AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್​ ಕೇಸ್​ನಲ್ಲಿ ಖ್ಯಾತ ನಟನ ಗರ್ಲ್​ ಫ್ರೆಂಡ್​ ಸಹೋದರ ಅರೆಸ್ಟ್​

ಬಾಲಿವುಡ್​ ಡ್ರಗ್​ ಪ್ರಕರಣದಲ್ಲಿ ಈ ಮೊದಲು ಕೂಡ ಅಗಿಸಿಲಾವೋ ಹೆಸರು ಕೇಳಿ ಬಂದಿತ್ತು. ಈಗ ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಅವರನ್ನು ಗೋವಾದಲ್ಲಿ ಅರೆಸ್ಟ್​ ಮಾಡಿದೆ. ಇ

ಡ್ರಗ್​ ಕೇಸ್​ನಲ್ಲಿ ಖ್ಯಾತ ನಟನ ಗರ್ಲ್​ ಫ್ರೆಂಡ್​ ಸಹೋದರ ಅರೆಸ್ಟ್​
ಅರ್ಜುನ್​ ರಾಮ್​ಪಾಲ್​ ಹಾಗೂ ಅವರ ಗರ್ಲ್​ಫ್ರೆಂಡ್
TV9 Web
| Edited By: |

Updated on:Sep 26, 2021 | 6:31 PM

Share

ಡ್ರಗ್​ ಕೇಸ್​ ಪ್ರಕರಣದಲ್ಲಿ ನಿತ್ಯ ಒಬ್ಬೊಬ್ಬ ಖ್ಯಾತ ವ್ಯಕ್ತಿಗಳು ಬಂಧನಕ್ಕೆ ಒಳಗಾಗುತ್ತಲೇ ಇದ್ದಾರೆ. ಈ ಪ್ರಕರಣದಲ್ಲಿ ಬಗೆದಷ್ಟು ಹೊಸಹೊಸ ವಿಚಾರಗಳು ಹೊರಗೆ ಬರುತ್ತಿವೆ. ಅನೇಕರನ್ನು ಈಗಾಗಲೇ ಬಂಧಿಸಿ ವಿಚಾರಣೆ ಮಾಡಲಾಗಿದೆ. ಈಗ ಬಾಲಿವುಡ್​ ನಟನ ಗರ್ಲ್​​ಫ್ರೆಂಡ್​ ಕುಟುಂಬದ ಸದಸ್ಯನ ಬಂಧನವಾಗಿದೆ. ಅರ್ಜುನ್​ ರಾಮ್​ಪಾಲ್​ ಹಾಗೂ ಗೇಬ್ರಿಯೆಲ್ಲಾ ಡಿಮೆಟ್ರೈಡ್ಸ್ ಪರಸ್ಪರ ಪ್ರೀತಿಸುತ್ತಿದ್ದಾರೆ. ಇವರು ಸಾಕಷ್ಟು ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ ಕೂಡ. ಈಗ ಗೇಬ್ರಿಯಾಲ್ ಸಹೋದರ ಅಗಿಸಿಲಾವೋ ಅವರನ್ನು ಪೊಲೀಸರು ಡ್ರಗ್​ ಕೇಸ್​ನಲ್ಲಿ ಅರೆಸ್ಟ್​ ಮಾಡಿದ್ದಾರೆ. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.  

ಬಾಲಿವುಡ್​ ಡ್ರಗ್​ ಪ್ರಕರಣದಲ್ಲಿ ಈ ಮೊದಲು ಕೂಡ ಅಗಿಸಿಲಾವೋ ಹೆಸರು ಕೇಳಿ ಬಂದಿತ್ತು. ಈಗ ಮಾದಕ ದ್ರವ್ಯ ನಿಯಂತ್ರಣ ಮಂಡಳಿ ಅವರನ್ನು ಗೋವಾದಲ್ಲಿ ಅರೆಸ್ಟ್​ ಮಾಡಿದೆ. ಇವರ ಬಳಿ ಡ್ರಗ್ಸ್​  ಸಿಕ್ಕಿದೆ ಎನ್ನಲಾಗಿದೆ. ಡ್ರಗ್​ ಪೆಡ್ಲರ್​ಗಳನ್ನು ಅರೆಸ್ಟ್​ ಮಾಡುವ ಉದ್ದೇಶದಿಂದ ಎನ್​ಸಿಬಿ ಅಧಿಕಾರಿಗಳು ಶನಿವಾರ ಕಾರ್ಯಚರಣೆ ನಡೆಸಿದ್ದರು. ಈ ವೇಳೆ ಅಗಿಸಿಲಾವೋ ಬಂಧನವಾಗಿದೆ. ಅವರು ಡ್ರಗ್ಸ್​ ಸಮೇತ ಸಿಕ್ಕಿ ಬಿದ್ದಿರುವುದರಿಂದ ಜೈಲಿನಿಂದ ಹೊರ ಬರುವುದು ಕಷ್ಟ ಎನ್ನಲಾಗುತ್ತಿದೆ.

ಅಗಿಸಿಲಾವೋ ವಿರುದ್ಧ ದಾಖಲಾಗುತ್ತಿರುವ ಮೂರನೇ ಪ್ರಕರಣ ಇದಾಗಿದೆ. ಈ ಮೊದಲು ಕೂಡ ಕೆಲ ಪ್ರಕರಣಗಳು ಅಗಿಸಿಲಾವೋ ವಿರುದ್ಧ ದಾಖಲಾಗಿದೆ. ಈಗ ಅವರನ್ನು ಕೋರ್ಟ್​ ಮುಂದೆ ಹಾಜರು ಪಡಿಸಲಾಗಿದ್ದು, ಎರಡು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿದೆ.

ಹಲವು ಡ್ರಗ್​ ಪೆಡ್ಲರ್​ಗಳು ಈಗಾಗಲೇ ಸಿಕ್ಕಿ ಬಿದ್ದಿದ್ದಾರೆ. ಇವರಿಂದಾಗಿ ಬಾಲಿವುಡ್​ನ ಸಾಕಷ್ಟು ನಟ-ನಟಿಯರ ಹೆಸರು ಮುನ್ನೆಲೆಗೆ ಬಂದಿದೆ. ಈಗಾಗಲೇ ಹಲವರು ವಿಚಾರಣೆಗೆ ಒಳಪಟ್ಟಿದ್ದಾರೆ. ಸ್ಯಾಂಡಲ್​ವುಡ್​ನ ಕೆಲವು ನಟಿಯರು ಬಂಧನಕ್ಕೂ ಒಳಗಾಗಿದ್ದಾರೆ.

ಇದನ್ನೂ ಓದಿ: ‘ಡ್ರಗ್ಸ್​ ಎಂಬುದು ಸಿನಿಮಾರಂಗಕ್ಕೆ ಸೀಮಿತ ಅಲ್ಲ, ಇದು ಟಿಆರ್​ಪಿ ವಿಷಯವಲ್ಲ’: ನಟ ಚೇತನ್​

Published On - 6:30 pm, Sun, 26 September 21

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ