AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಸಿಕ್ತನಾಗಿ ಬಂದ ಅರ್ಜುನ್ ಕಪೂರ್; ರಣವೀರ್ ಎದುರು ವಿಲನ್ ಆದ ಬಾಲಿವುಡ್ ಹೀರೋ

‘ರೋಹಿತ್ ಶೆಟ್ಟಿ ನಿರ್ದೇಶನದ ‘ಸಿಂಗಂ 3’ ಚಿತ್ರದಲ್ಲಿ ಅರ್ಜುನ್ ಕಪೂರ್ ಖಡಕ್ ವಿಲನ್ ಪಾತ್ರ ಮಾಡುತ್ತಿದ್ದಾರೆ. ಪೋಸ್ಟರ್​ನಲ್ಲಿ ಅರ್ಜುನ್ ಕಪೂರ್ ಮುಖ ರಕ್ತದಲ್ಲಿ ತೊಯ್ದು ಹೋಗಿದೆ. ಹಿಂಭಾಗದಲ್ಲಿ ಯಾರೋ ಮಚ್ಚು ಹಿಡಿದು ನಿಂತಿದ್ದಾರೆ. ಮತ್ತೊಂದು ಪೋಸ್ಟರ್​ನಲ್ಲಿ ರಣವೀರ್ ಸಿಂಗ್ ಹಾಗೂ ಅರ್ಜುನ್ ಕಪೂರ್ ಮುಖಾಮುಖಿ ಆಗಿದ್ದಾರೆ.

ರಕ್ತಸಿಕ್ತನಾಗಿ ಬಂದ ಅರ್ಜುನ್ ಕಪೂರ್; ರಣವೀರ್ ಎದುರು ವಿಲನ್ ಆದ ಬಾಲಿವುಡ್ ಹೀರೋ
ಅರ್ಜುನ್ ಕಪೂರ್
ರಾಜೇಶ್ ದುಗ್ಗುಮನೆ
|

Updated on: Feb 14, 2024 | 10:51 AM

Share

‘ಸಿಂಗಂ 3’ ಸಿನಿಮಾ (Singham Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ರೋಹಿತ್ ಶೆಟ್ಟಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಜುನ್ ಕಪೂರ್ ಅವರು ವಿಲನ್ ಪಾತ್ರ ಮಾಡುತ್ತಾರೆ ಎನ್ನುವ ಸುದ್ದಿ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈ ವಿಚಾರ ಈಗ ಅಧಿಕೃತ ಆಗಿದೆ. ರೋಹಿತ್ ಶೆಟ್ಟಿ ಅವರು ಈಗ ಸಿನಿಮಾದ ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಈ ಪೋಸ್ಟರ್​ನಲ್ಲಿ ಅರ್ಜುನ್ ಕಪೂರ್ ಲುಕ್ ಗಮನ ಸೆಳೆದಿದೆ.

ರೋಹಿತ್ ಶೆಟ್ಟಿ ನಿರ್ದೇಶನದ ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್ ಇರುತ್ತದೆ. ಅವರ ನಿರ್ದೇಶನದ ಯಶಸ್ವಿ ಸರಣಿ ‘ಸಿಂಗಂ’ಗೆ ಮೂರನೇ ಪಾರ್ಟ್ ಬರುತ್ತಿದೆ. ಈ ಚಿತ್ರದಲ್ಲಿ ಅರ್ಜುನ್ ಖಡಕ್ ವಿಲನ್ ಪಾತ್ರ ಮಾಡುತ್ತಿದ್ದಾರೆ. ಪೋಸ್ಟರ್​ನಲ್ಲಿ ಅರ್ಜುನ್ ಕಪೂರ್ ನಗುತ್ತಿದ್ದಾರೆ. ಅವರ ಮುಖ ರಕ್ತದಲ್ಲಿ ತೊಯ್ದು ಹೋಗಿದೆ. ಹಿಂಭಾಗದಲ್ಲಿ ಯಾರೋ ಮಚ್ಚು ಹಿಡಿದು ನಿಂತಿದ್ದಾರೆ. ಮತ್ತೊಂದು ಪೋಸ್ಟರ್​ನಲ್ಲಿ ರಣವೀರ್ ಸಿಂಗ್ ಹಾಗೂ ಅರ್ಜುನ್ ಕಪೂರ್ ಮುಖಾಮುಖಿ ಆಗಿದ್ದಾರೆ.

ರೋಹಿತ್ ಶೆಟ್ಟಿ ಪೋಸ್ಟ್

‘ವ್ಯಕ್ತಿ ತಪ್ಪು ಮಾಡುತ್ತಾನೆ ಮತ್ತು ಆತನಿಗೆ ಶಿಕ್ಷೆಯೂ ಆಗುತ್ತದೆ. ಆದರೆ, ಈಗ ಬರುತ್ತಿರುವ ವ್ಯಕ್ತಿ ಶೈತಾನ್’ ಎಂದು ಬರೆದುಕೊಂಡಿದ್ದಾರೆ ರೋಹಿತ್. ಈ ಪೋಸ್ಟರ್​ನ ಅರ್ಜುನ್ ಕಪೂರ್ ಕೂಡ ಶೇರ್ ಮಾಡಿಕೊಂಡಿದ್ದು, ‘ಸಿಂಗಂ ಕಾ ವಿಲನ್’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಮೇಲಿನ ಭಯಕ್ಕೆ ಕದ್ದುಮುಚ್ಚಿ ‘ಟೈಗರ್ 3’ ನೋಡಿದ ಅರ್ಜುನ್ ಕಪೂರ್?

ಅರ್ಜುನ್ ಕಪೂರ್ ಅವರು ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಈಗ ಅವರು ವಿಲನ್ ಅವತಾರ ತಾಳುತ್ತಿದ್ದಾರೆ. ಈ ರೀತಿಯಲ್ಲಿ ಅವರು ಫ್ಯಾನ್ಸ್​ಗೆ ಇಷ್ಟವಾಗುತ್ತಾರಾ ಎನ್ನುವ ಕುತೂಹಲ ಮೂಡಿದೆ. ಈ ಚಿತ್ರದಲ್ಲಿ ದೊಡ್ಡ ಪಾತ್ರವರ್ಗ ಇದೆ. ರಣವೀರ್ ಸಿಂಗ್, ಅರ್ಜುನ್ ಕಪೂರ್ ಜೊತೆಗೆ ದೀಪಿಕಾ ಪಡುಕೋಣೆ ಟೈಗರ್​ ಶ್ರಾಫ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಈ ವರ್ಷ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಅದೇ ದಿನ ತೆಲುಗಿನ ‘ಪುಷ್ಪ 2’ ಚಿತ್ರ ಕೂಡ ಬಿಡುಗಡೆ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ