AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಸಿಕ್ತನಾಗಿ ಬಂದ ಅರ್ಜುನ್ ಕಪೂರ್; ರಣವೀರ್ ಎದುರು ವಿಲನ್ ಆದ ಬಾಲಿವುಡ್ ಹೀರೋ

‘ರೋಹಿತ್ ಶೆಟ್ಟಿ ನಿರ್ದೇಶನದ ‘ಸಿಂಗಂ 3’ ಚಿತ್ರದಲ್ಲಿ ಅರ್ಜುನ್ ಕಪೂರ್ ಖಡಕ್ ವಿಲನ್ ಪಾತ್ರ ಮಾಡುತ್ತಿದ್ದಾರೆ. ಪೋಸ್ಟರ್​ನಲ್ಲಿ ಅರ್ಜುನ್ ಕಪೂರ್ ಮುಖ ರಕ್ತದಲ್ಲಿ ತೊಯ್ದು ಹೋಗಿದೆ. ಹಿಂಭಾಗದಲ್ಲಿ ಯಾರೋ ಮಚ್ಚು ಹಿಡಿದು ನಿಂತಿದ್ದಾರೆ. ಮತ್ತೊಂದು ಪೋಸ್ಟರ್​ನಲ್ಲಿ ರಣವೀರ್ ಸಿಂಗ್ ಹಾಗೂ ಅರ್ಜುನ್ ಕಪೂರ್ ಮುಖಾಮುಖಿ ಆಗಿದ್ದಾರೆ.

ರಕ್ತಸಿಕ್ತನಾಗಿ ಬಂದ ಅರ್ಜುನ್ ಕಪೂರ್; ರಣವೀರ್ ಎದುರು ವಿಲನ್ ಆದ ಬಾಲಿವುಡ್ ಹೀರೋ
ಅರ್ಜುನ್ ಕಪೂರ್
ರಾಜೇಶ್ ದುಗ್ಗುಮನೆ
|

Updated on: Feb 14, 2024 | 10:51 AM

Share

‘ಸಿಂಗಂ 3’ ಸಿನಿಮಾ (Singham Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ರೋಹಿತ್ ಶೆಟ್ಟಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಜುನ್ ಕಪೂರ್ ಅವರು ವಿಲನ್ ಪಾತ್ರ ಮಾಡುತ್ತಾರೆ ಎನ್ನುವ ಸುದ್ದಿ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈ ವಿಚಾರ ಈಗ ಅಧಿಕೃತ ಆಗಿದೆ. ರೋಹಿತ್ ಶೆಟ್ಟಿ ಅವರು ಈಗ ಸಿನಿಮಾದ ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಈ ಪೋಸ್ಟರ್​ನಲ್ಲಿ ಅರ್ಜುನ್ ಕಪೂರ್ ಲುಕ್ ಗಮನ ಸೆಳೆದಿದೆ.

ರೋಹಿತ್ ಶೆಟ್ಟಿ ನಿರ್ದೇಶನದ ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್ ಇರುತ್ತದೆ. ಅವರ ನಿರ್ದೇಶನದ ಯಶಸ್ವಿ ಸರಣಿ ‘ಸಿಂಗಂ’ಗೆ ಮೂರನೇ ಪಾರ್ಟ್ ಬರುತ್ತಿದೆ. ಈ ಚಿತ್ರದಲ್ಲಿ ಅರ್ಜುನ್ ಖಡಕ್ ವಿಲನ್ ಪಾತ್ರ ಮಾಡುತ್ತಿದ್ದಾರೆ. ಪೋಸ್ಟರ್​ನಲ್ಲಿ ಅರ್ಜುನ್ ಕಪೂರ್ ನಗುತ್ತಿದ್ದಾರೆ. ಅವರ ಮುಖ ರಕ್ತದಲ್ಲಿ ತೊಯ್ದು ಹೋಗಿದೆ. ಹಿಂಭಾಗದಲ್ಲಿ ಯಾರೋ ಮಚ್ಚು ಹಿಡಿದು ನಿಂತಿದ್ದಾರೆ. ಮತ್ತೊಂದು ಪೋಸ್ಟರ್​ನಲ್ಲಿ ರಣವೀರ್ ಸಿಂಗ್ ಹಾಗೂ ಅರ್ಜುನ್ ಕಪೂರ್ ಮುಖಾಮುಖಿ ಆಗಿದ್ದಾರೆ.

ರೋಹಿತ್ ಶೆಟ್ಟಿ ಪೋಸ್ಟ್

‘ವ್ಯಕ್ತಿ ತಪ್ಪು ಮಾಡುತ್ತಾನೆ ಮತ್ತು ಆತನಿಗೆ ಶಿಕ್ಷೆಯೂ ಆಗುತ್ತದೆ. ಆದರೆ, ಈಗ ಬರುತ್ತಿರುವ ವ್ಯಕ್ತಿ ಶೈತಾನ್’ ಎಂದು ಬರೆದುಕೊಂಡಿದ್ದಾರೆ ರೋಹಿತ್. ಈ ಪೋಸ್ಟರ್​ನ ಅರ್ಜುನ್ ಕಪೂರ್ ಕೂಡ ಶೇರ್ ಮಾಡಿಕೊಂಡಿದ್ದು, ‘ಸಿಂಗಂ ಕಾ ವಿಲನ್’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಮೇಲಿನ ಭಯಕ್ಕೆ ಕದ್ದುಮುಚ್ಚಿ ‘ಟೈಗರ್ 3’ ನೋಡಿದ ಅರ್ಜುನ್ ಕಪೂರ್?

ಅರ್ಜುನ್ ಕಪೂರ್ ಅವರು ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಈಗ ಅವರು ವಿಲನ್ ಅವತಾರ ತಾಳುತ್ತಿದ್ದಾರೆ. ಈ ರೀತಿಯಲ್ಲಿ ಅವರು ಫ್ಯಾನ್ಸ್​ಗೆ ಇಷ್ಟವಾಗುತ್ತಾರಾ ಎನ್ನುವ ಕುತೂಹಲ ಮೂಡಿದೆ. ಈ ಚಿತ್ರದಲ್ಲಿ ದೊಡ್ಡ ಪಾತ್ರವರ್ಗ ಇದೆ. ರಣವೀರ್ ಸಿಂಗ್, ಅರ್ಜುನ್ ಕಪೂರ್ ಜೊತೆಗೆ ದೀಪಿಕಾ ಪಡುಕೋಣೆ ಟೈಗರ್​ ಶ್ರಾಫ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಈ ವರ್ಷ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಅದೇ ದಿನ ತೆಲುಗಿನ ‘ಪುಷ್ಪ 2’ ಚಿತ್ರ ಕೂಡ ಬಿಡುಗಡೆ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ