ಒಟ್ಟೊಟ್ಟಿಗೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡ್ರಾ ಅನುಷ್ಕಾ ಶರ್ಮಾ? ಕಂಬ್ಯಾಕ್​ ಮಾಡಿದ ಕೊಹ್ಲಿ ಪತ್ನಿ

ಇತ್ತೀಚೆಗೆ ಅನುಷ್ಕಾ ಜಿಮ್​ನಲ್ಲಿ ಸಮಯ ಕಳೆಯುತ್ತಿರುವ ಬಗ್ಗೆ ಪೋಸ್ಟ್​ ಮಾಡಿದ್ದರು. ಅವರು ಮೊದಲಿನ ಫಿಟ್​ನೆಸ್​ಗೆ ಬರೋಕೆ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಒಟ್ಟೊಟ್ಟಿಗೆ ಮೂರು ಸಿನಿಮಾಗಳನ್ನು ಒಪ್ಪಿಕೊಂಡ್ರಾ ಅನುಷ್ಕಾ ಶರ್ಮಾ? ಕಂಬ್ಯಾಕ್​ ಮಾಡಿದ ಕೊಹ್ಲಿ ಪತ್ನಿ
ಅನುಷ್ಕಾ
Follow us
| Updated By: ರಾಜೇಶ್ ದುಗ್ಗುಮನೆ

Updated on:Jan 01, 2022 | 8:42 AM

2018ರಲ್ಲಿ ತೆರೆಗೆ ಬಂದ ಶಾರುಖ್​ ಖಾನ್ (Shah Rukh Khan)​ ನಟನೆಯ ‘ಜೀರೋ’ (Zero) ಚಿತ್ರ ಮಕಾಡೆ ಮಲಗಿತ್ತು. ಈ ಚಿತ್ರದ ಸೋಲಿನಿಂದ ಶಾರುಖ್​ ಖಾನ್ ತುಂಬಾನೇ ಬೇಸರಗೊಂಡಿದ್ದರು. ಆ ಬಳಿಕ ಅವರು ಎರಡು ವರ್ಷ ಯಾವುದೇ ಸಿನಿಮಾ ಒಪ್ಪಿಕೊಂಡಿರಲಿಲ್ಲ. ಈ ಸಿನಿಮಾದಲ್ಲಿ ಅನುಷ್ಕಾ ಶರ್ಮಾ (Anushka Sharma) ಕೂಡ ನಟಿಸಿದ್ದರು. ಅವರು ಕೂಡ ನಟನೆಯಿಂದ ಅಂತರ ಕಾಯ್ದುಕೊಂಡರು. ಈ ಚಿತ್ರ ಬಂದು 3 ವರ್ಷ ಕಳೆದಿದೆ. ಅನುಷ್ಕಾ ಹೊಸ ಸಿನಿಮಾದ ಬಗ್ಗೆ ಯಾವುದೇ ಘೋಷಣೆ ಆಗಿಲ್ಲ. ಈಗ ಕೇಳಿ ಬರುತ್ತಿರುವ ಲೇಟೆಸ್ಟ್​ ಸುದ್ದಿ ಎಂದರೆ, ಅನುಷ್ಕಾ ಒಟ್ಟೊಟ್ಟಿಗೆ ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರಂತೆ.

ಟೀಂ ಇಂಡಿಯಾ ಟೆಸ್ಟ್​ ತಂಡದ ನಾಯಕ ವಿರಾಟ್​ ಕೊಹ್ಲಿಯನ್ನು ಮದುವೆ ಆದ ನಂತರದಲ್ಲಿ ಅನುಷ್ಕಾ ಕುಟುಂಬದಲ್ಲಿ ಹೆಚ್ಚು ಬ್ಯುಸಿ ಆದರು. ಮಗಳು ವಮಿಕಾ ಜನಿಸಿದ ಬಳಿಕ ಅವಳ ಆರೈಕೆಯಲ್ಲಿ ಅನುಷ್ಕಾ ತೊಡಗಿಕೊಂಡಿದ್ದಾರೆ. ಹಾಗಂತ ಅವರು ಚಿತ್ರರಂಗದಿಂದ ದೂರ ಉಳಿದಿಲ್ಲ. ಕೆಲ ಸಿನಿಮಾಗಳನ್ನು ಹಾಗೂ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಸಿನಿಮಾ ನಿರ್ಮಾಣದತ್ತ ಅವರ ಗಮನ ಹೆಚ್ಚಿದೆ. ಅನುಷ್ಕಾ ಆ್ಯಕ್ಟಿಂಗ್​ಗೆ ಮರಳಬೇಕು ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ.

ಇತ್ತೀಚೆಗೆ ಅನುಷ್ಕಾ ಜಿಮ್​ನಲ್ಲಿ ಸಮಯ ಕಳೆಯುತ್ತಿರುವ ಬಗ್ಗೆ ಪೋಸ್ಟ್​ ಮಾಡಿದ್ದರು. ಅವರು ಮೊದಲಿನ ಫಿಟ್​ನೆಸ್​ಗೆ ಬರೋಕೆ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಈಗ ಹೊಸ ವರ್ಷಕ್ಕೆ ಅವರ ಬಗ್ಗೆ ಹೊಸ ಅಪ್​ಡೇಟ್​ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ.

ಮೂಲಗಳ ಪ್ರಕಾರ ಅನುಷ್ಕಾ ಮೂರು ಚಿತ್ರಕ್ಕೆ ಸಹಿ ಹಾಕಿದ್ದಾರೆ. ಒಂದು ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆದರೆ, ಉಳಿದ ಎರಡು ಚಿತ್ರಗಳು ದೊಡ್ಡ ಪರದೆಯಮೇಲೆ ಬಿಡುಗಡೆ ಆಗಲಿವೆ ಎನ್ನಲಾಗುತ್ತಿದೆ. ಅನುಷ್ಕಾ ಯಾರ ಜತೆ ನಟಿಸಲಿದ್ದಾರೆ, ಅವರ ಕಂಬ್ಯಾಕ್​ ಪ್ರಾಜೆಕ್ಟ್​ ಹೇಗಿರಲಿದೆ ಎನ್ನುವ ಕೂತೂಹಲಕ್ಕೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಸದ್ಯ, ಅನುಷ್ಕಾ ಶರ್ಮಾ ದಕ್ಷಿಣ ಆಫ್ರಿಕಾದಲ್ಲಿದ್ದಾರೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಟೆಸ್ಟ್​ ಸರಣಿ ನಡೆಯುತ್ತಿದೆ. ವಿರಾಟ್ ಜತೆ ಅವರು ಕೂಡ ಅಲ್ಲಿಗೆ ತೆರಳಿದ್ದಾರೆ. ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದ ವಿರುದ್ಧ ಮೊದಲ ಟೆಸ್ಟ್​ ಅನ್ನು ಗೆದ್ದಿದೆ.

ಇದನ್ನೂ ಓದಿ: ‘ಆರ್​ಆರ್​ಆರ್​’ ಬೆಂಗಳೂರು ಪ್ರೀ ರಿಲೀಸ್​ ಇವೆಂಟ್​ನಲ್ಲಿ ದಿಗ್ಗಜರು; ಸ್ಥಳ, ಸಮಯದ ಬಗ್ಗೆ ಇಲ್ಲಿದೆ ಮಾಹಿತಿ

ವಮಿಕಾಳ ಮುಖ ತೋರಿಸಿ ಎಂದವರಿಗೆ ಅನುಷ್ಕಾ ಶರ್ಮಾ ವಿಶೇಷ ಮನವಿ

Published On - 8:39 am, Sat, 1 January 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ