AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್​ ಖಾನ್​ಗೆ ಮತ್ತೆ ನಿರಾಸೆ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ಗೆ ಈವರೆಗೂ ಜಾಮೀನು ಸಿಕ್ಕಿಲ್ಲ. ವಿಶೇಷ ನ್ಯಾಯಾಲಯದಲ್ಲಿ ಬುಧವಾರ (ಅ.13) ವಿಚಾರಣೆ ನಡೆಸಿತು.

ಆರ್ಯನ್​ ಖಾನ್​ಗೆ ಮತ್ತೆ ನಿರಾಸೆ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಆರ್ಯನ್​ ಮತ್ತು ಅರ್ಬಾಜ್​
TV9 Web
| Edited By: |

Updated on:Oct 13, 2021 | 6:15 PM

Share

ರೇವ್ಸ್​ ಪಾರ್ಟಿ ಮಾಡಿ ಸಿಕ್ಕಿ ಬಿದ್ದಿರುವ ಆರ್ಯನ್​ ಖಾನ್​ಗೆ ಜಾಮೀನು ಎಂಬುದು ಮರೀಚಿಕೆಯಾಗಿದೆ. ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಾರುಖ್​ ಖಾನ್​ ಪುತ್ರ ಸದ್ಯ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಬುಧವಾರ (ಅ.13) ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಆದರೆ ಅರ್ಜಿ ವಿಚಾರಣೆ ದಿನಾಂಕವನ್ನು ನ್ಯಾಯಾಲಯ ಗುರುವಾರಕ್ಕೆ (ಅ.14) ಮುಂದೂಡಿದೆ. ಅಲ್ಲಿಯವರೆಗೂ ಆರ್ಯನ್​ ಖಾನ್​ ಜೈಲಿನಲ್ಲಿ ದಿನ ಕಳೆಯದೇ ಬೇರೆ ದಾರಿ ಇಲ್ಲ.

ಆರ್ಯನ್​ ಖಾನ್​ಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಹರಸಾಹಸ ಮಾಡುತ್ತಿದ್ದರು. ಪುತ್ರ ಅರೆಸ್ಟ್​ ಆದ ದಿನದಿಂದಲೂ ಅವರಿಗೆ ನೆಮ್ಮದಿಯೇ ಇಲ್ಲದಂತಾಗಿದೆ.

ಆರ್ಯನ್​ ಪರ ವಕೀಲರು ಹೇಳಿದ್ದೇನು?

‘ಅಕ್ಟೋಬರ್ 3ರಿಂದ ಆರ್ಯನ್​ ವಿಚಾರಣೆ ನಡೆಸಿಲ್ಲ. ಮ್ಯಾಜಿಸ್ಟ್ರೇಟ್ ಕೋರ್ಟ್​​​ನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಎನ್​ಸಿಬಿ ವಿರೋಧ ಮಾಡಿತ್ತು. ಹೀಗಾಗಿಯೇ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನಿರಾಕರಿಸಿದೆ. ಎನ್​​ಸಿಬಿ ಕಸ್ಟಡಿ ಅಗತ್ಯವಿಲ್ಲ ಎಂದು ಆರ್ಯನ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ’ ಎಂದರು ಅಮಿತ್​ ದೇಸಾಯಿ.

‘ಆರ್ಯನ್ ಖಾನ್​ಗೆ  ಯಾರು ಆಹ್ವಾನ ನೀಡಿದ್ದರೋ ಅವರನ್ನು ಬಂಧಿಸಿಲ್ಲ. ಪ್ರತೀಕ್ ಗಾಬಾ ಎಂಬಾತ ಆರ್ಯನ್ ಖಾನ್ ಅವರನ್ನು ಪಾರ್ಟಿಗೆ ಆಹ್ವಾನಿಸಿದ್ದ. ಆತನನ್ನು ಬಂಧಿಸಬೇಕಿತ್ತು. ಎನ್‌ಡಿಪಿಎಸ್ ಕಾಯಿದೆಯ 27 ಎ ಸೆಕ್ಷನ್ ​ ಕಳ್ಳಸಾಗಣಿಕೆಗೆ ಸಂಬಂಧಿಸಿದೆ. ಈ ಸೆಕ್ಷನ್ ಆರ್ಯನ್ ಖಾನ್‌ಗೆ ಅನ್ವಯಿಸುವುದಿಲ್ಲ. ಆರ್ಯನ್​ ಯಾವುದೇ ಅಕ್ರಮ ಕಳ್ಳಸಾಗಣೆಯಲ್ಲಿ ಭಾಗಿಯಾಗಿಲ್ಲ. ಈ ಸೆಕ್ಷನ್ ವಿಧಿಸಿರುವುದು ಅಸಂಬದ್ಧ’  ಎಂದು ಆರ್ಯನ್ ಖಾನ್ ಪರ ವಕೀಲ ಅಮಿತ್ ದೇಸಾಯಿ ವಾದ ಮಂಡಿಸಿದರು.

‘ಇವರು ಡ್ರಗ್ಸ್ ಪೆಡ್ಲರ್​​ಗಳು ಅಲ್ಲ. ಡ್ರಗ್ಸ್ ಕಳ್ಳ ಸಾಗಾಟವನ್ನು ಮಾಡಿಲ್ಲ. ಇವರೆಲ್ಲಾ ಚಿಕ್ಕ ಮಕ್ಕಳು. ಅವರು ಪಾಠವನ್ನು ಕಲಿತಿದ್ದಾರೆ. ಜೈಲಿನಲ್ಲಿ ದೀರ್ಘ ಅವಧಿಯವರೆಗೂ ಇರುವುದು ಬೇಡ. ಆರ್ಯನ್ ಖಾನ್​ಗೆ ಜಾಮೀನು ನೀಡಿ’ ಎಂದು ಅಮಿತ್ ದೇಸಾಯಿ ಕೋರ್ಟ್​ಗೆ ಮನವಿ ಮಾಡಿದರು.

ಎನ್​ಸಿಬಿ ಪರ ವಕೀಲರು ಹೇಳಿದ್ದೇನು?

ಎನ್​ಸಿಬಿ ಪರ ವಕೀಲರಾದ ಅನಿಲ್​​ ಸಿಂಗ್ ವಾದಮಂಡಿಸಿದರು. ‘ಡ್ರಗ್ಸ್ ಕಳ್ಳ ಸಾಗಣೆ ಬಹಳ‌‌ ಗಂಭೀರ, ಕಳಕಳಿಯ ವಿಷಯ. ರೇವ್ ಪಾರ್ಟಿಗಳಲ್ಲಿ ಯುವಜನತೆ ಡ್ರಗ್ಸ್ ಸೇವನೆ ಮಾಡುತ್ತಾರೆ. ಇದರಿಂದ ದೇಶಕ್ಕೆ ತೊಂದರೆ ಆಗುತ್ತದೆ. ಇದು ಒಂದಿಬ್ಬರ ಡ್ರಗ್ಸ್ ಸೇವನೆಗೆ ಸಂಬಂಧಪಟ್ಟಿದ್ದಲ್ಲ. ನಾವು ಇಡೀ ಜಾಲದ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಆರ್ಯನ್ ಖಾನ್​​​ನನ್ನು‌ ಪಾರ್ಟಿಗೆ ಆಹ್ವಾನಿಸಲಾಗಿತ್ತು. ಯಾರು, ಯಾವಾಗ ಆಹ್ವಾನಿಸಿದರು ಎಂದು ಹೇಳುತ್ತಿಲ್ಲ. ಅವರಿಗೆ ಜಾಮೀನು ನೀಡಬಾರದು’ ಎಂದರು ಅನಿಲ್​​ ಸಿಂಗ್.

ಇದನ್ನೂ ಓದಿ: ಆರ್ಯನ್​ ಖಾನ್​ ಬಂಧನದ ಹಿಂದಿನ ಅಸಲಿಯತ್ತೇ ಬೇರೆ; ಎನ್​ಸಿಬಿ ಕಡೆಯಿಂದಲೇ ಹೊರಬಿತ್ತು ಸತ್ಯ

Published On - 5:36 pm, Wed, 13 October 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!