AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೈಕಾ ಅರೋರಾ ತಂದೆ ಆತ್ಮಹತ್ಯೆ: ಅಂತಿಮ ನಮನ ಸಲ್ಲಿಸಲು ಬಂದ ಅರ್ಜುನ್​ ಕಪೂರ್​

ಮುಂಬೈನ ಬಾಂದ್ರಾದಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ಮಲೈರಾ ಅರೋರಾ ಅವರ ತಂದೆ ಅನಿಲ್​ ಅರೋರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಅಂತಿಮ ದರ್ಶನ ಪಡೆಯಲು ಅರ್ಜುನ್​ ಕಪೂರ್​ ಓಡೋಡಿ ಬಂದಿದ್ದಾರೆ. ಅನನ್ಯಾ ಪಾಂಡೆ, ಸಲೀಂ ಖಾನ್​, ಅರ್ಬಾಜ್​ ಖಾನ್​, ಸೈಫ್​ ಅಲಿ ಖಾನ್​, ಕರೀನಾ ಕಪೂರ್​ ಮಂತಾದ ಸೆಲೆಬ್ರಿಟಿಗಳು ಕೂಡ ಬಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಮಲೈಕಾ ಅರೋರಾ ತಂದೆ ಆತ್ಮಹತ್ಯೆ: ಅಂತಿಮ ನಮನ ಸಲ್ಲಿಸಲು ಬಂದ ಅರ್ಜುನ್​ ಕಪೂರ್​
ಅನಿಲ್​ ಅರೋರಾ, ಅರ್ಜುನ್​ ಕಪೂರ್​, ಮಲೈಕಾ ಅರೋರಾ
ಮದನ್​ ಕುಮಾರ್​
|

Updated on: Sep 11, 2024 | 6:32 PM

Share

ಖ್ಯಾತ ನಟಿ ಮಲೈಕಾ ಅರೋರಾ ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಮಲೈಕಾ ಅರೋರಾ ಅವರ ತಂದೆ ಅನಿಲ್​ ಅರೋರಾ ಅವರು ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿದು ಅನೇಕ ಸೆಲೆಬ್ರಿಟಿಗಳು ಅನಿಲ್​ ಅರೋರಾ ಅವರ ನಿವಾಸಕ್ಕೆ ಆಗಮಿಸಿದ್ದಾರೆ. ಮಲೈಕಾ ಅರೋರಾ ಅವರ ಮಾಜಿ ಪ್ರಿಯಕರ ಅರ್ಜುನ್​ ಕಪೂರ್​ ಕೂಡ ಬಂದು ಅನಿಲ್ ಅರೋರಾ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅರ್ಜುನ್​ ಕಪೂರ್​ ಅವರು ಆಗಮಿಸಿದ ವಿಡಿಯೋ ವೈರಲ್​ ಆಗಿದೆ.

ಮಲೈಕಾ ಅರೋರಾ ಅವರು ಬಹುಬೇಡಿಕೆಯ ನಟಿಯಾಗಿದ್ದಾರೆ. ಖುಷಿ ಖುಷಿಯಾಗಿ ಫಾರಿನ್​ ಟ್ರಿಪ್​ ಮಾಡುತ್ತಿದ್ದ ಅವರಿಗೆ ತಂದೆಯ ಸಾವಿನ ವಿಷಯ ತಿಳಿದು ಶಾಕ್​ ಆಗಿದೆ. ತಂದೆಯ ಮನೆಗೆ ಮಲೈಕಾ ಅವರು ಓಡೋಡಿ ಬಂದಿದ್ದಾರೆ. ಬಳಿಕ ಅರ್ಜುನ್​ ಕಪುರ್​ ಕೂಡ ಬಂದಿದ್ದಾರೆ. ಕೆಲವೇ ತಿಂಗಳ ಹಿಂದೆ ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್​ ಅವರು ಬ್ರೇಕಪ್​ ಮಾಡಿಕೊಂಡರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಗಣೇಶನ ಮುಂದೆ ಡ್ಯಾನ್ಸ್​ ಮಾಡಬೇಡ ಎಂದಿದ್ದಕ್ಕೆ ಯುವಕ ಆತ್ಮಹತ್ಯೆ

ಬ್ರೇಕಪ್​ ಆಗಿದ್ದರೂ ಕೂಡ ಕಷ್ಟದ ಸಮಯದಲ್ಲಿ ಮಲೈಕಾ ಅರೋರಾ ಅವರ ಬೆಂಬಲಕ್ಕೆ ನಿಲ್ಲಲು ಅರ್ಜುನ್​ ಕಪೂರ್​ ಅವರು ಬಂದಿದ್ದಾರೆ. ಅವರು ಮಾತ್ರವಲ್ಲದೇ ಮಲೈಕಾ ಅರೋರಾ ಅವರ ಮಾಜಿ ಪತಿ ಅರ್ಬಾಜ್​ ಖಾನ್​ ಕೂಡ ಆಗಮಿಸಿ ಕಂಬನಿ ಮಿಡಿದಿದ್ದಾರೆ. ಬಾಲಿವುಡ್​ ಸೆಲೆಬ್ರಿಟಿಗಳಾದ ಸೈಫ್​ ಅಲಿ ಖಾನ್​, ಕರೀನಾ ಕಪೂರ್​ ಖಾನ್​, ಅನನ್ಯಾ ಪಾಂಡೆ ಮುಂತಾದವರು ಸಹ ಅನಿಲ್​ ಅರೋರಾಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಅನಿಲ್​ ಅರೋರಾ ಅವರು ಮೂಲತಃ ಪಂಜಾಬ್​ನವರು. ಮುಂಬೈನಲ್ಲಿ ಅವರು ವಾಸವಾಗಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಾಂದ್ರಾ ಅಪಾರ್ಟ್​ಮೆಂಟ್​ಗೆ ಪೊಲೀಸರು ಆಗಮಿಸಿದ್ದು, ತನಿಖೆ ಆರಂಭಿಸಿದ್ದಾರೆ. ಅನಿಲ್ ಅರೋರಾ ಅವರು ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದು ಯಾಕೆ ಎಂಬುದು ನಿಗೂಢವಾಗಿಯೇ ಉಳಿದುಕೊಂಡಿದೆ. ಅಪಾರ್ಟ್​ಮೆಂಟ್​ನ ಸಿಸಿಟಿವಿ ವಿಡಿಯೋಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದ್ದು, ವರದಿ ಬಂದ ಬಳಿಕ ಹೆಚ್ಚಿನ ವಿಷಯ ಬಹಿರಂಗ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್