AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್? ಗಾಯಕನ ದೊಡ್ಡ ಹೆಜ್ಜೆ

ಅರಿಜಿತ್ ಸಿಂಗ್ ಗಾಯನಕ್ಕೆ ವಿದಾಯ ಹೇಳಿದ ನಂತರ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಸ್ವಂತ ರಾಜಕೀಯ ಪಕ್ಷ ಸ್ಥಾಪಿಸಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಇದು ಗಾಯನ ಲೋಕಕ್ಕೆ ಅಚ್ಚರಿ ತಂದಿದೆ. ತಮ್ಮ ಹುಟ್ಟೂರು ಮುರ್ಷಿದಾಬಾದ್‌ಗಾಗಿ ಸಾಮಾಜಿಕ ಕೆಲಸಗಳನ್ನು ಮಾಡಿರುವ ಅರಿಜಿತ್, ಈಗ ರಾಜಕೀಯದ ಮೂಲಕ ಮತ್ತಷ್ಟು ಜನ ಸೇವೆ ಮಾಡುವ ಕನಸು ಕಂಡಿದ್ದಾರೆ.

ರಾಜಕೀಯ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್? ಗಾಯಕನ ದೊಡ್ಡ ಹೆಜ್ಜೆ
ಅರಿಜಿತ್
ರಾಜೇಶ್ ದುಗ್ಗುಮನೆ
|

Updated on:Jan 30, 2026 | 7:01 AM

Share

ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ (Arijit Singh) ಅವರು ಇತ್ತೀಚೆಗೆ ಅಚ್ಚರಿಯ ನಿರ್ಧಾರ ತೆಗೆದುಕೊಂಡಿದ್ದರು. ಅವರು ಗಾಯನಕ್ಕೆ ಫುಲ್ ಸ್ಟಾಪ್ ಇಟ್ಟಿದ್ದರು. ಇದು ಅಚ್ಚರಿ ಮೂಡಿಸಿತ್ತು. ಈಗ ಅರಿಜಿತ್ ಸಿಂಗ್ ಅವರು ದೊಡ್ಡ ಹೆಜ್ಜೆ ಇಡಲು ಮುಂದಾಗಿದ್ದಾರೆ ಎಂದು ವರದಿ ಆಗಿದೆ. ಅವರು ರಾಜಕೀಯ ಪಕ್ಷ ಸ್ಥಾಪಿಸಿ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಎದುರಿಸಲಿದ್ದಾರಂತೆ. ಈ ವರದಿ ಅನೇಕರಿಗೆ ಅಚ್ಚರಿ ತರಿಸಿದೆ.

ಅರಿಜಿತ್ ಸಿಂಗ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಎನ್​​ಡಿಟಿವಿ ವರದಿ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಈ ವರ್ಷ ಚುನಾವಣೆ ನಡೆಯಲಿದೆ. ಆದರೆ, ಇದರಲ್ಲಿ ಸ್ಪರ್ಧಿಸುವ ಆಲೋಚನೆ ಅರಿಜಿತ್ ಸಿಂಗ್ ಅವರಿಗೆ ಇಲ್ಲ. ಒಂದು ಪಕ್ಷ ಕಟ್ಟಿ ಬೆಳೆಸಬೇಕು, ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದರೆ ಅದು ಸಣ್ಣ ವಿಷಯ ಅಲ್ಲ. ಅದಕ್ಕೆ ಸಾಕಷ್ಟು ಸಿದ್ಧತೆ ಬೇಕು. ಈ ಸಿದ್ಧತೆಯನ್ನು ಮಾಡಿಕೊಳ್ಳುವ ಆಲೋಚನೆಯಲ್ಲಿ ಅರಿಜಿತ್ ಸಿಂಗ್ ಇದ್ದಾರೆ.

ಸಾಮಾನ್ಯವಾಗಿ ನಟ-ನಟಿಯರು ರಾಜಕೀಯ ಪಕ್ಷ ಸ್ಥಾಪಿಸಿ ಚುನಾವಣೆಗೆ ಸ್ಪರ್ಧಿಸಿದ ಉದಾಹರಣೆ ಇದೆ. ಅದೇ ರೀತಿ ಕೆಲವು ಗಾಯಕರು ಒಂದು ಪಕ್ಷದ ಟಿಕೆಟ್ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದಿದೆ. ಆದರೆ, ಗಾಯಕನೋರ್ವ ಪಕ್ಷ ಸ್ಥಾಪಿಸುವ ಆಲೋಚನೆ ಮಾಡಿದ್ದು ಕಡಿಮೆ. ಈಗ ಅಂತಹ ಅಪರೂಪದ ಕೆಲಸಕ್ಕೆ ಅರಿಜಿತ್ ಸಿಂಗ್ ಕೈ ಹಾಕಿದ್ದಾರೆ.

ಇದನ್ನೂ ಓದಿ: 38ನೇ ವಯಸ್ಸಿಗೆ ನಿವೃತ್ತಿ ಘೋಷಿಸಿದ ಗಾಯಕ ಅರಿಜಿತ್ ಸಿಂಗ್​ರ ಮುಂದಿನ ಯೋಜನೆ ಏನು?

ಅರಿಜಿತ್ ಸಿಂಗ್ ಕೇವಲ ಗಾಯಕ ಮಾತ್ರ ಅಲ್ಲ. ಅವರು ಒಳ್ಳೆಯ ಮನಸ್ಸನ್ನು ಹೊಂದಿದ್ದಾರೆ. ಸಾಮಾಜಿಕ ಕೆಲಸಗಳನ್ನು ಮಾಡುತ್ತಾರೆ. ಅರಿಜಿತ್ ಸಿಂಗ್ ಪಶ್ಚಿಮ ಬಂಗಾಳದ ಮುರ್ಷಿದಾ ಬಾದ್​ನವರು. ಅವರು ಹುಟ್ಟೂರಿಗೆ ಏನನ್ನಾದರೂ ಮಾಡಬೇಕು ಎಂದು ಕನಸು ಕಂಡವರು. ಒಂದು ಹೊತ್ತಿನ ಊಟಕ್ಕೂ ಕಷ್ಟಪಡುವ ಜನರಿಗಾಗಿ ಅವರು ಇಲ್ಲಿ ರೆಸ್ಟೋರೆಂಟ್ ಆರಂಭಿಸಿದ್ದು, 40 ರೂಪಾಯಿಗೆ ಊಟ ನೀಡುವ ಕೆಲಸ ಮಾಡುತ್ತಿದ್ದಾರೆ. ಈಗ ಅವರು ರಾಜಕೀಯದ ಮೂಲಕ ತಮ್ಮ ಕೆಲಸ ಮುಂದುವರಿಸೋ ಆಲೋಚನೆಯಲ್ಲಿ ಇದ್ದಾರೆ. ಈ ಕಾರಣದಿಂದಲೇ ಅವರು ಸಂಗೀತ ಜಗತ್ತನ್ನು ತೊರೆದಿರಬಹುದು ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:01 am, Fri, 30 January 26

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ