‘ಇನ್ಮೇಲೆ ಎಲ್ಲ ನಟರನ್ನೂ ಪ್ರೀತಿಸುತ್ತೇನೆ’: ವಿವಾದದ ಬಳಿಕ ಅರ್ಷದ್ ವಾರ್ಸಿ ನಿರ್ಧಾರ

ಪ್ರಭಾಸ್​ ಬಗ್ಗೆ ಅರ್ಷದ್ ವಾರ್ಸಿ ಮಾತನಾಡಿದ್ದು ವಿವಾದಕ್ಕೆ ಕಾರಣ ಆಗಿತ್ತು. ಆ ಬಳಿಕ ಅವರು ಎಚ್ಚೆತ್ತುಕೊಂಡಿದ್ದಾರೆ. ಇನ್ಮುಂದೆ ಎಲ್ಲ ನಟರನ್ನು ತಾವು ಪ್ರೀತಿಸುವುದಾಗಿ ಅರ್ಷದ್ ತಿಳಿಸಿದ್ದಾರೆ. ಜನರು ಈ ಮೊದಲು ಟ್ರೋಲ್ ಮಾಡಲು ಆರಂಭಿಸಿದಾಗ ಸೋಶಿಯಲ್ ಮೀಡಿಯಾದಲ್ಲಿ ಅರ್ಷದ್ ವಾರ್ಸಿ ಅವರು ಕಮೆಂಟ್ ಆಯ್ಕೆಯನ್ನು ತೆಗೆದುಹಾಕಿದ್ದರು.

‘ಇನ್ಮೇಲೆ ಎಲ್ಲ ನಟರನ್ನೂ ಪ್ರೀತಿಸುತ್ತೇನೆ’: ವಿವಾದದ ಬಳಿಕ ಅರ್ಷದ್ ವಾರ್ಸಿ ನಿರ್ಧಾರ
ಪ್ರಭಾಸ್, ಅರ್ಷದ್ ವಾರ್ಸಿ
Follow us
|

Updated on: Oct 22, 2024 | 4:52 PM

ಬಾಲಿವುಡ್ ನಟ ಅರ್ಷದ್​ ವಾರ್ಸಿ ಅವರು ಕೆಲವು ವಾರಗಳ ಹಿಂದೆ ಅನಗತ್ಯವಾಗಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ‘ಕಲ್ಕಿ 2898 ಎಡಿ’ ಸಿನಿಮಾದ ಬಗ್ಗೆ ತಮ್ಮ ಅನಿಸಿಕೆಯನ್ನು ತಿಳಿಸುವಾಗ ಅವರು, ‘ಪ್ರಭಾಸ್ ಪಾತ್ರ ಜೋಕರ್​ ರೀತಿ ಕಾಣಿಸುತ್ತಿದೆ’ ಎಂದು ಹೇಳಿದ್ದರು. ಇದರಿಂದ ಪ್ರಭಾಸ್ ಅಭಿಮಾನಿಗಳು ತೀವ್ರ ಟೀಕೆ ಮಾಡಿದ್ದರು. ಬಳಿಕ ಬಾಲಿವುಡ್ ವರ್ಸಸ್ ಸೌತ್ ಸಿನಿಮಾ ಎಂಬ ಚರ್ಚೆ ಜೋರಾಗಲು ಕೂಡ ಅವರ ಈ ಹೇಳಿಕೆ ಕಾರಣ ಆಗಿತ್ತು. ಆ ಘಟನೆಗಳ ಬಗ್ಗೆ ಈಗ ಅರ್ಷದ್​ ವಾರ್ಸಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

‘ಎಲ್ಲರಿಗೂ ಅವರವರ ದೃಷ್ಟಿಕೋನ ಇರುತ್ತದೆ. ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಎಲ್ಲರಿಗೂ ಮಾತನಾಡುವ ಹಕ್ಕು ಇದೆ. ನೀವು ಪಾಸಿಟಿವ್ ವ್ಯಕ್ತಿ ಆಗಿದ್ದರೆ ಯಾವುದೇ ನೆಗೆಟಿವ್ ವಿಚಾರ ಎದುರಾದಾಗ ಅದು ನಿಮ್ಮನ್ನು ಬಾಧಿಸುತ್ತದೆ. ನಾವು ಕಲ್ಲು ಬೀಳುವ ಜಾಗದಲ್ಲಿ ಇದ್ದೇವೆ. ಈಗ ನಾನು ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದು ಅರ್ಷದ್ ವಾರ್ಸಿ ಅವರು ಹೇಳಿದ್ದಾರೆ.

ಪ್ರಭಾಸ್ ಮಾಡಿದ್ದ ಪಾತ್ರವನ್ನು ಜೋಕರ್​ ಎಂದು ಕರೆದ ಬಳಿಕ ಜನರು ಅರ್ಷದ್ ವಾರ್ಸಿ ಅವರನ್ನು ಟ್ರೋಲ್ ಮಾಡಲು ಆರಂಭಿಸಿದ್ದರು. ಹಾಗಾಗಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಕಮೆಂಟ್ ಆಯ್ಕೆಯನ್ನು ಅರ್ಷದ್ ವಾರ್ಸಿ ಆಫ್ ಮಾಡಿದ್ದಾರೆ. ಆ ಬಗ್ಗೆ ಕೇಳಿದ್ದಕ್ಕೆ ‘ಅದು ಹೇಗೆ ಮಾಡುವುದು ಅಂತ ನನಗೆ ತಿಳಿದಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು

ಒಮ್ಮೆ ಇಷ್ಟೆಲ್ಲ ಕಾಂಟ್ರವರ್ಸಿ ಆಗಿರುವುದರಿಂದ ಇನ್ಮುಂದೆ ಯಾವುದೇ ನಟರ ಬಗ್ಗೆ ಮಾತನಾಡುವಾಗ ಅರ್ಷದ್ ವಾರ್ಸಿ ಅವರು ಎಚ್ಚರಿಕೆ ವಹಿಸುತ್ತಾರೆ? ಈ ಪ್ರಶ್ನೆಗೆ ಅವರು ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. ‘ಖಂಡಿತವಾಗಿಯೂ ಎಚ್ಚರಿಕೆ ವಹಿಸುತ್ತೇನೆ. ನಾನು ನೋಡುವ ಎಲ್ಲ ಸಿನಿಮಾವನ್ನೂ ಪ್ರೀತಿಸುತ್ತೇನೆ ಹಾಗೂ ಜೀವನದ ಕೊನೆಯ ತನಕ ಎಲ್ಲ ನಟರನ್ನೂ ನಾನು ಪ್ರೀತಿಸುವುದಾಗಿ ನಿರ್ಧಾರ ಮಾಡಿದ್ದೇನೆ’ ಎಂದಿದ್ದಾರೆ ಅರ್ಷದ್ ವಾರ್ಸಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!