AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ಮೇಲೆ ಎಲ್ಲ ನಟರನ್ನೂ ಪ್ರೀತಿಸುತ್ತೇನೆ’: ವಿವಾದದ ಬಳಿಕ ಅರ್ಷದ್ ವಾರ್ಸಿ ನಿರ್ಧಾರ

ಪ್ರಭಾಸ್​ ಬಗ್ಗೆ ಅರ್ಷದ್ ವಾರ್ಸಿ ಮಾತನಾಡಿದ್ದು ವಿವಾದಕ್ಕೆ ಕಾರಣ ಆಗಿತ್ತು. ಆ ಬಳಿಕ ಅವರು ಎಚ್ಚೆತ್ತುಕೊಂಡಿದ್ದಾರೆ. ಇನ್ಮುಂದೆ ಎಲ್ಲ ನಟರನ್ನು ತಾವು ಪ್ರೀತಿಸುವುದಾಗಿ ಅರ್ಷದ್ ತಿಳಿಸಿದ್ದಾರೆ. ಜನರು ಈ ಮೊದಲು ಟ್ರೋಲ್ ಮಾಡಲು ಆರಂಭಿಸಿದಾಗ ಸೋಶಿಯಲ್ ಮೀಡಿಯಾದಲ್ಲಿ ಅರ್ಷದ್ ವಾರ್ಸಿ ಅವರು ಕಮೆಂಟ್ ಆಯ್ಕೆಯನ್ನು ತೆಗೆದುಹಾಕಿದ್ದರು.

‘ಇನ್ಮೇಲೆ ಎಲ್ಲ ನಟರನ್ನೂ ಪ್ರೀತಿಸುತ್ತೇನೆ’: ವಿವಾದದ ಬಳಿಕ ಅರ್ಷದ್ ವಾರ್ಸಿ ನಿರ್ಧಾರ
ಪ್ರಭಾಸ್, ಅರ್ಷದ್ ವಾರ್ಸಿ
ಮದನ್​ ಕುಮಾರ್​
|

Updated on: Oct 22, 2024 | 4:52 PM

Share

ಬಾಲಿವುಡ್ ನಟ ಅರ್ಷದ್​ ವಾರ್ಸಿ ಅವರು ಕೆಲವು ವಾರಗಳ ಹಿಂದೆ ಅನಗತ್ಯವಾಗಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ‘ಕಲ್ಕಿ 2898 ಎಡಿ’ ಸಿನಿಮಾದ ಬಗ್ಗೆ ತಮ್ಮ ಅನಿಸಿಕೆಯನ್ನು ತಿಳಿಸುವಾಗ ಅವರು, ‘ಪ್ರಭಾಸ್ ಪಾತ್ರ ಜೋಕರ್​ ರೀತಿ ಕಾಣಿಸುತ್ತಿದೆ’ ಎಂದು ಹೇಳಿದ್ದರು. ಇದರಿಂದ ಪ್ರಭಾಸ್ ಅಭಿಮಾನಿಗಳು ತೀವ್ರ ಟೀಕೆ ಮಾಡಿದ್ದರು. ಬಳಿಕ ಬಾಲಿವುಡ್ ವರ್ಸಸ್ ಸೌತ್ ಸಿನಿಮಾ ಎಂಬ ಚರ್ಚೆ ಜೋರಾಗಲು ಕೂಡ ಅವರ ಈ ಹೇಳಿಕೆ ಕಾರಣ ಆಗಿತ್ತು. ಆ ಘಟನೆಗಳ ಬಗ್ಗೆ ಈಗ ಅರ್ಷದ್​ ವಾರ್ಸಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

‘ಎಲ್ಲರಿಗೂ ಅವರವರ ದೃಷ್ಟಿಕೋನ ಇರುತ್ತದೆ. ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಎಲ್ಲರಿಗೂ ಮಾತನಾಡುವ ಹಕ್ಕು ಇದೆ. ನೀವು ಪಾಸಿಟಿವ್ ವ್ಯಕ್ತಿ ಆಗಿದ್ದರೆ ಯಾವುದೇ ನೆಗೆಟಿವ್ ವಿಚಾರ ಎದುರಾದಾಗ ಅದು ನಿಮ್ಮನ್ನು ಬಾಧಿಸುತ್ತದೆ. ನಾವು ಕಲ್ಲು ಬೀಳುವ ಜಾಗದಲ್ಲಿ ಇದ್ದೇವೆ. ಈಗ ನಾನು ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದು ಅರ್ಷದ್ ವಾರ್ಸಿ ಅವರು ಹೇಳಿದ್ದಾರೆ.

ಪ್ರಭಾಸ್ ಮಾಡಿದ್ದ ಪಾತ್ರವನ್ನು ಜೋಕರ್​ ಎಂದು ಕರೆದ ಬಳಿಕ ಜನರು ಅರ್ಷದ್ ವಾರ್ಸಿ ಅವರನ್ನು ಟ್ರೋಲ್ ಮಾಡಲು ಆರಂಭಿಸಿದ್ದರು. ಹಾಗಾಗಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಕಮೆಂಟ್ ಆಯ್ಕೆಯನ್ನು ಅರ್ಷದ್ ವಾರ್ಸಿ ಆಫ್ ಮಾಡಿದ್ದಾರೆ. ಆ ಬಗ್ಗೆ ಕೇಳಿದ್ದಕ್ಕೆ ‘ಅದು ಹೇಗೆ ಮಾಡುವುದು ಅಂತ ನನಗೆ ತಿಳಿದಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಂಚಿತವಾಗಿ ನಟ ಪ್ರಭಾಸ್ ಜನ್ಮದಿನ ಆಚರಿಸಿದ ಟೋಕಿಯೋ ಅಭಿಮಾನಿಗಳು

ಒಮ್ಮೆ ಇಷ್ಟೆಲ್ಲ ಕಾಂಟ್ರವರ್ಸಿ ಆಗಿರುವುದರಿಂದ ಇನ್ಮುಂದೆ ಯಾವುದೇ ನಟರ ಬಗ್ಗೆ ಮಾತನಾಡುವಾಗ ಅರ್ಷದ್ ವಾರ್ಸಿ ಅವರು ಎಚ್ಚರಿಕೆ ವಹಿಸುತ್ತಾರೆ? ಈ ಪ್ರಶ್ನೆಗೆ ಅವರು ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. ‘ಖಂಡಿತವಾಗಿಯೂ ಎಚ್ಚರಿಕೆ ವಹಿಸುತ್ತೇನೆ. ನಾನು ನೋಡುವ ಎಲ್ಲ ಸಿನಿಮಾವನ್ನೂ ಪ್ರೀತಿಸುತ್ತೇನೆ ಹಾಗೂ ಜೀವನದ ಕೊನೆಯ ತನಕ ಎಲ್ಲ ನಟರನ್ನೂ ನಾನು ಪ್ರೀತಿಸುವುದಾಗಿ ನಿರ್ಧಾರ ಮಾಡಿದ್ದೇನೆ’ ಎಂದಿದ್ದಾರೆ ಅರ್ಷದ್ ವಾರ್ಸಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ