AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೈಕಾ ಅರೋರಾ ತಂದೆ ಆತ್ಮಹತ್ಯೆ: ಅಂತಿಮ ನಮನ ಸಲ್ಲಿಸಲು ಬಂದ ಅರ್ಜುನ್​ ಕಪೂರ್​

ಮುಂಬೈನ ಬಾಂದ್ರಾದಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ಮಲೈರಾ ಅರೋರಾ ಅವರ ತಂದೆ ಅನಿಲ್​ ಅರೋರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಅಂತಿಮ ದರ್ಶನ ಪಡೆಯಲು ಅರ್ಜುನ್​ ಕಪೂರ್​ ಓಡೋಡಿ ಬಂದಿದ್ದಾರೆ. ಅನನ್ಯಾ ಪಾಂಡೆ, ಸಲೀಂ ಖಾನ್​, ಅರ್ಬಾಜ್​ ಖಾನ್​, ಸೈಫ್​ ಅಲಿ ಖಾನ್​, ಕರೀನಾ ಕಪೂರ್​ ಮಂತಾದ ಸೆಲೆಬ್ರಿಟಿಗಳು ಕೂಡ ಬಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಮಲೈಕಾ ಅರೋರಾ ತಂದೆ ಆತ್ಮಹತ್ಯೆ: ಅಂತಿಮ ನಮನ ಸಲ್ಲಿಸಲು ಬಂದ ಅರ್ಜುನ್​ ಕಪೂರ್​
ಅನಿಲ್​ ಅರೋರಾ, ಅರ್ಜುನ್​ ಕಪೂರ್​, ಮಲೈಕಾ ಅರೋರಾ
ಮದನ್​ ಕುಮಾರ್​
|

Updated on: Sep 11, 2024 | 6:32 PM

Share

ಖ್ಯಾತ ನಟಿ ಮಲೈಕಾ ಅರೋರಾ ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಮಲೈಕಾ ಅರೋರಾ ಅವರ ತಂದೆ ಅನಿಲ್​ ಅರೋರಾ ಅವರು ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿದು ಅನೇಕ ಸೆಲೆಬ್ರಿಟಿಗಳು ಅನಿಲ್​ ಅರೋರಾ ಅವರ ನಿವಾಸಕ್ಕೆ ಆಗಮಿಸಿದ್ದಾರೆ. ಮಲೈಕಾ ಅರೋರಾ ಅವರ ಮಾಜಿ ಪ್ರಿಯಕರ ಅರ್ಜುನ್​ ಕಪೂರ್​ ಕೂಡ ಬಂದು ಅನಿಲ್ ಅರೋರಾ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅರ್ಜುನ್​ ಕಪೂರ್​ ಅವರು ಆಗಮಿಸಿದ ವಿಡಿಯೋ ವೈರಲ್​ ಆಗಿದೆ.

ಮಲೈಕಾ ಅರೋರಾ ಅವರು ಬಹುಬೇಡಿಕೆಯ ನಟಿಯಾಗಿದ್ದಾರೆ. ಖುಷಿ ಖುಷಿಯಾಗಿ ಫಾರಿನ್​ ಟ್ರಿಪ್​ ಮಾಡುತ್ತಿದ್ದ ಅವರಿಗೆ ತಂದೆಯ ಸಾವಿನ ವಿಷಯ ತಿಳಿದು ಶಾಕ್​ ಆಗಿದೆ. ತಂದೆಯ ಮನೆಗೆ ಮಲೈಕಾ ಅವರು ಓಡೋಡಿ ಬಂದಿದ್ದಾರೆ. ಬಳಿಕ ಅರ್ಜುನ್​ ಕಪುರ್​ ಕೂಡ ಬಂದಿದ್ದಾರೆ. ಕೆಲವೇ ತಿಂಗಳ ಹಿಂದೆ ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್​ ಅವರು ಬ್ರೇಕಪ್​ ಮಾಡಿಕೊಂಡರು.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಗಣೇಶನ ಮುಂದೆ ಡ್ಯಾನ್ಸ್​ ಮಾಡಬೇಡ ಎಂದಿದ್ದಕ್ಕೆ ಯುವಕ ಆತ್ಮಹತ್ಯೆ

ಬ್ರೇಕಪ್​ ಆಗಿದ್ದರೂ ಕೂಡ ಕಷ್ಟದ ಸಮಯದಲ್ಲಿ ಮಲೈಕಾ ಅರೋರಾ ಅವರ ಬೆಂಬಲಕ್ಕೆ ನಿಲ್ಲಲು ಅರ್ಜುನ್​ ಕಪೂರ್​ ಅವರು ಬಂದಿದ್ದಾರೆ. ಅವರು ಮಾತ್ರವಲ್ಲದೇ ಮಲೈಕಾ ಅರೋರಾ ಅವರ ಮಾಜಿ ಪತಿ ಅರ್ಬಾಜ್​ ಖಾನ್​ ಕೂಡ ಆಗಮಿಸಿ ಕಂಬನಿ ಮಿಡಿದಿದ್ದಾರೆ. ಬಾಲಿವುಡ್​ ಸೆಲೆಬ್ರಿಟಿಗಳಾದ ಸೈಫ್​ ಅಲಿ ಖಾನ್​, ಕರೀನಾ ಕಪೂರ್​ ಖಾನ್​, ಅನನ್ಯಾ ಪಾಂಡೆ ಮುಂತಾದವರು ಸಹ ಅನಿಲ್​ ಅರೋರಾಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಅನಿಲ್​ ಅರೋರಾ ಅವರು ಮೂಲತಃ ಪಂಜಾಬ್​ನವರು. ಮುಂಬೈನಲ್ಲಿ ಅವರು ವಾಸವಾಗಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಾಂದ್ರಾ ಅಪಾರ್ಟ್​ಮೆಂಟ್​ಗೆ ಪೊಲೀಸರು ಆಗಮಿಸಿದ್ದು, ತನಿಖೆ ಆರಂಭಿಸಿದ್ದಾರೆ. ಅನಿಲ್ ಅರೋರಾ ಅವರು ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದು ಯಾಕೆ ಎಂಬುದು ನಿಗೂಢವಾಗಿಯೇ ಉಳಿದುಕೊಂಡಿದೆ. ಅಪಾರ್ಟ್​ಮೆಂಟ್​ನ ಸಿಸಿಟಿವಿ ವಿಡಿಯೋಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದ್ದು, ವರದಿ ಬಂದ ಬಳಿಕ ಹೆಚ್ಚಿನ ವಿಷಯ ಬಹಿರಂಗ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!