AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಹಾಡು ಹೇಳಲು ಹಣ ಕೇಳಲ್ಲ ಅರಿಜಿತ್ ಸಿಂಗ್; ವಿವರಿಸಿದ ಗಾಯಕ

ಪ್ರಸಿದ್ಧ ಗಾಯಕ ಅರಿಜಿತ್ ಸಿಂಗ್ ಅವರು ಹಾಡುಗಳಿಗೆ ಹಣ ಪಡೆಯುವುದಿಲ್ಲ ಎಂದು ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಶೋಗಳಿಗೆ ಅವರು ಎಷ್ಟು ಚಾರ್ಜ್ ಮಾಡುತ್ತಾರೆ ಎಂಬ ಮಾಹಿತಿಯನ್ನು ಅವರ ಮ್ಯಾನೇಜರ್‌ನಿಂದ ಪಡೆಯಬಹುದು ಎಂದು ಹೇಳಿದ್ದಾರೆ. ಅವರ ಸರಳತೆ ಮತ್ತು ದಾನ ಕಾರ್ಯಗಳಿಗೆ ಅವರು ಹೆಸರುವಾಸಿಯಾಗಿದ್ದಾರೆ.

ಸಿನಿಮಾ ಹಾಡು ಹೇಳಲು ಹಣ ಕೇಳಲ್ಲ ಅರಿಜಿತ್ ಸಿಂಗ್; ವಿವರಿಸಿದ ಗಾಯಕ
ಅರಿಜಿತ್ ಸಿಂಗ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 13, 2025 | 6:30 AM

Share

ಗಾಯಕ ಅರಿಜಿತ್ ಸಿಂಗ್ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರು ಹಲವು ಸೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಹಲವು ಶೋಗಳನ್ನು ಅವರು ಆಯೋಜನೆ ಮಾಡುತ್ತಾರೆ. ಇದರೆಡರಿಂದಲೂ ಅರಿಜಿತ್ (Arijith Singh) ಅವರು ಸಾಕಷ್ಟು ಹಣ ಮಾಡುತ್ತಾರೆ. ಆದರೂ ಸಿಂಪಲ್ ಆಗಿರೋದು ಅವರ ಹೆಚ್ಚುಗಾರಿಕೆ ಎನ್ನಬಹುದು. ಅವರು ಹಾಡಿದ್ದಕ್ಕೆ ಯಾವುದೇ ಹಣ ಚಾರ್ಜ್ ಮಾಡುವುದಿಲ್ಲವಂತೆ. ಈ ಬಗ್ಗೆ ಅವರು ಹೇಳಿಕೊಂಡಿದ್ದರು.

ಅರಿಜಿತ್ ಸಿಂಗ್ ಅವರು ಎಷ್ಟು ಹಣವನ್ನು ಪ್ರತಿ ಸಾಂಗ್ ಗೆ ಚಾರ್ಜ್ ಮಾಡುತ್ತಾರೆ ಎಂಬ ಬಗ್ಗೆ ಚರ್ಚೆಗಳು ಮೊದಲಿನಿಂದಲೂ ಇವೆ. ಇದಕ್ಕೆ ಅವರ ಕಡೆಯಿಂದ ಸ್ಪಷ್ಟ ಉತ್ತರ ಸಿಕ್ಕಿರಲಿಲ್ಲ. ಈಗ ಸಂದರ್ಶನ ಒಂದರಲ್ಲಿ ಅವರಿಗೆ ಈ ಬಗ್ಗೆ ಕೇಳಲಾಯಿತು. ಇದಕ್ಕೆ ಅವರು ಅಡ್ಡ ಗೋಡೆಯ ಮೇಲೆ ದೀಪ ಇಟ್ಟಂತೆ ಉತ್ತರಿಸಿದರು. ಆದರೆ, ಅವರು ಒಂದು ಅಚ್ಚರಿಯ ವಿಚಾರ ರಿವೀಲ್ ಮಾಡಿದರು.

ಇದನ್ನೂ ಓದಿ
Image
ಶಿವು ತಾಯಿಯಾಗಿ ಗುರುತಿಸಿದ್ರು; 80ರ ದಶಕದ ಕಥೆ ಹೇಳಿದ್ದ ಪಾರ್ವತಮ್ಮ
Image
ಶಿವಣ್ಣ ಹುಟ್ಟಿದ ಬಳಿಕ ಸಂಜೆಯಿಂದ ಬೆಳಗ್ಗಿನವರೆಗೆ ಸ್ವೀಟ್ ಹಂಚಿದ್ದ ರಾಜ್​
Image
ದಳಪತಿ ವಿಜಯ್ ಚಿತ್ರದಲ್ಲಿ ನನ್ನ ಪಾತ್ರ ವೇಸ್ಟ್ ಮಾಡಿದರು; ಸಂಜಯ್ ದತ್ ಬೇಸರ
Image
ನಟ ದರ್ಶನ್ ಬಳಿಯೂ ಇತ್ತು ಹಮ್ಮರ್; ಮಾರಿದ್ದು ಏಕೆ?

‘ಅರಿಜಿತ್ ಸಿಂಗ್ ಅವರು ಹಾಡು ಹಾಡಿದ್ದಕ್ಕೆ ಎಷ್ಟು ಹಣ ಪಡೆಯುತ್ತಾರೆ’ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ನಾನು ಹಾಡು ಹೇಳಲು ಯಾವುದೇ ಹಣ ಚಾರ್ಜ್ ಮಾಡೋದಿಲ್ಲ. ಆದಾಗ್ಯೂ ನಾನು ಹಾಡಿದ್ದಕ್ಕೆ ಅವರೇ ಹಣ ನೀಡುತ್ತಾರೆ’ ಎಂದು ಅರಿಜಿತ್ ಸಿಂಗ್ ಅವರು ಹೇಳಿದರು. ಅಂದರೆ ಅರಿಜಿತ್ ಸಿಂಗ್ ಅವರು ಹಾಡು ಹೇಳುವುದಕ್ಕೂ ಮೊದಲು ಸಂಭಾವನೆ ಬಗ್ಗೆ ಮಾತನಾಡೋದಿಲ್ಲ. ‘ನೀವೆ ಎಷ್ಟು ಹಣ ಎಂದು ನೀಡಿ’ ಎಂದು ಕೇಳಬಹುದು.

ಇನ್ನು ಶೋಗಳಿಗೆ ಎಷ್ಟು ಚಾರ್ಜ್ ಮಾಡುತ್ತಾರೆ ಎಂಬುದನ್ನು ಅರಿಜಿತ್ ಸಿಂಗ್ ಅವರು ರಿವೀಲ್ ಮಾಡಿಲ್ಲ. ಇದಕ್ಕಾಗಿ ಮ್ಯಾನೇಜರ್​ನ ಕಾಂಟ್ಯಾಕ್ಟ್ ಮಾಡಿ ಎಂದು ಹೇಳಿದ್ದಾರೆ. ಅರಿಜಿತ್ ಸಿಂಗ್ ಅವರು ಒಂದು ಶೋ ನಡೆಸಲು ಕೋಟ್ಯಂತರ ರೂಪಾಯಿ ಪಡೆದುಕೊಳ್ಳುತ್ತಾರೆ.

ಇದನ್ನೂ ಓದಿ: ರೆಸ್ಟೋರೆಂಟ್ ಓಪನ್ ಮಾಡಿದ ಅರಿಜಿತ್ ಸಿಂಗ್; ಊಟದ ಬೆಲೆ ಕೇವಲ 40 ರೂಪಾಯಿ

ಅರಿಜಿತ್ ಸಿಂಗ್ ಅವರು ಪಶ್ಚಿಮ ಬಂಗಾಳದವರು. ಅವರು ಆಗಾಗ ತಮ್ಮ ಹುಟ್ಟೂರಲ್ಲಿ ಕಾಣಿಸಿಕೊಳ್ಳುತ್ತಾರೆ. ಅಲ್ಲಿ ಅವರು ಸ್ಕೂಟರ್​ನಲ್ಲಿ ಓಡಾಡುತ್ತಾರೆ. ಬಡವರಿಗೋಸ್ಕರ ಅವರು ಅಲ್ಲಿ ಹೋಟಲ್ ಆರಂಭಿಸಿದ್ದು, ಕಡಿಮೆ ಬೆಲೆಯಲ್ಲಿ ಊಟ ನೀಡುತ್ತಿದ್ದಾರೆ. ಎಷ್ಟೇ ಹಣ ಮಾಡಿದರೂ ಅವರು ಯಾವಾಗಲೂ ದವಲತ್ತು ತೋರಿಸುವ ಕೆಲಸ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ