AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಂತ್ಯವನ್ನು ಒಪ್ಪಿಕೊಳ್ಳಿ’: ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅರ್ಜುನ್ ಕಪೂರ್ ಮನಸ್ಥಿತಿ

ನಟ ಅರ್ಜುನ್ ಕಪೂರ್ ಅವರು ನಿರಂತರ ಟ್ರೋಲ್ ಕಾಟದಿಂದ ತೊಂದರೆಗೆ ಒಳಗಾಗಿದ್ದಾರೆ. ಅವರ ಬಗ್ಗೆ ಅಭಿಮಾನಿಗಳು ಈಗ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇದ್ದಕ್ಕಿದ್ದಂತೆ ಅರ್ಜುನ್ ಕಪೂರ್ ಅವರು ಅಂತ್ಯದ ಬಗ್ಗೆ ಸ್ಟೋರಿ ಪೋಸ್ಟ್ ಮಾಡಿದ್ದಾರೆ. ಇನ್ನಾದರೂ ಟ್ರೋಲಿಂಗ್ ನಿಲ್ಲಿಸಿ ಎಂದು ನೆಟ್ಟಿಗರಿಗೆ ಹಲವರು ಎಚ್ಚರಿಕೆ ನೀಡಿದ್ದಾರೆ.

‘ಅಂತ್ಯವನ್ನು ಒಪ್ಪಿಕೊಳ್ಳಿ’: ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅರ್ಜುನ್ ಕಪೂರ್ ಮನಸ್ಥಿತಿ
Arjun Kapoor (1)Image Credit source: Instagram/ArjunKapoor
ಮದನ್​ ಕುಮಾರ್​
|

Updated on: Apr 09, 2026 | 7:31 PM

Share

ಬಾಲಿವುಡ್ ನಟ ಅರ್ಜುನ್ ಕಪೂರ್ (Arjun Kapoor) ಕಳೆದ ಕೆಲವು ಸಮಯದಿಂದ ಸೋಷಿಯಲ್ ಮೀಡಿಯಾದಲ್ಲಿ ಸತತವಾಗಿ ಟ್ರೋಲಿಂಗ್ ಮತ್ತು ನೆಗೆಟಿವಿಟಿಗೆ ಗುರಿಯಾಗುತ್ತಿದ್ದಾರೆ. ಇತ್ತೀಚೆಗಷ್ಟೇ ತಮ್ಮ ತಾಯಿಯ ಜನ್ಮದಿನದಂದು ಭಾವುಕ ಪೋಸ್ಟ್ ಹಂಚಿಕೊಂಡಿದ್ದ ಅವರು, ಜೀವನವು ತಮಗೆ ‘ಕ್ರೂರವಾಗಿ ವರ್ತಿಸುತ್ತಿದೆ’ ಎಂದು ಬರೆದುಕೊಂಡಿದ್ದರು. ಇದೀಗ ಅರ್ಜುನ್ ಹಂಚಿಕೊಂಡಿರುವ ಮತ್ತೊಂದು ಗೂಢಾರ್ಥದ ಸಂದೇಶವು ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ.

ಗುರುವಾರ (ಏಪ್ರಿಲ್ 9) ಅರ್ಜುನ್ ಕಪೂರ್ ಅವರು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಒಂದು ಸಾಲನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ‘ಅಂತ್ಯವನ್ನು ಒಪ್ಪಿಕೊಳ್ಳಿ, ಅದು ನೀವು ಬಯಸಿದ ರೀತಿಯಲ್ಲಿ ಕೊನೆಗೊಳ್ಳದಿದ್ದರೂ ಸಹ’ ಎಂದು ಬರೆಯಲಾಗಿದೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ, ಅರ್ಜುನ್ ಯಾವುದೋ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆಯೇ ಅಥವಾ ಅವರು ಮಾನಸಿಕವಾಗಿ ಕುಗ್ಗಿದ್ದಾರೆಯೇ ಎಂಬ ಚರ್ಚೆ ಆರಂಭವಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಅರ್ಜುನ್ ಅವರ ಈ ಪೋಸ್ಟ್ ಬಗ್ಗೆ ನೆಟ್ಟಿಗರು ಚರ್ಚೆ ಮಾಡುತ್ತಿದ್ದಾರೆ. ನಟನ ಪರವಾಗಿ ಅನೇಕರು ಧ್ವನಿ ಎತ್ತಿದ್ದಾರೆ. ‘ಅರ್ಜುನ್ ಈ ವಿಷಪೂರಿತ ಚಿತ್ರರಂಗದಿಂದ ಹೊರಬಂದು ಲೈಮ್‌ಲೈಟ್‌ನಿಂದ ದೂರವಿರುವುದು ಅವರ ಆರೋಗ್ಯಕ್ಕೆ ಒಳ್ಳೆಯದು’ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ.

ಮತ್ತೊಬ್ಬ ಅಭಿಮಾನಿ, ‘ಒಬ್ಬರನ್ನು ಟ್ರೋಲ್ ಮಾಡುವುದಕ್ಕೂ ಒಂದು ಮಿತಿ ಇರುತ್ತದೆ. ಕಂಪ್ಯೂಟರ್ ಪರದೆಯ ಹಿಂದೆ ಕುಳಿತು ಟೀಕಿಸುವುದು ಸುಲಭ. ನಿಮಗೆ ಅವರ ನಟನೆ ಇಷ್ಟವಿಲ್ಲದಿದ್ದರೆ ಸಿನಿಮಾ ನೋಡಬೇಡಿ. ಆದರೆ ಸತತವಾಗಿ ನಿಂದಿಸುವುದು ಸರಿಯಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ‘ಅವರು ಮಾನಸಿಕವಾಗಿ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಅನಾಹುತ ಸಂಭವಿಸುವ ಮುನ್ನ ಟ್ರೋಲಿಂಗ್ ನಿಲ್ಲಿಸಿ’ ಎಂದು ಹಲವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಅರ್ಜುನ್ ಕಪೂರ್ ಟ್ರೋಲ್ ಮಾಡಿದವರಿಗೆ ತಂಗಿ ಜಾನ್ವಿಯ ಎಚ್ಚರಿಕೆ

ಅರ್ಜುನ್ ಕಪೂರ್ ಅವರ ವೃತ್ತಿಜೀವನವು ಸದ್ಯಕ್ಕೆ ಸಂಕಷ್ಟದಲ್ಲಿದೆ. 2025ರಲ್ಲಿ ಬಿಡುಗಡೆಯಾದ ‘ಮೇರೆ ಹಸ್ಬೆಂಡ್ ಕಿ ಬಿವಿ’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಹೀನಾಯವಾಗಿ ಸೋಲನುಭವಿಸಿತು. ಸುಮಾರು 12.85 ಕೋಟಿ ರೂಪಾಯಿ ಮಾತ್ರ ಗಳಿಸಿದ ಈ ಚಿತ್ರದ ನಂತರ ಅರ್ಜುನ್ ಯಾವುದೇ ಹೊಸ ಸಿನಿಮಾಗಳನ್ನು ಘೋಷಿಸಿಲ್ಲ. ಇದರಿಂದ ಅವರು ಕುಗ್ಗಿರುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us