AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ ಜತೆ ‘ಘಜಿನಿ 2’ ಮಾಡ್ತೀರಾ? ಉತ್ತರ ನೀಡಿದ ನಿರ್ದೇಶಕ ಮುರುಗದಾಸ್

ಸೂಪರ್ ಹಿಟ್ ‘ಘಜನಿ’ ಸಿನಿಮಾಗೆ ಸೀಕ್ವೆಲ್ ಯಾವಾಗ ಬರಲಿದೆ ಎಂದು ಸಿನಿಪ್ರಿಯರು ಕೇಳುತ್ತಲೇ ಇದ್ದಾರೆ. ಈ ಬಗ್ಗೆ ನಿರ್ದೇಶಕ ಎ.ಆರ್. ಮುರುಗದಾಸ್ ಅವರು ಸುಳಿವು ನೀಡಿದ್ದಾರೆ. ಸೀಕ್ವೆಲ್ ಕುರಿತಂತೆ ಅವರು ಈಗಾಗಲೇ ಆಮಿರ್ ಖಾನ್ ಜೊತೆ ಮಾತುಕತೆ ನಡೆಸಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಆಮಿರ್ ಖಾನ್ ಜತೆ ‘ಘಜಿನಿ 2’ ಮಾಡ್ತೀರಾ? ಉತ್ತರ ನೀಡಿದ ನಿರ್ದೇಶಕ ಮುರುಗದಾಸ್
Aamir Khan, Ar Murugadoss
ಮದನ್​ ಕುಮಾರ್​
|

Updated on: Mar 21, 2025 | 12:04 PM

Share

ಆಮಿರ್ ಖಾನ್ (Aamir Khan) ಅವರು ಈಗ ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ಅವಸರ ತೋರುತ್ತಿಲ್ಲ. ಸಿನಿಮಾಗಿಂತಲೂ ಹೆಚ್ಚಾಗಿ ವೈಯಕ್ತಿಕ ಜೀವನಕ್ಕೆ ಅವರು ಹೆಚ್ಚು ಗಮನ ನೀಡುತ್ತಿದ್ದಾರೆ. ಸದ್ಯದಲ್ಲೇ ಮೂರನೇ ಮದುವೆ ಆಗಲಿದ್ದಾರೆ. ಈ ನಡುವೆ ಅವರ ಅಭಿಮಾನಿಗಳಿಗೆ ‘ಘಜಿನಿ 2’ (Ghajini 2) ಸಿನಿಮಾ ಸೆಟ್ಟೇರುತ್ತೋ ಇಲ್ಲವೋ ಎಂಬ ಅನುಮಾನ ಕಾಡುತ್ತಿದೆ. ಈ ಬಗ್ಗೆ ಕೆಲವು ಅಂತೆ-ಕಂತೆಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಈಗ ನಿರ್ದೇಶಕ ಮುರುಗದಾಸ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಘಜಿನಿ 2’ ಬಗ್ಗೆ ಈಗಾಗಲೇ ಮಾತುಕಥೆ ಆರಂಭ ಆಗಿರುವುದಾಗಿ ಎ.ಆರ್. ಮುರುಗದಾಸ್ (AR Murugadoss) ಅವರು ತಿಳಿಸಿದ್ದಾರೆ. ಈ ಸುದ್ದಿ ಕೇಳಿದ ಮೇಲೆ ಅಭಿಮಾನಿಗಳ ಕೌತುಕ ಜಾಸ್ತಿ ಆಗಿದೆ.

ಕಾಲಿವುಡ್ ನಿರ್ದೇಶಕ ಎ.ಆರ್. ಮುರುಗದಾಸ್ ಅವರಿಗೆ ಬಾಲಿವುಡ್​ನಲ್ಲೂ ಬೇಡಿಕೆ ಇದೆ. ಈಗ ಅವರು ಸಲ್ಮಾನ್ ಖಾನ್ ಜೊತೆ ‘ಸಿಕಂದರ್’ ಸಿನಿಮಾ ಮಾಡಿದ್ದಾರೆ. ಮಾರ್ಚ್​ 30ರಂದು ‘ಸಿಕಂದರ್’ ಬಿಡುಗಡೆ ಆಗಲಿದೆ. ಆ ಬಳಿಕ ಅವರು ‘ಘಜಿನಿ 2’ ಸಿನಿಮಾ ಶುರು ಮಾಡಲಿ ಎಂಬುದು ಫ್ಯಾನ್ಸ್ ಆಸೆ. ಆದರೆ ಅದಕ್ಕೆ ಇನ್ನೂ ಸಮಯ ಹತ್ತಿರ ಆಗಿಲ್ಲ. ಆದರೆ ಆಮಿರ್ ಖಾನ್ ಜೊತೆ ಅವರು ಚರ್ಚೆ ಮಾಡಿರುವುದು ನಿಜ.

ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಸೆಟ್​ನಲ್ಲಿ ಎ.ಆರ್. ಮುರುಗದಾಸ್ ಮತ್ತು ಆಮಿರ್ ಖಾನ್ ಅವರು ಭೇಟಿ ಆಗಿದ್ದರು. ಆಗ ‘ಘಜಿನಿ 2’ ಬಗ್ಗೆ ಮಾತುಕಥೆ ಮಾಡಲಾಗಿತ್ತು ಎಂದು ಮುರುಗದಾಸ್ ಅವರು ಹೇಳಿದ್ದಾರೆ. ‘ಅಂದು ನಾವು ಭೇಟಿ ಆದೆವು. ಕೆಲವು ಮಾತುಕಥೆ ಮಾಡಿದೆವು. ನಮ್ಮ ಬಳಿ ಕೆಲವು ಐಡಿಯಾಗಳು ಇವೆ. ಆ ಬಳಿಕ ಫೋನ್​ನಲ್ಲಿ ಮಾತನಾಡುತ್ತಿದ್ದೇವೆ’ ಎಂದಿದ್ದಾರೆ ಎ.ಆರ್. ಮುರುಗದಾಸ್.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಇದನ್ನೂ ಓದಿ: ಆಮಿರ್ ಖಾನ್ ಜತೆ ‘ಗಜಿನಿ 2’ ಸಿನಿಮಾ ಮಾಡಲು ಮುಂದಾದ ಅಲ್ಲು ಅರ್ಜುನ್ ತಂದೆ

ಕಾಲಿವುಡ್​ನಲ್ಲಿ ಸೂರ್ಯ ನಟನೆಯ ‘ಘಜಿನಿ’ ಸಿನಿಮಾ 2005ರಲ್ಲಿ ಬಿಡುಗಡೆ ಆಗಿತ್ತು. ಅದೇ ಸಿನಿಮಾವನ್ನು ಆಮಿರ್ ಖಾನ್ ಅವರು ಹಿಂದಿಗೆ 2008ರಲ್ಲಿ ರಿಮೇಕ್ ಮಾಡಿದ್ದರು. ಈಗ ಸೀಕ್ವೆಲ್ ಮಾಡಿದರೆ ತಮಿಳಿನಲ್ಲಿ ಸೂರ್ಯ ಹಾಗೂ ಹಿಂದಿಯಲ್ಲಿ ಆಮಿರ್ ಖಾನ್ ಒಟ್ಟಿಗೆ ಸಿನಿಮಾ ಆರಂಭಿಸುವ ಪ್ಲ್ಯಾನ್ ಹೊಂದಿದ್ದಾರೆ. ಆದರೆ ಸರಿಯಾದ ಸ್ಕಿಪ್ಟ್ ಸಿಗಬೇಕಿದೆ. ಸುಮ್ಮನೆ ಹಣಕ್ಕಾಗಿ ಅವರು ಈ ಸಿನಿಮಾ ಮಾಡುವುದಿಲ್ಲ ಎಂದು ಆಪ್ತ ಮೂಲಗಳು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿದೆ. ಒಟ್ಟಿನಲ್ಲಿ ಅಭಿಮಾನಿಗಳು ಘಜಿನಿ ಸೀಕ್ವೆಲ್ ನೋಡಲು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು