AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಕಂದರ್’ ಚಿತ್ರದಲ್ಲಿ ಹಳೇ ಕಥೆಗೆ ಹೊಸ ಮಸಾಲೆ ಹಾಕಿದ್ರಾ ಸ್ಟಾರ್ ನಿರ್ದೇಶಕ? ಸಿಕ್ತು ಸ್ಪಷ್ಟನೆ

‘ಘಜಿನಿ’ ಸಿನಿಮಾ ಮೂಲಕ ಬಾಲಿವುಡ್​ನಲ್ಲಿ ದೊಡ್ಡ ಸಕ್ಸಸ್ ಕಂಡವರು ನಿರ್ದೇಶಕ ಎ.ಆರ್​. ಮುರುಗದಾಸ್. ಈಗ ಅವರು ಹಿಂದಿಯ ‘ಸಿಕಂದರ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ಸಲ್ಮಾನ್ ಖಾನ್ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾದ ಕಥೆ ಬಗ್ಗೆ ಜನರಿಗೆ ಇದ್ದ ಒಂದು ಅನುಮಾನ ಈಗ ಪರಿಹಾರ ಆಗಿದೆ.

‘ಸಿಕಂದರ್’ ಚಿತ್ರದಲ್ಲಿ ಹಳೇ ಕಥೆಗೆ ಹೊಸ ಮಸಾಲೆ ಹಾಕಿದ್ರಾ ಸ್ಟಾರ್ ನಿರ್ದೇಶಕ? ಸಿಕ್ತು ಸ್ಪಷ್ಟನೆ
AR Murugadoss, Salman Khan
ಮದನ್​ ಕುಮಾರ್​
|

Updated on: Mar 09, 2025 | 6:57 PM

Share

ಕಾಲಿವುಡ್ ನಿರ್ದೇಶಕ ಎ.ಆರ್​. ಮುರುಗದಾಸ್ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ. ಈಗ ಅವರು ಸಲ್ಮಾನ್ ಖಾನ್ (Salman Khan) ಜೊತೆ ‘ಸಿಕಂದರ್’ (Sikandar) ಸಿನಿಮಾ ಮಾಡಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಟೀಸರ್​ ಬಿಡುಗಡೆ ಆಯಿತು. ಆ ಟೀಸರ್ ನೋಡಿದ ಬಳಿಕ ಅನೇಕರು ಒಂದು ಅನುಮಾನ ವ್ಯಕ್ತಪಡಿಸಿದರು. ‘ಸಿಕಂದರ್’ ಸಿನಿಮಾದಲ್ಲಿ ಎ.ಆರ್​. ಮುರುಗದಾಸ್ ಅವರು ಯಾವುದೋ ಹಳೇ ಕಥೆಯನ್ನೇ ತೋರಿಸಲಿದ್ದಾರೆ ಎಂಬ ಶಂಕೆ ಮೂಡಿತು. ಆದರೆ ಆ ಅನುಮಾನಕ್ಕೆ ಈಗ ಸ್ವತಃ ಎ.ಆರ್​. ಮುರುಗದಾಸ್ ಅವರು ಸ್ಪಷ್ಟನೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

2018ರಲ್ಲಿ ಎ.ಆರ್. ಮುರುಗದಾಸ್ ಅವರು ‘ಸರ್ಕಾರ್’ ಸಿನಿಮಾ ಮಾಡಿದ್ದರು. ಆ ಸಿನಿಮಾದಲ್ಲಿ ದಳಪತಿ ವಿಜಯ್ ನಟಿಸಿದ್ದರು. ಬಾಕ್ಸ್ ಆಫೀಸ್​ನಲ್ಲಿ ‘ಸರ್ಕಾರ್’ ಚಿತ್ರಕ್ಕೆ ಸಾಧಾರಣ ಗಳಿಕೆ ಆಗಿತ್ತು. ಈಗ ಅದೇ ಸಿನಿಮಾವನ್ನು ಎ.ಆರ್. ಮುರುಗದಾಸ್ ಅವರು ‘ಸಿಕಂದರ್’ ಹೆಸರಿನಲ್ಲಿ ರಿಮೇಕ್ ಮಾಡಿರಬಹುದು ಎಂಬುದು ಕೆಲವರ ಅನುಮಾನ ಆಗಿತ್ತು. ಆದರೆ ಅದನ್ನು ಮುರುಗದಾಸ್ ಅಲ್ಲಗಳೆದಿದ್ದಾರೆ.

ಒಂದುವೇಳೆ ಎ.ಆರ್​. ಮುರುಗದಾಸ್ ಅವರು ‘ಸರ್ಕಾರ್’ ಸಿನಿಮಾದ ಕಥೆಗೆ ಹೊಸ ಮಸಾಲೆ ಸೇರಿಸಿ ‘ಸಿಕಂದರ್’ ಸಿನಿಮಾ ಮಾಡಿದ್ದರೆ ಸಲ್ಮಾನ್ ಖಾನ್ ಅಭಿಮಾನಿಗಳಿಗೆ ಖಂಡಿತಾ ನಿರಾಸೆ ಆಗುತ್ತದೆ. ಆದರೆ ಆ ರೀತಿ ಏನಿಲ್ಲ ಎಂದು ಮುರುಗದಾಸ್ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ. ‘ಸಿಕಂದರ್’ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಸಲುವಾಗಿಯೇ ತಾವು ಹೊಸ ಕಥೆ ಬರೆದಿರುವುದಾಗಿ ಮುರುಗದಾಸ್ ಅವರು ಸ್ಪಷ್ಟನೆ ನೀಡಿದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ
Image
ಸಲ್ಲು ಜೊತೆ ಪ್ರೇಮ, ಇಬ್ಬರು ಮಕ್ಕಳ ತಂದೆಯ ಜೊತೆ ವಿವಾಹ, ಆ ಬಳಿಕ ವಿಚ್ಛೇದನ
Image
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
Image
ದಕ್ಷಿಣದ ನಿರ್ದೇಶಕನ ಮೇಲೆ ಉರಿದು ಬಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು, ಕಾರಣ?
Image
ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

ಇದನ್ನೂ ಓದಿ: ‘ಸಿಕಂದರ್’ ಚಿತ್ರಕ್ಕಾಗಿ ಸಲ್ಮಾನ್ ಖಾನ್ ಪಡೆದ ಸಂಭಾವನೆ ಇಷ್ಟೊಂದಾ?

ಈದ್ ಹಬ್ಬದ ಪ್ರಯುಕ್ತ ಮಾರ್ಚ್​ ಕೊನೇ ವಾರದಲ್ಲಿ ‘ಸಿಕಂದರ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈಗಾಗಲೇ ‘ಛಾವ’ ಸಿನಿಮಾ ಮೂಲಕ ಭಾರಿ ಸಕ್ಸಸ್ ಕಂಡಿರುವ ರಶ್ಮಿಕಾ ಅವರು ಇನ್ನೊಂದು ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ. ಸಾಜಿದ್ ನಾಡಿಯದ್ವಾಲ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್