AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

45 ಕೋಟಿ ರೂ. ಬಜೆಟ್​ನ ಸಿನಿಮಾದ ಕಲೆಕ್ಷನ್ ಬರೀ 45 ಸಾವಿರ ರೂ; ಅತಿ ದೊಡ್ಡ ಫ್ಲಾಪ್

‘ದಿ ಲೇಡಿ ಕಿಲ್ಲರ್​’ ಸಿನಿಮಾದಲ್ಲಿ ಅರ್ಜುನ್​ ಕಪೂರ್​ ಹಾಗೂ ಭೂಮಿ ಪೆಡ್ನೆಕರ್​ ಅಭಿನಯಿಸಿದ್ದಾರೆ. ಫ್ರೀಯಾಗಿ ಕೊಟ್ಟರೂ ಜನರು ಈ ಸಿನಿಮಾವನ್ನು ನೋಡುತ್ತಿಲ್ಲ. ‘ಇಷ್ಟು ಕೆಟ್ಟ ಸಿನಿಮಾವನ್ನು ಹೇಗೆ ನೋಡಲು ಸಾಧ್ಯ’ ಎಂದು ಜನರು ಕಮೆಂಟ್​ ಮಾಡುತ್ತಿದ್ದಾರೆ. ಚಿತ್ರಮಂದಿರದಲ್ಲಿ ಫ್ಲಾಪ್​ ಆದ ಈ ಸಿನಿಮಾ ಈಗ ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಆಗಿದೆ.

45 ಕೋಟಿ ರೂ. ಬಜೆಟ್​ನ ಸಿನಿಮಾದ ಕಲೆಕ್ಷನ್ ಬರೀ 45 ಸಾವಿರ ರೂ; ಅತಿ ದೊಡ್ಡ ಫ್ಲಾಪ್
ಅರ್ಜುನ್​ ಕಪೂರ್​
ಮದನ್​ ಕುಮಾರ್​
|

Updated on: Sep 03, 2024 | 8:12 PM

Share

ಖ್ಯಾತ ನಿರ್ಮಾಪಕ ಬೋನಿ ಕಪೂರ್​ ಅವರ ಪುತ್ರ ಅರ್ಜುನ್​ ಕಪೂರ್ ಬಾಲಿವುಡ್​ನಲ್ಲಿ ಇನ್ನೂ ಸರಿಯಾಗಿ ನೆಲೆ ಕಂಡುಕೊಂಡಿಲ್ಲ. ಸಿನಿಮಾಗಳಿಂದ ಸುದ್ದಿ ಆಗಿದ್ದಕ್ಕಿಂತಲೂ ಮಲೈಕಾ ಅರೋರಾ ಜೊತೆಗಿನ ರಿಲೇಷನ್​ಶಿಪ್​ ಕಾರಣಕ್ಕೆ ಅರ್ಜುನ್​ ಕಪೂರ್​ ಸುದ್ದಿ ಆಗಿದ್ದೇ ಹೆಚ್ಚು. ಭಾರತದ ಅತಿ ದೊಡ್ಡ ಫ್ಲಾಪ್​ ಸಿನಿಮಾ ನೀಡಿದ ಕುಖ್ಯಾತಿ ಕೂಡ ಅವರ ಹೆಸರಲ್ಲೇ ಇದೆ! ಹೌದು, ಅರ್ಜುನ್​ ಕಪೂರ್​ ನಟನೆಯ ‘ದಿ ಲೇಡಿ ಕಿಲ್ಲರ್​’ ಸಿನಿಮಾ 2023ರ ನವೆಂಬರ್​ನಲ್ಲಿ ಅಟ್ಟರ್​ ಫ್ಲಾಪ್​ ಆಗಿದ್ದೂ ಅಲ್ಲದೇ ಈಗ ಮತ್ತೆ ಟ್ರೋಲ್​ ಆಗುತ್ತಿದೆ.

ಲಭ್ಯವಿರುವ ಮಾಹಿತಿ ಪ್ರಕಾರ, ‘ದಿ ಲೇಡಿ ಕಿಲ್ಲರ್​’ ಸಿನಿಮಾ ನಿರ್ಮಾಣ ಆಗಿದ್ದು 45 ಕೋಟಿ ರೂಪಾಯಿ ಬಜೆಟ್​ನಲ್ಲಿ. ಆದರೆ 2023ರ ನವೆಂಬರ್​ 3ರಂದು ಬಿಡುಗಡೆ ಆದ ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಗಳಿಸಿದ್ದು ಕೇವಲ 45 ಸಾವಿರ ರೂಪಾಯಿ! ಆದ್ದರಿಂದಲೇ ಇದನ್ನು ಭಾರತೀಯ ಚಿತ್ರರಂಗದ ಅತಿ ದೊಡ್ಡ ಫ್ಲಾಪ್​ ಸಿನಿಮಾ ಎಂದು ಕರೆಯಲಾಗುತ್ತಿದೆ. ಈಗ ಇದೇ ಸಿನಿಮಾವನ್ನು ಯೂಟ್ಯೂಬ್​ನಲ್ಲಿ ಉಚಿತವಾಗಿ ರಿಲೀಸ್​ ಮಾಡಲಾಗಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ದಿ ಲೇಡಿ ಕಿಲ್ಲರ್​’ ಸಿನಿಮಾ ಒಟಿಟಿಯಲ್ಲಿ ವೀಕ್ಷಣಗೆ ಲಭ್ಯವಾಗಬೇಕಿತ್ತು. ನೆಟ್​ಫ್ಲಿಕ್ಸ್​ ಜೊತೆ ಮಾತುಕತೆ ನಡೆದಿದೆ ಎಂದು ಕೂಡ ಹೇಳಲಾಗಿತ್ತು. ಆದರೆ ಅಂತಿಮವಾಗಿ ಡೀಲ್​ ಕುದುರಿಲ್ಲ ಎನಿಸುತ್ತದೆ. ಹಾಗಾಗಿ ಉಚಿತವಾಗಿ ಯೂಟ್ಯೂಬ್​ ಮೂಲಕ ಈ ಸಿನಿಮಾವನ್ನು ಅಪ್​ಲೋಡ್​ ಮಾಡಲಾಗಿದೆ. ಯೂಟ್ಯೂಬ್​ನಲ್ಲಿ ಫ್ರೀಯಾಗಿ ರಿಲೀಸ್​ ಮಾಡಿದರೂ ಜನರು ಹಿಗ್ಗಾಮುಗ್ಗಾ ಟ್ರೋಲ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅರ್ಜುನ್​ ಕಪೂರ್​ ಬಳಿಕ ಹೊಸ ವ್ಯಕ್ತಿ ಜತೆ ಮಲೈಕಾ ಅರೋರಾ ಡೇಟಿಂಗ್​; ಫೋಟೋ ವೈರಲ್​

ಅರ್ಜುನ್​ ಕಪೂರ್​ ಮತ್ತು ಭೂಮಿ ಪೆಡ್ನೆಕರ್​ ಅವರು ಜೋಡಿಯಾಗಿ ‘ದಿ ಲೇಡಿ ಕಿಲ್ಲರ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಅಜಯ್​ ಬಹ್ಲ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸಿನಿಮಾ ತುಂಬ ಕಳಪೆ ಆಗಿದೆ ಹಾಗೂ ಅಪೂರ್ಣವಾಗಿದೆ ಎಂಬ ಕಾರಣಕ್ಕೆ ಜನರು ಟ್ರೋಲ್​ ಮಾಡುತ್ತಿದ್ದಾರೆ. ‘ಅಟ್ಟರ್​ ಫ್ಲಾಪ್​ ಆಗುವುದರಲ್ಲಿ ಕಂಗನಾ ನಟನೆ ‘ಧಾಕಡ್​’ ಸಿನಿಮಾವನ್ನು ಮೀರಿಸಿದ ಖ್ಯಾತಿ ‘ದಿ ಲೇಡಿ ಕಿಲ್ಲರ್​’ ಸಿನಿಮಾಗೆ ಸಿಕ್ಕಿದೆ’ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

ಟಿ-ಸಿರೀಸ್​ ಯೂಟ್ಯೂಬ್​ ಚಾನೆಲ್​ ಮೂಲಕ ‘ದಿ ಲೇಡಿ ಕಿಲ್ಲರ್​’ ಚಿತ್ರವನ್ನು ಉಚಿತವಾಗಿ ರಿಲೀಸ್​ ಮಾಡಲಾಗಿದೆ. ಒಂದು ದಿನದಲ್ಲಿ ಅಂದಾಜು 2.7 ಲಕ್ಷ ಬಾರಿ ಈ ಸಿನಿಮಾ ವೀಕ್ಷಣೆ ಕಂಡಿದೆ. ಫ್ರೀ ಕೊಟ್ಟರೂ ಕೂಡ ಇಷ್ಟು ಕಳಪೆ ನಂಬರ್​ ಪಡೆದಿರುವುದು ಟ್ರೋಲ್​ಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ