AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟರ್​ ಆಗುವ ಕನಸು ಕಂಡ ಬಡ ಹುಡುಗಿಗೆ ಅರ್ಜುನ್​ ಕಪೂರ್​ ಸಹಾಯ; ಭೇಷ್​ ಎಂದ ನೆಟ್ಟಿಗರು

ಸಚಿನ್​ ತೆಂಡುಲ್ಕರ್​ ರೀತಿ ಪ್ರಸಿದ್ಧ ಕ್ರಿಕೆಟರ್​ ಆಗಬೇಕು ಎಂಬುದು ಅನಿಶಾ ಆಸೆ. ಅದಕ್ಕಾಗಿ ಪ್ರತಿ ದಿನ 80 ಕಿಲೋ ಮೀಟರ್​ ಪ್ರಯಾಣ ಮಾಡಿ ಆಕೆ ತರಬೇತಿ ಪಡೆಯುತ್ತಿದ್ದಾಳೆ.

ಕ್ರಿಕೆಟರ್​ ಆಗುವ ಕನಸು ಕಂಡ ಬಡ ಹುಡುಗಿಗೆ ಅರ್ಜುನ್​ ಕಪೂರ್​ ಸಹಾಯ; ಭೇಷ್​ ಎಂದ ನೆಟ್ಟಿಗರು
ತನಿಶಾ, ಅರ್ಜುನ್ ಕಪೂರ್
ಮದನ್​ ಕುಮಾರ್​
|

Updated on:Apr 11, 2023 | 4:17 PM

Share

ಮುಖ್ಯಾಂಶಗಳು

  • ‘ಎಂಎಸ್​ ಧೋನಿ: ದಿ ಅನ್​ಟೋಲ್ಡ್​ ಸ್ಟೋರಿ’ ಚಿತ್ರ ನೋಡಿ ಕ್ರಿಕೆಟ್​ ಬಗ್ಗೆ ಅನಿಶಾಗೆ ಮೂಡಿತು ಆಸಕ್ತಿ
  • ಅಂತಾರಾಷ್ಟ್ರೀಯ ಕ್ರಿಕೆಟರ್​ ಆಗುವ ಕನಸು ಕಂಡು ತರಬೇತಿ ಪಡೆಯುತ್ತಿರುವ ಬಡ ಹುಡುಗಿ
  • ಅನಿಶಾ 18ರ ಪ್ರಾಯಕ್ಕೆ ಬರುವ ತನಕ ಸಹಾಯ ಮಾಡಲು ಮುಂದಾದ ಅರ್ಜುನ್​ ಕಪೂರ್​

ನಟ ಅರ್ಜುನ್​ ಕಪೂರ್​ (Arjun Kapoor) ಅವರದ್ದು ಫಿಲ್ಮಿ ಕುಟುಂಬ. ಅವರ ತಂದೆ ಬೋನಿ ಕಪೂರ್​ ಬಾಲಿವುಡ್​ನಲ್ಲಿ ಪ್ರಭಾವಿ ನಿರ್ಮಾಪಕ. ಹಾಗಿದ್ದರೂ ಕೂಡ ಅರ್ಜುನ್​ ಕಪೂರ್​ ಅವರು ಹಿಂದಿ ಚಿತ್ರರಂಗದಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಕಂಡಿಲ್ಲ. ಈ ನಡುವೆ ಅವರು ಮಲೈಕಾ ಅರೋರಾ ಜೊತೆಗಿನ ರಿಲೇಷನ್​ಶಿಪ್​ ಕಾರಣದಿಂದಲೇ ಹೆಚ್ಚು ಸುದ್ದಿ ಆಗುತ್ತಾರೆ. ಆದರೆ ಈಗ ಜನಮೆಚ್ಚುವಂತಹ ಒಂದು ಕಾರ್ಯವನ್ನು ಅರ್ಜುನ್ ಕಪೂರ್​ ಮಾಡಿದ್ದಾರೆ. ಕ್ರಿಕೆಟರ್​ ಆಗಬೇಕು ಎಂದು ಕನಸು ಕಂಡಿರುವ ಅನಿಶಾ ರಾವತ್​ (Anisha Rout) ಎಂಬ ಬಡ ಹುಡುಗಿಗೆ ಸಹಾಯ ಮಾಡಲು ಅರ್ಜುನ್​ ಕಪೂರ್​ ಮುಂದೆ ಬಂದಿದ್ದಾರೆ. ಅನಿಶಾಗೆ ಈಗ 11 ವರ್ಷ ವಯಸ್ಸು. ಆಕೆಗೆ 18ರ ಪ್ರಾಯ ಆಗುವ ತನಕ ಕ್ರಿಕೆಟ್​ ತರಬೇತಿಗೆ ಬೇಕಾಗುವ ಎಲ್ಲ ಸಾಮಾಗ್ರಿಗಳನ್ನು ಅರ್ಜುನ್​ ಕಪೂರ್ ಪೂರೈಸಲಿದ್ದಾರೆ.

ಕ್ರಿಕೆಟ್​ನಲ್ಲಿ ಮೊದಲಿನಿಂದಲೂ ಪುರುಷರ ಪ್ರಾಬಲ್ಯ ಇದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಕೂಡ ಈ ಕ್ರೀಡೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಪ್ರೋತ್ಸಾಹ ನೀಡುವ ಅಗತ್ಯ ಬಹಳ ಇದೆ. ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟರ್​ ಆಗಬೇಕು ಎಂದು ಕನಸು ಕಂಡಿರುವ ಲಕ್ಷಾಂತರ ಹುಡುಗಿಯರು ಇದ್ದಾರೆ. ಆದರೆ ಎಲ್ಲರಿಗೂ ಸೂಕ್ತ ತರಬೇತಿ ಸಿಗುವುದಿಲ್ಲ. ಅದನ್ನು ಅರ್ಥ ಮಾಡಿಕೊಂಡಿರುವ ಅರ್ಜುನ್​ ಕಪೂರ್​ ಅವರು ಅನಿಶಾ ರಾವತ್​ಗೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ.

ಇದನ್ನೂ ಓದಿ: ವೀಕೆಂಡ್ ಮೋಜು ಮಸ್ತಿಯಲ್ಲಿ ಮಲೈಕಾ ಅರೋರಾ-ಅರ್ಜುನ್​ ಕಪೂರ್​; ವೈರಲ್ ಆಯ್ತು ಫೋಟೋ

ಇದನ್ನೂ ಓದಿ
Image
ಮಲೈಕಾ ಅರೋರಾ ಪ್ರೆಗ್ನೆಂಟ್ ಎಂದು ಸುದ್ದಿ ಹಬ್ಬಿಸಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಅರ್ಜುನ್ ಕಪೂರ್
Image
‘ಭವಿಷ್ಯವನ್ನು ಒಟ್ಟಿಗೆ ಕಳೆಯುವ ಆಸೆ ಇದೆ’; ಅರ್ಜುನ್ ಕಪೂರ್ ಬಗ್ಗೆ ಮಲೈಕಾ ಮಾತು
Image
20 ಕೋಟಿ ಕೊಟ್ಟು ಪ್ರೇಯಸಿ ಮಲೈಕಾ ಅರೋರಾ ಮನೆ ಸಮೀಪವೇ ಸ್ಕೈ ವಿಲ್ಲಾ ಖರೀದಿಸಿದ ಅರ್ಜುನ್​ ಕಪೂರ್​
Image
12 ವರ್ಷ ಹಿರಿಯ ಮಹಿಳೆ ಜತೆಗಿನ ಪ್ರೀತಿ ಬಗ್ಗೆ ಬಾಯಿ ಬಿಟ್ಟ ಅರ್ಜುನ್​ ಕಪೂರ್​; ಬೇರೆ ಕಾರಣಕ್ಕೆ ತಂದೆ ಬೋನಿ ಕಪೂರ್​ ಕಣ್ಣೀರು

ಸಚಿನ್​ ತೆಂಡುಲ್ಕರ್​ ರೀತಿ ಪ್ರಸಿದ್ಧ ಕ್ರಿಕೆಟರ್​ ಆಗಬೇಕು ಎಂಬುದು ಅನಿಶಾ ಆಸೆ. ಅದಕ್ಕಾಗಿ ಪ್ರತಿ ದಿನ 80 ಕಿಲೋ ಮೀಟರ್​ ಪ್ರಯಾಣ ಮಾಡಿ ಆಕೆ ತರಬೇತಿ ಪಡೆಯುತ್ತಿದ್ದಾಳೆ. ಅವಳ ಕನಸನ್ನು ನನಸು ಮಾಡಲು ಆಕೆಯ ತಂದೆ ಕೂಡ ಸಕಲ ಸಹಕಾರ ನೀಡುತ್ತಿದ್ದಾರೆ. ಆದರೆ ಬೇಕಾಗಿರುವ ಸಾಮಾಗ್ರಿಗಳನ್ನು ಒದಗಿಸಲು ಅವರಿಗೆ ಕಷ್ಟ ಆಗುತ್ತಿದೆ. ಈಗ ಅರ್ಜುನ್​ ಕಪೂರ್​ ಸಹಾಯ ಹಸ್ತ ಚಾಚಿರುವುದರಿಂದ ಅನಿಶಾ ಕನಸಿಗೆ ರೆಕ್ಕ ಬಂದಂತೆ ಆಗಿದೆ.

ಇದನ್ನೂ ಓದಿ: 20 ಕೋಟಿ ಕೊಟ್ಟು ಪ್ರೇಯಸಿ ಮಲೈಕಾ ಅರೋರಾ ಮನೆ ಸಮೀಪವೇ ಸ್ಕೈ ವಿಲ್ಲಾ ಖರೀದಿಸಿದ ಅರ್ಜುನ್​ ಕಪೂರ್​

ಕೂಲ್​ ಕ್ಯಾಪ್ಟನ್​ ಎಂಎಸ್​ ಧೋನಿ ಅವರ ಜೀವನವನ್ನು ಆಧರಿಸಿ ‘ಎಂಎಸ್​ ಧೋನಿ: ದಿ ಅನ್​ಟೋಲ್ಡ್​ ಸ್ಟೋರಿ’ ಸಿನಿಮಾ ಮೂಡಿಬಂದಿತ್ತು. ಆ ಸಿನಿಮಾವನ್ನು ನೋಡಿದ ಬಳಿಕ ಅನಿಶಾಗೆ ಕ್ರಿಕೆಟ್​ ಆಡುವ ಬಯಕೆ ಉಂಟಾಯಿತು. 10ನೇ ವಯಸ್ಸಿನಲ್ಲಿ ಆಕೆ ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಪರವಾಗಿ ಅಂಡರ್​-15 ಮಹಿಳಾ ತಂಡದಲ್ಲಿ ಕ್ರಿಕೆಟ್​ ಆಡಿದ್ದಾಳೆ. ಮೂರು ಹಾಫ್​ ಸೆಂಚುರಿ ಬಾರಿಸಿದ್ದಾಳೆ. ಪ್ರಸ್ತುತ ಎಂಐಜಿ ಕ್ಲಬ್​ ಪರವಾಗಿ ಓಪನಿಂಗ್​ ಬ್ಯಾಟರ್​ ಆಗಿ ಆಡುತ್ತಿದ್ದಾಳೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:17 pm, Tue, 11 April 23

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್