AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ಗೆ ಗೊತ್ತೇ ಇರಲಿಲ್ಲ ಅರ್ಬಾಜ್ ಖಾನ್ ಲವ್​ ಸ್ಟೋರಿ; ಸಲ್ಲು ರಿಯಾಕ್ಷನ್ ಹೇಗಿತ್ತು?

ನಟ ಅರ್ಬಾಜ್ ಖಾನ್ ಹಾಗೂ ಮೇಕಪ್​ ಆರ್ಟಿಸ್ಟ್ ಶುರಾ ಖಾನ್ ವಿವಾಹ ಆದರು. ಅವರು ಮತ್ತೆ ಸಂಸಾರ ಜೀವನ ಆರಂಭಿಸಿರುವುದಕ್ಕೆ ಸಲ್ಮಾನ್ ಖಾನ್, ಸೋಹೈಲ್ ಖಾನ್​ಗೆ ಖುಷಿ ಇದೆ. ಅರ್ಬಾಜ್ ಯಾರದ್ದೋ ಜೊತೆ ಸುತ್ತಾಡುತ್ತಿದ್ದಾರೆ, ಯಾರನ್ನೋ ಭೇಟಿ ಮಾಡುತ್ತಾರೆ ಎನ್ನುವ ವಿಚಾರ ಸಲ್ಮಾನ್ ಖಾನ್​ಗೆ ತಿಳಿದಿತ್ತು. ಆದರೆ, ಅದು ಯಾರು ಅನ್ನೋ ವಿಚಾರ ಗೊತ್ತಿರಲಿಲ್ಲ.

ಸಲ್ಮಾನ್ ಖಾನ್​ಗೆ ಗೊತ್ತೇ ಇರಲಿಲ್ಲ ಅರ್ಬಾಜ್ ಖಾನ್ ಲವ್​ ಸ್ಟೋರಿ; ಸಲ್ಲು ರಿಯಾಕ್ಷನ್ ಹೇಗಿತ್ತು?
ಅರ್ಬಾಜ್ ಮದುವೆಯಲ್ಲಿ ಸಲ್ಲು ಕುಟುಂಬ
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 09, 2024 | 12:00 PM

Share

ಮಲೈಕಾ ಅರೋರಾ ಮಾಜಿ ಪತಿ, ಸಲ್ಮಾನ್ ಖಾನ್ (Salman Khan) ಸಹೋದರ ಅರ್ಬಾಜ್ ಖಾನ್ ಕಳೆದ ವರ್ಷ ಡಿಸೆಂಬರ್ ಅಂತ್ಯಕ್ಕೆ ಎರಡನೇ ವಿವಾಹ ಆದರು. ಮೇಕಪ್​ ಆರ್ಟಿಸ್ಟ್ ಆಗಿರುವ ಶುರಾ ಖಾನ್ ಜೊತೆ ಅವರ ವಿವಾಹ ಕಾರ್ಯ ನೆರವೇರಿತ್ತು. ಅವರು ಮತ್ತೆ ಸಂಸಾರ ಜೀವನ ಆರಂಭಿಸಿರುವುದಕ್ಕೆ ಸಹೋದರರಾದ ಸಲ್ಮಾನ್ ಖಾನ್, ಸೋಹೈಲ್ ಖಾನ್ ಸಂತಸ ವ್ಯಕ್ತಪಡಿಸಿದ್ದರು. ಅಚ್ಚರಿಯ ವಿಚಾರ ಎಂದರೆ ಅರ್ಬಾಜ್ ಡೇಟಿಂಗ್ ವಿಚಾರ ಸಲ್ಮಾನ್ ಖಾನ್ ಹಾಗೂ ಸೋಹೈಲ್ ಖಾನ್​ಗೆ ಗೊತ್ತೇ ಇರಲಿಲ್ಲ. ಈ ವಿಚಾರವನ್ನು ಸಂದರ್ಶನ ಒಂದರಲ್ಲಿ ಅರ್ಬಾಜ್ ರಿವೀಲ್ ಮಾಡಿದ್ದಾರೆ.

ಅರ್ಬಾಜ್ ಯಾರದ್ದೋ ಜೊತೆ ಸುತ್ತಾಡುತ್ತಿದ್ದಾರೆ, ಯಾರನ್ನೋ ಭೇಟಿ ಮಾಡುತ್ತಾರೆ ಎನ್ನುವ ವಿಚಾರ ಸಲ್ಮಾನ್ ಖಾನ್​ಗೆ ತಿಳಿದಿತ್ತು. ಆದರೆ, ಅವರು ಯಾರು ಅನ್ನೋ ವಿಚಾರ ಗೊತ್ತಿರಲಿಲ್ಲ. ‘ಆರಂಭದಲ್ಲಿ ಅವರಿಗೆ ಈ ಬಗ್ಗೆ ಗೊತ್ತಿರಲಿಲ್ಲ. ನಾನು ಯಾರನ್ನೋ ಭೇಟಿ ಮಾಡುತ್ತಿದ್ದೇನೆ ಎಂಬುದಷ್ಟೇ ಅವರಿಗೆ ತಿಳಿದಿತ್ತು. ನಾನು ದೊಡ್ಡ ಸ್ಟೆಪ್ ತೆಗೆದುಕೊಳ್ಳುತ್ತಿದ್ದೇನೆ ಎನ್ನುವ ವಿಚಾರ ಗೊತ್ತಾದಾಗ ಅವರಿಗೆ ಖುಷಿ ಆಯಿತು. ಎರಡು ಪ್ರಬುದ್ಧ ವ್ಯಕ್ತಿಗಳು ಈ ನಿರ್ಧಾರ ಮಾಡಿದ್ದಾರೆ ಎಂದಾಗ ಅದನ್ನು ಪ್ರೀತಿ ಪಾತ್ರರು ಬೆಂಬಲಿಸಿಯೇ ಬೆಂಬಲಿಸುತ್ತಾರೆ’ ಎಂದಿದ್ದಾರೆ ಅರ್ಬಾಜ್ ಖಾನ್.

ಅರ್ಬಾಜ್ ಲವ್​ ಸ್ಟೋರಿ

ಶುರಾ ಖಾನ್ ಅವರಿಗೂ ಚಿತ್ರರಂಗದ ಜೊತೆ ನಂಟಿದೆ. ಬಾಲಿವುಡ್ ನಟಿ ರವೀನಾ ಟಂಡನ್​ ಹಾಗೂ ಅವರ ಮಗಳು ರಾಶಾ ತಡಾನಿ ಅವರ ಮೇಕಪ್ ಆರ್ಟಿಸ್ಟ್ ಆಗಿ ಶುರಾ ಕಾರ್ಯನಿರ್ವಹಿಸುತ್ತಿದ್ದಾರೆ. ‘ಪಾಟ್ನಾ ಶುಕ್ಲಾ’ ಸಿನಿಮಾದಲ್ಲಿ ಅರ್ಬಾಜ್ ಹಾಗೂ ರವೀನಾ ಒಟ್ಟಾಗಿ ನಟಿಸಿದ್ದರು. ಆಗ ಶುರಾ ಅವರನ್ನು ಭೇಟಿ ಆಗಿದ್ದರು ಅರ್ಬಾಜ್. ಇಬ್ಬರ ಮಧ್ಯೆ ಪ್ರೀತಿ ಬೆಳೆಯಿತು. ನಂತರ ಮದುವೆ ಆದರು.

ಮದುವೆಗೆ ಬಂದಿರಲಿಲ್ಲ ಮಲೈಕಾ

ಈ ಮೊದಲು ಅರ್ಬಾಜ್ ಹಾಗೂ ಮಲೈಕಾ ಅರೋರಾ ಮದುವೆ ಆಗಿದ್ದರು. ಆ ಬಳಿಕ ಇಬ್ಬರೂ ವಿಚ್ಛೇದನ ಪಡೆದರು. ಆದರೆ, ಈ ಮದುವೆಗೆ ಮಲೈಕಾ ಆಗಮಿಸಿರಲಿಲ್ಲ. ಇದು ಅನೇಕರಿಗೆ ಅಚ್ಚರಿ ಮೂಡಿಸಿತ್ತು. ಈ ಮದುವೆಯಲ್ಲಿ ರವೀನಾ ಟಂಡನ್, ರಾಶಾ, ಸಲ್ಮಾನ್ ಖಾನ್, ಸೋಹೈಲ್ ಖಾನ್, ಸಲೀಮ್ ಖಾನ್ ಮೊದಲಾದವರು ಹಾಜರಿ ಹಾಕಿದ್ದರು. ಸಲ್ಲು ಸಹೋದರಿ ಅರ್ಪಿತಾ ಖಾನ್ ಮನೆಯಲ್ಲಿ ವಿವಾಹ ಕಾರ್ಯ ನಡೆದಿತ್ತು.

ಇದನ್ನೂ ಓದಿ: ಎರಡನೇ ಮದುವೆ ಆದ ಸಲ್ಮಾನ್ ಖಾನ್ ಸಹೋದರ ಅರ್ಬಾಜ್; ಹಾರೈಸಿದ ಮಲೈಕಾ ಪುತ್ರ

ಸಿಕ್ಕಿಲ್ಲ ದೊಡ್ಡ ಗೆಲುವು

ಸಲ್ಮಾನ್ ಖಾನ್ ಅವರಿಗೆ ಚಿತ್ರರಂಗದಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ಅವರು ತುಂಬಾನೇ ಪ್ರಭಾವಶಾಲಿ ವ್ಯಕ್ತಿ ಆಗಿ ಬೆಳೆದು ನಿಂತಿದ್ದಾರೆ. ಅವರ ಸಿನಿಮಾಗಳಿಗೆ ದೊಡ್ಡ ಮಟ್ಟದಲ್ಲಿ ಬಿಸ್ನೆಸ್ ಮಾಡುವ ಶಕ್ತಿ ಇದೆ. ಆದರೆ, ಅರ್ಬಾಜ್ ಖಾನ್ ಬಳಿ ಅಷ್ಟು ಎತ್ತರಕ್ಕೆ ಬೆಳೆದು ನಿಲ್ಲೋಕೆ ಸಾಧ್ಯವಾಗಲೇ ಇಲ್ಲ. ಅವರು ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:59 am, Fri, 9 February 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು