AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಪುತ್ರನ ಅರೆಸ್ಟ್​ ಬೆನ್ನಲ್ಲೇ ಓಡೋಡಿ ಬಂದ ಸಲ್ಮಾನ್​ ಖಾನ್​; ‘ಮನ್ನತ್​’ನಲ್ಲಿ ನಡೆದಿದ್ದು ಏನು?

ಶಾರುಖ್​ಗೆ ಸಂಕಷ್ಟ ಎದುರಾಗಿರುವುದರಿಂದ ಗೆಳೆಯನಿಗೆ ಸಹಾಯ ಮಾಡಲು ಸಲ್ಮಾನ್​ ಖಾನ್​ ಆಗಮಿಸಿದ್ದಾರೆ. ಐಷಾರಾಮಿ ಕಾರಿನಲ್ಲಿ ಅವರು ‘ಮನ್ನತ್’ಗೆ ಆಗಮಿಸಿದ ವಿಡಿಯೋ ವೈರಲ್​ ಆಗುತ್ತಿದೆ.

ಶಾರುಖ್​ ಪುತ್ರನ ಅರೆಸ್ಟ್​ ಬೆನ್ನಲ್ಲೇ ಓಡೋಡಿ ಬಂದ ಸಲ್ಮಾನ್​ ಖಾನ್​; ‘ಮನ್ನತ್​’ನಲ್ಲಿ ನಡೆದಿದ್ದು ಏನು?
ಆರ್ಯನ್ ಖಾನ್, ಶಾರುಖ್ ಖಾನ್, ಸಲ್ಮಾನ್ ಖಾನ್
TV9 Web
| Edited By: |

Updated on: Oct 04, 2021 | 7:37 AM

Share

ಶಾರುಖ್ ಖಾನ್​ ಪುತ್ರ ಆರ್ಯನ್​ ಖಾನ್​ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈನ ಕಡಲ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್​ ಪಾರ್ಟಿ ಮಾಡಿ ಅವರು ಸಿಕ್ಕಿ ಬಿದ್ದಿದ್ದಾರೆ. ಎನ್​ಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಆರ್ಯನ್ ಅವ​ರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದರಿಂದ ಶಾರುಖ್​ ಖಾನ್​ಗೆ ಟೆನ್ಷನ್​ ಹೆಚ್ಚಿದೆ. ತಮ್ಮ ಸಿನಿಮಾಗಳ ಶೂಟಿಂಗ್ ಕ್ಯಾನ್ಸಲ್​ ಮಾಡಿಕೊಂಡಿರುವ ಕಿಂಗ್ ಖಾನ್​ ಅವರು ಮಗನ ರಕ್ಷಣೆಗಾಗಿ ಎಲ್ಲಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅವರ ಸ್ನೇಹಿತ ಸಲ್ಮಾನ್​ ಖಾನ್​ ಕೂಡ ಈ ಸಮಯದಲ್ಲಿ ಬೆಂಬಲ ನೀಡುತ್ತಿದ್ದಾರೆ.

ಭಾನುವಾರ (ಅ.ಡ3) ಸಂಜೆಯೇ ಆರ್ಯನ್​ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಒಂದು ದಿನದ ಮಟ್ಟಿಗೆ ಅವರನ್ನು ಎನ್​ಸಿಬಿ ಕಸ್ಟಡಿಗೆ ನೀಡಿ ಮುಂಬೈ ಕೋರ್ಟ್​ ಆದೇಶ ಹೊರಡಿಸಿದೆ. ಇದು ಶಾರುಖ್​ ತಲೆನೋವಿಗೆ ಕಾರಣ ಆಗಿದೆ. ಭಾನುವಾರ ರಾತ್ರಿ ಅವರು ಮನೆಗೆ ಬಂದು ಮುಂದಿನ ಕ್ರಮಗಳ ಬಗ್ಗೆ ಆಲೋಚಿಸುತ್ತಿದ್ದಾರೆ. ಇದೇ ವೇಳೆ ಸಲ್ಮಾನ್​ ಖಾನ್​ ಕೂಡ ಶಾರುಖ್​ ಖಾನ್​ರ ನಿವಾಸ ‘ಮನ್ನತ್​’ಗೆ ಭೇಟಿ ನೀಡಿದ್ದಾರೆ. ಐಷಾರಾಮಿ ಕಾರಿನಲ್ಲಿ ಅವರು ಆಗಮಿಸಿದ ವಿಡಿಯೋ ವೈರಲ್​ ಆಗುತ್ತಿದೆ.

ಸಲ್ಮಾನ್​ ಖಾನ್​ ಮತ್ತು ಶಾರುಖ್​ ಖಾನ್​ ನಡುವೆ ಉತ್ತಮ ಬಾಂಧವ್ಯ ಇದೆ. ಪರಸ್ಪರರ ಸಿನಿಮಾಗಳಲ್ಲಿ ಅತಿಥಿ ಪಾತ್ರಗಳನ್ನೂ ನಿಭಾಯಿಸುವ ಮೂಲಕ ಒಬ್ಬರಿಗೊಬ್ಬರು ವೃತ್ತಿಜೀವನದಲ್ಲಿ ನೆರವಾಗುತ್ತಿದ್ದಾರೆ. ಈಗ ಶಾರುಖ್​ಗೆ ವೈಯಕ್ತಿಕ ಜೀವನದಲ್ಲಿ ಸಂಕಷ್ಟ ಎದುರಾಗಿರುವುದರಿಂದ ಗೆಳೆಯನಿಗೆ ಸಹಾಯ ಮಾಡಲು ಸಲ್ಮಾನ್​ ಖಾನ್​ ಆಗಮಿಸಿದ್ದಾರೆ. ಡ್ರಗ್ಸ್​ ಪಾರ್ಟಿ ಕೇಸ್​ನಿಂದ ಆರ್ಯನ್​ನನ್ನು ಹೇಗೆ ಹೊರತರಬೇಕು ಎಂಬ ಕಾನೂನು ಹಾದಿಗಳ ಬಗ್ಗೆ ಇಬ್ಬರೂ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆಯನ್ನೂ ನೀಡಿಲ್ಲ.

ಪಾರ್ಟಿ ನಡೆದ ಸ್ಥಳದಲ್ಲಿ ಮಾದಕ ವಸ್ತುಗಳು ಕೂಡ ಪತ್ತೆ ಆಗಿವೆ. ಆದರೆ ಎಷ್ಟು ಪ್ರಮಾಣದ ಡ್ರಗ್ಸ್​ ಸಿಕ್ಕಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ. ವಶಕ್ಕೆ ಪಡೆದವರನ್ನು ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಬಾಲಿವುಡ್​ನಲ್ಲಿ ಹರಡಿರುವ ಡ್ರಗ್ಸ್​ ಜಾಲವನ್ನು ಭೇದಿಸಲು ಈ ದಾಳಿ ಹೆಚ್ಚು ಸಹಕಾರಿ ಆಗಲಿದೆ.

ಇದನ್ನೂ ಓದಿ:

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

ಡ್ರಗ್ಸ್​ ಕೇಸ್​: ಎನ್​ಸಿಬಿ ಕಚೇರಿಯಲ್ಲಿ ಗಪ್​ಚುಪ್​ ಆಗಿ ಕುಳಿತ ಶಾರುಖ್​ ಪುತ್ರ ಆರ್ಯನ್​ ಖಾನ್​; ಇಲ್ಲಿದೆ ವಿಡಿಯೋ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್