AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಕಪೂರ್ ಅರೆಬೆತ್ತಲೆ ಫೋಟೋನ ಮಲೈಕಾ ವೈರಲ್ ಮಾಡಿದ ಪ್ರಕರಣ; ತಿರುಗೇಟು ಕೊಟ್ಟ ನಟ

ವಯಸ್ಸಿನ ಅಂತರದ ವಿಚಾರದಲ್ಲೇ ಇಬ್ಬರನ್ನೂ ಟ್ರೋಲ್ ಮಾಡಲಾಗುತ್ತದೆ. ಕೆಲವೊಮ್ಮೆ ಅರ್ಜುನ್ ಕಪೂರ್ ಅವರು ಟೀಕೆಗಳಿಗೆ ಉತ್ತರಿಸುವ ಕೆಲಸ ಮಾಡುತ್ತಾರೆ.

ಅರ್ಜುನ್ ಕಪೂರ್ ಅರೆಬೆತ್ತಲೆ ಫೋಟೋನ ಮಲೈಕಾ ವೈರಲ್ ಮಾಡಿದ ಪ್ರಕರಣ; ತಿರುಗೇಟು ಕೊಟ್ಟ ನಟ
ಅರ್ಜುನ್ ಕಪೂರ್-ಮಲೈಕಾ
ರಾಜೇಶ್ ದುಗ್ಗುಮನೆ
|

Updated on:May 30, 2023 | 7:52 AM

Share

ನಟ ಅರ್ಜುನ್ ಕಪೂರ್ (Arjun Kapoor) ಅವರು ಇತ್ತೀಚೆಗೆ ನಟನೆ ಮೂಲಕ, ಸಿನಿಮಾ ಮೂಲಕ ಸುದ್ದಿ ಆಗುತ್ತಿಲ್ಲ. ಅವರೇನಿದ್ದರೂ ನಟಿ ಮಲೈಕಾ ಅರೋರಾ ವಿಚಾರದಲ್ಲೇ ಚರ್ಚೆ ಆಗುತ್ತಿರುತ್ತಾರೆ. ಸದಾ ಮಲೈಕಾ ಹಿಂದೆ ಸುತ್ತಾಡುತ್ತಾ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಇವರಿಬ್ಬರೂ ಮದುವೆ ಆಗುತ್ತಾರೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಫ್ಯಾನ್ಸ್ ಊಹಿಸಿದ ರೀತಿ ಆಗಿಲ್ಲ. ಈ ಜೋಡಿಯನ್ನು ಆಗಾಗ ಟ್ರೋಲ್ ಮಾಡಲಾಗುತ್ತದೆ. ಇತ್ತೀಚೆಗೆ ಅರ್ಜುನ್ ಕಪೂರ್ ಅವರ ಅರೆಬೆತ್ತಲೆ ಫೋಟೋ ಹಾಕಿ ಮಲೈಕಾ ಅರೋರಾ (Malaika Arora) ಟ್ರೋಲ್ ಆಗಿದ್ದರು. ಇದಕ್ಕೆ ನಟನ ಕಡೆಯಿಂದ ಪ್ರತಿಕ್ರಿಯೆ ಬಂದಿದೆ.

ಮಲೈಕಾ ಅರೋರಾಗಿಂತ ಅರ್ಜುನ್ ಕಪೂರ್ 12 ವರ್ಷ ಸಣ್ಣವರು. ಇವರ ಮಧ್ಯೆ ದೊಡ್ಡ ವಯಸ್ಸಿನ ಅಂತರ ಇದೆ. ಆದರೆ, ಇದು ಎಂದಿಗೂ ಅವರ ಪ್ರೀತಿಗೆ ಅಡ್ಡಿ ಆಗಲೇ ಇಲ್ಲ. ಇಬ್ಬರೂ ಹಾಯಾಗಿ ಸುತ್ತಾಡಿಕೊಂಡಿದ್ದಾರೆ. ವಯಸ್ಸಿನ ಅಂತರದ ವಿಚಾರದಲ್ಲೇ ಇಬ್ಬರನ್ನೂ ಟ್ರೋಲ್ ಮಾಡಲಾಗುತ್ತದೆ. ಆದರೆ, ಇದಕ್ಕೆಲ್ಲ ಅವರು ತಲೆಕೆಡಿಸಿಕೊಳ್ಳುವವರೇ ಅಲ್ಲ. ಆದಾಗ್ಯೂ ಕೆಲವೊಮ್ಮೆ ಅರ್ಜುನ್ ಕಪೂರ್ ಅವರು ಟೀಕೆಗಳಿಗೆ ಉತ್ತರಿಸುವ ಕೆಲಸ ಮಾಡುತ್ತಾರೆ.

ಮಲೈಕಾ ಅವರು ಇತ್ತೀಚೆಗೆ ಫೋಟೋ ಒಂದನ್ನು ಇನ್​ಸ್ಟಾಗ್ರಾಮ್ ಸ್ಟೇಟಸ್​​ನಲ್ಲಿ ಪೋಸ್ಟ್ ಮಾಡಿದ್ದರು. ಈ ಫೋಟೋದಲ್ಲಿ ಅರ್ಜುನ್ ಕಪೂರ್ ಅವರ ಖಾಸಗಿ ಭಾಗವನ್ನು ದಿಂಬಿನಿಂದ ಮುಚ್ಚಲಾಗಿತ್ತು. ಉಳಿದಂತೆ ಯಾವುದೇ ಬಟ್ಟೆ ಇರಲಿಲ್ಲ. ಈ ರೀತಿಯ ಅರೆಬೆತ್ತಲೆ ಫೋಟೋ ಪೋಸ್ಟ್ ಮಾಡುವ ಅಗತ್ಯ ಏನಿತ್ತು ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಮಲೈಕಾ ಬಗ್ಗೆ ಸಾಕಷ್ಟು ಮಂದಿ ಟೀಕೆ ಮಾಡಿದ್ದರು. ನಾಚಿಕೆ ಮಾನಾ ಮರ್ಯಾದೆ ಇಲ್ಲವೇ ಎಂದು ನಟಿಯನ್ನು ಅನೇಕರು ಪ್ರಶ್ನಿಸಿದ್ದರು.

ಇದನ್ನೂ ಓದಿ: ಮಾಜಿ ಗಂಡನನ್ನು ತಬ್ಬಿಕೊಂಡ ಮಲೈಕಾ ಅರೋರಾ; ಬಗೆಬಗೆಯಲ್ಲಿ ಕಮೆಂಟ್​ ಮಾಡಿದ ನೆಟ್ಟಿಗರು

ಮಲೈಕಾ ಬಗ್ಗೆ ಮಾತನಾಡಿದ್ದನ್ನು ಅರ್ಜುನ್ ಕಪೂರ್ ಬಳಿ ಸಹಿಸಿಕೊಳ್ಳೋಕೆ ಸಾಧ್ಯವಾಗಲಿಲ್ಲ. ಅವರು ಗೂಡಾರ್ಥದಲ್ಲಿ ಸ್ಟೇಟಸ್​ ಒಂದನ್ನು ಹಾಕಿದ್ದಾರೆ. ‘ಅಟೆಂಕ್ಷನ್​ಗಿಂತ ಶಾಂತಿಯನ್ನು ಆರಿಸಿ; ಮೌನವಾಗಿ ವಿಜೃಂಭಿಸಿ’ ಎಂದಿದ್ದಾರೆ. ಈ ಮೂಲಕ ಈ ರೀತಿಯ ಟ್ರೋಲ್ ಬಗ್ಗೆ ಗಮನ ನೀಡುವುದಿಲ್ಲ ಎಂಬುದನ್ನು ಅವರು ಪರೋಕ್ಷವಾಗಿ ಹೇಳಿದ್ದಾರೆ ಎಂದು ಅನೇಕರು ಊಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Tue, 30 May 23

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ