AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಸಿಕ್ತನಾಗಿ ಬಂದ ಅರ್ಜುನ್ ಕಪೂರ್; ರಣವೀರ್ ಎದುರು ವಿಲನ್ ಆದ ಬಾಲಿವುಡ್ ಹೀರೋ

‘ರೋಹಿತ್ ಶೆಟ್ಟಿ ನಿರ್ದೇಶನದ ‘ಸಿಂಗಂ 3’ ಚಿತ್ರದಲ್ಲಿ ಅರ್ಜುನ್ ಕಪೂರ್ ಖಡಕ್ ವಿಲನ್ ಪಾತ್ರ ಮಾಡುತ್ತಿದ್ದಾರೆ. ಪೋಸ್ಟರ್​ನಲ್ಲಿ ಅರ್ಜುನ್ ಕಪೂರ್ ಮುಖ ರಕ್ತದಲ್ಲಿ ತೊಯ್ದು ಹೋಗಿದೆ. ಹಿಂಭಾಗದಲ್ಲಿ ಯಾರೋ ಮಚ್ಚು ಹಿಡಿದು ನಿಂತಿದ್ದಾರೆ. ಮತ್ತೊಂದು ಪೋಸ್ಟರ್​ನಲ್ಲಿ ರಣವೀರ್ ಸಿಂಗ್ ಹಾಗೂ ಅರ್ಜುನ್ ಕಪೂರ್ ಮುಖಾಮುಖಿ ಆಗಿದ್ದಾರೆ.

ರಕ್ತಸಿಕ್ತನಾಗಿ ಬಂದ ಅರ್ಜುನ್ ಕಪೂರ್; ರಣವೀರ್ ಎದುರು ವಿಲನ್ ಆದ ಬಾಲಿವುಡ್ ಹೀರೋ
ಅರ್ಜುನ್ ಕಪೂರ್
ರಾಜೇಶ್ ದುಗ್ಗುಮನೆ
|

Updated on: Feb 14, 2024 | 10:51 AM

Share

‘ಸಿಂಗಂ 3’ ಸಿನಿಮಾ (Singham Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ರೋಹಿತ್ ಶೆಟ್ಟಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಜುನ್ ಕಪೂರ್ ಅವರು ವಿಲನ್ ಪಾತ್ರ ಮಾಡುತ್ತಾರೆ ಎನ್ನುವ ಸುದ್ದಿ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈ ವಿಚಾರ ಈಗ ಅಧಿಕೃತ ಆಗಿದೆ. ರೋಹಿತ್ ಶೆಟ್ಟಿ ಅವರು ಈಗ ಸಿನಿಮಾದ ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಈ ಪೋಸ್ಟರ್​ನಲ್ಲಿ ಅರ್ಜುನ್ ಕಪೂರ್ ಲುಕ್ ಗಮನ ಸೆಳೆದಿದೆ.

ರೋಹಿತ್ ಶೆಟ್ಟಿ ನಿರ್ದೇಶನದ ಸಿನಿಮಾಗಳಲ್ಲಿ ಭರ್ಜರಿ ಆ್ಯಕ್ಷನ್ ಇರುತ್ತದೆ. ಅವರ ನಿರ್ದೇಶನದ ಯಶಸ್ವಿ ಸರಣಿ ‘ಸಿಂಗಂ’ಗೆ ಮೂರನೇ ಪಾರ್ಟ್ ಬರುತ್ತಿದೆ. ಈ ಚಿತ್ರದಲ್ಲಿ ಅರ್ಜುನ್ ಖಡಕ್ ವಿಲನ್ ಪಾತ್ರ ಮಾಡುತ್ತಿದ್ದಾರೆ. ಪೋಸ್ಟರ್​ನಲ್ಲಿ ಅರ್ಜುನ್ ಕಪೂರ್ ನಗುತ್ತಿದ್ದಾರೆ. ಅವರ ಮುಖ ರಕ್ತದಲ್ಲಿ ತೊಯ್ದು ಹೋಗಿದೆ. ಹಿಂಭಾಗದಲ್ಲಿ ಯಾರೋ ಮಚ್ಚು ಹಿಡಿದು ನಿಂತಿದ್ದಾರೆ. ಮತ್ತೊಂದು ಪೋಸ್ಟರ್​ನಲ್ಲಿ ರಣವೀರ್ ಸಿಂಗ್ ಹಾಗೂ ಅರ್ಜುನ್ ಕಪೂರ್ ಮುಖಾಮುಖಿ ಆಗಿದ್ದಾರೆ.

ರೋಹಿತ್ ಶೆಟ್ಟಿ ಪೋಸ್ಟ್

‘ವ್ಯಕ್ತಿ ತಪ್ಪು ಮಾಡುತ್ತಾನೆ ಮತ್ತು ಆತನಿಗೆ ಶಿಕ್ಷೆಯೂ ಆಗುತ್ತದೆ. ಆದರೆ, ಈಗ ಬರುತ್ತಿರುವ ವ್ಯಕ್ತಿ ಶೈತಾನ್’ ಎಂದು ಬರೆದುಕೊಂಡಿದ್ದಾರೆ ರೋಹಿತ್. ಈ ಪೋಸ್ಟರ್​ನ ಅರ್ಜುನ್ ಕಪೂರ್ ಕೂಡ ಶೇರ್ ಮಾಡಿಕೊಂಡಿದ್ದು, ‘ಸಿಂಗಂ ಕಾ ವಿಲನ್’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಮೇಲಿನ ಭಯಕ್ಕೆ ಕದ್ದುಮುಚ್ಚಿ ‘ಟೈಗರ್ 3’ ನೋಡಿದ ಅರ್ಜುನ್ ಕಪೂರ್?

ಅರ್ಜುನ್ ಕಪೂರ್ ಅವರು ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಈಗ ಅವರು ವಿಲನ್ ಅವತಾರ ತಾಳುತ್ತಿದ್ದಾರೆ. ಈ ರೀತಿಯಲ್ಲಿ ಅವರು ಫ್ಯಾನ್ಸ್​ಗೆ ಇಷ್ಟವಾಗುತ್ತಾರಾ ಎನ್ನುವ ಕುತೂಹಲ ಮೂಡಿದೆ. ಈ ಚಿತ್ರದಲ್ಲಿ ದೊಡ್ಡ ಪಾತ್ರವರ್ಗ ಇದೆ. ರಣವೀರ್ ಸಿಂಗ್, ಅರ್ಜುನ್ ಕಪೂರ್ ಜೊತೆಗೆ ದೀಪಿಕಾ ಪಡುಕೋಣೆ ಟೈಗರ್​ ಶ್ರಾಫ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಈ ವರ್ಷ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಅದೇ ದಿನ ತೆಲುಗಿನ ‘ಪುಷ್ಪ 2’ ಚಿತ್ರ ಕೂಡ ಬಿಡುಗಡೆ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು