AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸ್ಟೋರೆಂಟ್ ಓಪನ್ ಮಾಡಿದ ಅರಿಜಿತ್ ಸಿಂಗ್; ಊಟದ ಬೆಲೆ ಕೇವಲ 40 ರೂಪಾಯಿ

Arijit Singh: ಭಾರತದ ಖ್ಯಾತ ಗಾಯಕ ಅರಿಜಿತ್ ಸಿಂಗ್. ಅವರ ಒಂದು ಲೈವ್ ಶೋಗೆ ಲಕ್ಷಾಂತರ ಮಂದಿ ಟಿಕೆಟ್ ಖರೀದಿಸಿ ಬರುತ್ತಾರೆ. ಆದರೆ ಅರಿಜಿತ್ ದುಂದು ವೆಚ್ಚಕ್ಕಲ್ಲದೆ ತಮ್ಮ ಸರಳತೆಯಿಂದ ಜನಪ್ರಿಯರು. ಹಲವು ಸೆಲೆಬ್ರಿಟಿಗಳ ರೀತಿಯಲ್ಲಿ ಅರಿಜಿತ್ ಸಹ ಹೋಟೆಲ್ ಬ್ಯುಸಿನೆಸ್​ಗೆ ಕಾಲಿಟ್ಟಿದ್ದಾರೆ. ಆದರೆ ಅತ್ಯಂತ ಕಡಿಮೆ ಬೆಲೆಯಲ್ಲಿ ಊಟ ನೀಡುತ್ತಿದ್ದಾರೆ ಅರಿಜಿತ್.

ರೆಸ್ಟೋರೆಂಟ್ ಓಪನ್ ಮಾಡಿದ ಅರಿಜಿತ್ ಸಿಂಗ್; ಊಟದ ಬೆಲೆ ಕೇವಲ 40 ರೂಪಾಯಿ
Arijit Singh
 ಶ್ರೀಲಕ್ಷ್ಮೀ ಎಚ್
| Edited By: |

Updated on: May 10, 2025 | 6:56 PM

Share

ಸೆಲೆಬ್ರಿಟಿಗಳಿಗೆ ತಮ್ಮದೇ ಆದ ಉದ್ಯಮ ಹೊಂದಿರುತ್ತಾರೆ. ರೆಸ್ಟೋರೆಂಟ್​ನ ಆರಂಭಿಸಿ ಅಲ್ಲಿ ಊಟಕ್ಕೆ ದುಬಾರಿ ಬೆಲೆಯನ್ನು ನಿಗದಿ ಮಾಡೋದು ಗೊತ್ತೇ ಇದೆ. ಈಗ ಖ್ಯಾತ ಗಾಯಕ ಅರಿಜಿತ್ ಸಿಂಗ್ ಕೂಡ ಹೋಟೆಲ್ ಆರಂಭಿಸಿದ್ದಾರೆ. ಹಾಗಂತ ಇದ್ಯಾವುದೂ ದುಬಾರಿ ಹೋಟೆಲ್ ಅಲ್ಲ. ಇಲ್ಲಿ ಒಂದು ಊಟಕ್ಕೆ ಅವರು ಚಾರ್ಜ್ ಮಾಡೋದು ಕೇವಲ 40 ರೂಪಾಯಿ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ. ಒಳ್ಳೆಯ ಗುಣಮಟ್ಟದ ಊಟದ ಜೊತೆಗೆ ಕಡಿಮೆ ಬೆಲೆಯಲ್ಲಿ ಆಹಾರ ದೊರೆಯುವಂತೆ ಮಾಡುವುದು ಅವರ ಉದ್ದೇಶ.

ಅರಿಜಿತ್ ಸಿಂಗ್ ಅವರ ಹುಟ್ಟೂರು ಪಶ್ಚಿಮ ಬಂಗಾಳದ ಮುರ್ಷಿದಾ ಬಾದ್​ನವರು. ಅವರು ಹುಟ್ಟೂರಿಗೆ ಏನನ್ನಾದರೂ ಮಾಡಬೇಕು ಎಂದು ಕನಸು ಕಂಡವರು. ಆ ಕನಸು ಈಗ ಈಡೇರಿದೆ. ಸಾಮಾನ್ಯ ಜನರಿಗೆ ಊಟ ಕೊಡುವ ಉದ್ದೇವನ್ನು ಅವರು ಹೊಂದಿದ್ದಾರೆ. ವಿಶೇಷ ಎಂದರೆ ಅರಿಜಿತ್ ಸಿಂಗ್ ತಂದೆ ಗುರುದಯಾಳ ಸಿಂಗ್ ಅವರು ರೆಸ್ಟೋರೆಂಟ್​ನ ಉದ್ಯಮ ಹೊಂದಿದ್ದಾರೆ.

ಅರಿಜಿತ್ ಸಿಂಗ್ ರೆಸ್ಟೋರೆಂಟ್​ನಲ್ಲಿ ಒಂದು ಊಟದ ಬೆಲೆ 40 ರೂಪಾಯಿ ಮಾತ್ರ. ಹಾಗಂದ ಮಾತ್ರಕ್ಕೆ ಎಲ್ಲರಿಗೂ ಇಲ್ಲಿ 40 ರೂಪಾಯಿ ಅಲ್ಲ. ವಿದ್ಯಾರ್ಥಿಗಳಿಗೆ 40 ರೂಪಾಯಿಯಲ್ಲಿ ಊಟ ಸಿಗಲಿದೆ. ಇದರ ಜೊತೆಗೆ ಅಗತ್ಯ ಇರುವವರಿಗೂ ಕಡಿಮೆ ಬೆಲೆಯಲ್ಲಿ ಆಹಾರ ದೊರೆಯಲಿದೆ. ಈ ವಿಚಾರಕ್ಕೆ ಅವರು ಮೆಚ್ಚುಗೆ ಪಡೆದಿದ್ದಾರೆ.

ಇದನ್ನೂ ಓದಿ:ಮದುವೆಯಲ್ಲಿ ಹಾಡೋಕೆ ಅರಿಜಿತ್ ಸಿಂಗ್ ಪಡೆಯೋ ಹಣ ಎಷ್ಟು?

ಅರಿಜಿತ್ ಸಿಂಗ್ ಅವರಿಗೆ ದೇಶದ ಬಗ್ಗೆ ಅಪಾರ ಕಾಳಜಿ ಹಾಗೂ ಪ್ರೀತಿ ಇದೆ. ಅಬು ಧಾಬಿಯಲ್ಲಿ ಅವರ ಶೋ ಇತ್ತು. ಆದರೆ, ಪಾಕಿಸ್ತಾನ ಮತ್ತು ಭಾರತದ ದಾಳಿ ಬಳಿಕ ಈ ಶೋನ ಮುಂದಕ್ಕೆ ಹಾಕಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಮಾಹಿತಿ ನೀಡಿದ್ದಾರೆ. ಅಲ್ಲದೆ ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸೋದಾಗಿ ಅವರು ಹೇಳಿದ್ದಾರೆ.

ಅರಿಜಿತ್ ಸಿಂಗ್ ಅವರು 18ನೇ ವಯಸ್ಸಿಗೆ ವೃತ್ತಿ ಜೀವನ ಆರಂಭಿಸಿದರು. 300ಕ್ಕೂ ಅಧಿಕ ಹಾಡುಗಳನ್ನು ಅವರು ಹಾಡಿದ್ದಾರೆ. ಕನ್ನಡದಲ್ಲಿ ಅವರು ಹಾಡುಗಳನ್ನು ಹಾಡಿದ್ದು ಕಡಿಮೆ ಎನ್ನಬಹುದು. ಆದರೆ, ಹಿಂದಿಯಲ್ಲಿ ಅವರ ಹಾಡಿಗೆ ದೊಡ್ಡ ಅಭಿಮಾನಿ ಬಳಗವೇ ಸೃಷ್ಟಿ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ