದು ಖಚಿತ’ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಆದಷ್ಟು ಬೇಗ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಅವರು ಗುಡ್​ ನ್ಯೂಡ್​ ನೀಡಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಕೆಲವೇ ದಿನಗಳ ಹಿಂದೆ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಅವರು ಜೊತೆಯಾಗಿ ನಿಂತಿರುವ ಫೋಟೋ ವೈರಲ್​ ಆಗಿತ್ತು. ಅದರಲ್ಲಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್​ ಕಾಣಿಸುತ್ತಿತ್ತು. ಆದರೆ ಅದು ಹಳೇ ಫೋಟೋ ಎಂಬುದು ನಂತರ ತಿಳಿಯಿತು. ಈಗ ಅನುಷ್ಕಾ ಶರ್ಮಾ ಅವರ ಹೊಸ ಜಾಹೀರಾತು ಪ್ರಸಾರ ಆಗುತ್ತಿದೆ. ಅದರಿಂದಾಗಿ ಪ್ರೆಗ್ನೆನ್ಸಿ ಗಾಸಿಪ್​ಗೆ ಮತ್ತೆ ಜೀವ ಬಂದಂತೆ ಆಗಿದೆ.

ಪ್ರೆಗ್ನೆನ್ಸಿ ಟೆಸ್ಟ್​ ಮಾಡುವ ಕಿಟ್​ನ ಜಾಹೀರಾತಿನಲ್ಲಿ ಅನುಷ್ಕಾ ಶರ್ಮಾ ನಟಿಸಿದ್ದಾರೆ. ಅವರು ಎರಡನೇ ಬಾರಿ ಪ್ರೆಗ್ನೆಂಟ್​ ಆಗಿರುವುದರಿಂದಲೇ ಈ ಜಾಹೀರಾತಿನಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ಎಂಬುದು ಕೆಲವರ ವಾದ. ಈ ಜಾಹೀರಾತಿನ ಮೂಲಕ ಅವರು ಪ್ರೆಗ್ನೆನ್ಸಿ ಸುದ್ದಿಯನ್ನು ನೀಡಿದ್ದಾರೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಇದಕ್ಕೆ ಸ್ವತಃ ಅನುಷ್ಕಾ ಶರ್ಮಾ ಸ್ಪಷ್ಟನೆ ನೀಡಬೇಕಷ್ಟೇ.

ಇದನ್ನೂ ಓದಿ: ಪ್ರೆಗ್ನೆಂಟ್ ವಿಚಾರವನ್ನು ಗುಟ್ಟಾಗಿ ಇಟ್ಟಿದ್ದ ನಟಿಯರು ಇವರೇ ನೋಡಿ..

2017ರಲ್ಲಿ ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಮದುವೆ ನಡೆಯಿತು. 2021ರ ಜನವರಿಯಲ್ಲಿ ಹೆಣ್ಣು ಮಗುವಿಗೆ ಅನುಷ್ಕಾ ಅವರು ಜನ್ಮ ನೀಡಿದರು. ಸದ್ಯಕ್ಕೆ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ಅವಸರ ತೋರುತ್ತಿಲ್ಲ. 2ನೇ ಬಾರಿ ಪ್ರೆಗ್ನೆಂಟ್​ ಆಗಿರುವ ಕಾರಣದಿಂದಲೇ ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ ಎಂಬುದು ನೆಟ್ಟಿಗರ ವಾದ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ