AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಕಪೂರ್ ಅರೆಬೆತ್ತಲೆ ಫೋಟೋನ ಮಲೈಕಾ ವೈರಲ್ ಮಾಡಿದ ಪ್ರಕರಣ; ತಿರುಗೇಟು ಕೊಟ್ಟ ನಟ

ವಯಸ್ಸಿನ ಅಂತರದ ವಿಚಾರದಲ್ಲೇ ಇಬ್ಬರನ್ನೂ ಟ್ರೋಲ್ ಮಾಡಲಾಗುತ್ತದೆ. ಕೆಲವೊಮ್ಮೆ ಅರ್ಜುನ್ ಕಪೂರ್ ಅವರು ಟೀಕೆಗಳಿಗೆ ಉತ್ತರಿಸುವ ಕೆಲಸ ಮಾಡುತ್ತಾರೆ.

ಅರ್ಜುನ್ ಕಪೂರ್ ಅರೆಬೆತ್ತಲೆ ಫೋಟೋನ ಮಲೈಕಾ ವೈರಲ್ ಮಾಡಿದ ಪ್ರಕರಣ; ತಿರುಗೇಟು ಕೊಟ್ಟ ನಟ
ಅರ್ಜುನ್ ಕಪೂರ್-ಮಲೈಕಾ
Follow us
ರಾಜೇಶ್ ದುಗ್ಗುಮನೆ
|

Updated on:May 30, 2023 | 7:52 AM

ನಟ ಅರ್ಜುನ್ ಕಪೂರ್ (Arjun Kapoor) ಅವರು ಇತ್ತೀಚೆಗೆ ನಟನೆ ಮೂಲಕ, ಸಿನಿಮಾ ಮೂಲಕ ಸುದ್ದಿ ಆಗುತ್ತಿಲ್ಲ. ಅವರೇನಿದ್ದರೂ ನಟಿ ಮಲೈಕಾ ಅರೋರಾ ವಿಚಾರದಲ್ಲೇ ಚರ್ಚೆ ಆಗುತ್ತಿರುತ್ತಾರೆ. ಸದಾ ಮಲೈಕಾ ಹಿಂದೆ ಸುತ್ತಾಡುತ್ತಾ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಇವರಿಬ್ಬರೂ ಮದುವೆ ಆಗುತ್ತಾರೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಫ್ಯಾನ್ಸ್ ಊಹಿಸಿದ ರೀತಿ ಆಗಿಲ್ಲ. ಈ ಜೋಡಿಯನ್ನು ಆಗಾಗ ಟ್ರೋಲ್ ಮಾಡಲಾಗುತ್ತದೆ. ಇತ್ತೀಚೆಗೆ ಅರ್ಜುನ್ ಕಪೂರ್ ಅವರ ಅರೆಬೆತ್ತಲೆ ಫೋಟೋ ಹಾಕಿ ಮಲೈಕಾ ಅರೋರಾ (Malaika Arora) ಟ್ರೋಲ್ ಆಗಿದ್ದರು. ಇದಕ್ಕೆ ನಟನ ಕಡೆಯಿಂದ ಪ್ರತಿಕ್ರಿಯೆ ಬಂದಿದೆ.

ಮಲೈಕಾ ಅರೋರಾಗಿಂತ ಅರ್ಜುನ್ ಕಪೂರ್ 12 ವರ್ಷ ಸಣ್ಣವರು. ಇವರ ಮಧ್ಯೆ ದೊಡ್ಡ ವಯಸ್ಸಿನ ಅಂತರ ಇದೆ. ಆದರೆ, ಇದು ಎಂದಿಗೂ ಅವರ ಪ್ರೀತಿಗೆ ಅಡ್ಡಿ ಆಗಲೇ ಇಲ್ಲ. ಇಬ್ಬರೂ ಹಾಯಾಗಿ ಸುತ್ತಾಡಿಕೊಂಡಿದ್ದಾರೆ. ವಯಸ್ಸಿನ ಅಂತರದ ವಿಚಾರದಲ್ಲೇ ಇಬ್ಬರನ್ನೂ ಟ್ರೋಲ್ ಮಾಡಲಾಗುತ್ತದೆ. ಆದರೆ, ಇದಕ್ಕೆಲ್ಲ ಅವರು ತಲೆಕೆಡಿಸಿಕೊಳ್ಳುವವರೇ ಅಲ್ಲ. ಆದಾಗ್ಯೂ ಕೆಲವೊಮ್ಮೆ ಅರ್ಜುನ್ ಕಪೂರ್ ಅವರು ಟೀಕೆಗಳಿಗೆ ಉತ್ತರಿಸುವ ಕೆಲಸ ಮಾಡುತ್ತಾರೆ.

ಮಲೈಕಾ ಅವರು ಇತ್ತೀಚೆಗೆ ಫೋಟೋ ಒಂದನ್ನು ಇನ್​ಸ್ಟಾಗ್ರಾಮ್ ಸ್ಟೇಟಸ್​​ನಲ್ಲಿ ಪೋಸ್ಟ್ ಮಾಡಿದ್ದರು. ಈ ಫೋಟೋದಲ್ಲಿ ಅರ್ಜುನ್ ಕಪೂರ್ ಅವರ ಖಾಸಗಿ ಭಾಗವನ್ನು ದಿಂಬಿನಿಂದ ಮುಚ್ಚಲಾಗಿತ್ತು. ಉಳಿದಂತೆ ಯಾವುದೇ ಬಟ್ಟೆ ಇರಲಿಲ್ಲ. ಈ ರೀತಿಯ ಅರೆಬೆತ್ತಲೆ ಫೋಟೋ ಪೋಸ್ಟ್ ಮಾಡುವ ಅಗತ್ಯ ಏನಿತ್ತು ಎಂದು ಅನೇಕರು ಪ್ರಶ್ನೆ ಮಾಡಿದ್ದರು. ಮಲೈಕಾ ಬಗ್ಗೆ ಸಾಕಷ್ಟು ಮಂದಿ ಟೀಕೆ ಮಾಡಿದ್ದರು. ನಾಚಿಕೆ ಮಾನಾ ಮರ್ಯಾದೆ ಇಲ್ಲವೇ ಎಂದು ನಟಿಯನ್ನು ಅನೇಕರು ಪ್ರಶ್ನಿಸಿದ್ದರು.

ಇದನ್ನೂ ಓದಿ: ಮಾಜಿ ಗಂಡನನ್ನು ತಬ್ಬಿಕೊಂಡ ಮಲೈಕಾ ಅರೋರಾ; ಬಗೆಬಗೆಯಲ್ಲಿ ಕಮೆಂಟ್​ ಮಾಡಿದ ನೆಟ್ಟಿಗರು

ಮಲೈಕಾ ಬಗ್ಗೆ ಮಾತನಾಡಿದ್ದನ್ನು ಅರ್ಜುನ್ ಕಪೂರ್ ಬಳಿ ಸಹಿಸಿಕೊಳ್ಳೋಕೆ ಸಾಧ್ಯವಾಗಲಿಲ್ಲ. ಅವರು ಗೂಡಾರ್ಥದಲ್ಲಿ ಸ್ಟೇಟಸ್​ ಒಂದನ್ನು ಹಾಕಿದ್ದಾರೆ. ‘ಅಟೆಂಕ್ಷನ್​ಗಿಂತ ಶಾಂತಿಯನ್ನು ಆರಿಸಿ; ಮೌನವಾಗಿ ವಿಜೃಂಭಿಸಿ’ ಎಂದಿದ್ದಾರೆ. ಈ ಮೂಲಕ ಈ ರೀತಿಯ ಟ್ರೋಲ್ ಬಗ್ಗೆ ಗಮನ ನೀಡುವುದಿಲ್ಲ ಎಂಬುದನ್ನು ಅವರು ಪರೋಕ್ಷವಾಗಿ ಹೇಳಿದ್ದಾರೆ ಎಂದು ಅನೇಕರು ಊಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:04 am, Tue, 30 May 23

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ