AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್​ ಖಾನ್​ಗೆ ಕೊನೆಗೂ ಸಿಕ್ತು ಜಾಮೀನು; ಶಾರುಖ್​ ಕುಟುಂಬಕ್ಕೆ ರಿಲೀಫ್​

ಆರ್ಯನ್ ಖಾನ್‌ ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಸೂಕ್ತ ಕಾರಣ ನೀಡದೇ ಬಂಧಿಸಲಾಗಿದೆ ಎಂದು ಆರ್ಯನ್​ ಖಾನ್​ ವಾದ ಮಂಡಿಸಿದರು.

ಆರ್ಯನ್​ ಖಾನ್​ಗೆ ಕೊನೆಗೂ ಸಿಕ್ತು ಜಾಮೀನು; ಶಾರುಖ್​ ಕುಟುಂಬಕ್ಕೆ ರಿಲೀಫ್​
ಆರ್ಯನ್​ ಖಾನ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 28, 2021 | 5:04 PM

Share

ಆರ್ಯನ್​ ಖಾನ್​ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರ (ಅಕ್ಟೋಬರ್​ 28) ಪೂರ್ಣಗೊಂಡಿದೆ. ಬಾಂಬೆ ಹೈಕೋರ್ಟ್​ನ ಏಕ ಸದಸ್ಯ ಪೀಠವು ಆರ್ಯನ್​ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ. ಈ ಮೂಲಕ ಒಂದು ತಿಂಗಳ ನಂತರದಲ್ಲಿ ಆರ್ಯನ್​ ಖಾನ್​ಗೆ ಜಾಮೀನು ಸಿಕ್ಕಿದೆ. ಆರ್ಯನ್​ಗೆ ಜಾಮೀನು ನೀಡಿದ್ದು ಏಕೆ ಎನ್ನುವ ಕಾರಣವನ್ನು ಕೋರ್ಟ್​ ಶುಕ್ರವಾರ ವಿವರಿಸಲಿದೆ. ಆರ್ಯನ್​ ಜತೆಗೆ, ಮುನ್​ಮುನ್​ ಧಮೇಚಾ ಮತ್ತು ಅರ್ಬಾಜ್ ಮರ್ಚೆಂಟ್​ಗೂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. 

ಎನ್‌ಸಿಬಿ ಪರ ಎಎಸ್‌ಜಿ ಅನಿಲ್ ಸಿಂಗ್ ವಾದಮಂಡನೆ ಮಾಡಿದ್ದು, ಆರ್ಯನ್​ಗೆ ಜಾಮೀನು ನೀಡಬಾರದು ಎಂದು ವಾದಿಸಿದರು. ‘ಡ್ರಗ್ಸ್ ಸೇವಿಸಿರುವುದನ್ನು ಅರ್ಬಾಜ್ ಒಪ್ಪಿಕೊಂಡಿದ್ದಾನೆ. ಆರ್ಯನ್ ಖಾನ್ ಡ್ರಗ್ಸ್ ದಂಧೆಯ ಬಗ್ಗೆ ದಾಖಲೆ ಇದೆ. ಕ್ರೂಸ್‌ನಲ್ಲಿ ಡ್ರಗ್ಸ್ ಪಾರ್ಟಿ ಬಗ್ಗೆ ಆರ್ಯನ್‌ಗೆ ಮಾಹಿತಿಯಿತ್ತು. ಆರ್ಯನ್ ವಾಟ್ಸಾಪ್ ಚಾಟ್‌ನಿಂದ ವಾಣಿಜ್ಯ ಉದ್ದೇಶಕ್ಕೆ ಡ್ರಗ್ಸ್​​ ಇಟ್ಟುಕೊಂಡಿದ್ದರು ಎಂಬುದು ಪತ್ತೆ ಆಗಿದೆ. ಕ್ರೂಸ್‌ನಲ್ಲಿ ಹಲವು ಮಾದರಿಯ ಡ್ರಗ್ಸ್ ಪತ್ತೆಯಾಗಿದೆ. ಇದು ನರಹತ್ಯೆಗಿಂತ ಘೋರ ಅಪರಾಧವಾಗಿದೆ’ ಎಂದು ವಾದಿಸಿದರು ಅವರು.

‘ಅರ್ಬಾಜ್ ಡ್ರಗ್ಸ್ ತರುತ್ತಿರುವುದು ಆರ್ಯನ್‌ಗೆ ಗೊತ್ತಿತ್ತು. ಪ್ರಯಾಣ ವೇಳೆ ಇವರು ಡ್ರಗ್ಸ್ ಸೇವಿಸಲು ಪ್ಲಾನ್ ಮಾಡಿದ್ದರು. ಎನ್‌ಡಿಪಿಎಸ್ ಪ್ರಕರಣಗಳಲ್ಲಿ ಜಾಮೀನು ಕೊಡಬೇಕೆಂದಿಲ್ಲ. ಮೇಲ್ನೋಟಕ್ಕೆ ಪ್ರಕರಣ ಕಂಡುಬಂದರೂ ನಿರಾಕರಿಸಬಹುದು. ಆರ್ಯನ್, ಅರ್ಬಾಜ್ ಮರ್ಚೆಂಟ್ ಬಾಲ್ಯದ ಸ್ನೇಹಿತರು. ಇಬ್ಬರೂ ಒಟ್ಟಿಗೆ ತೆರಳುತ್ತಿದ್ರು, ಒಂದೇ ಕೊಠಡಿಯಲ್ಲಿರುತ್ತಿದ್ದರು. ಡ್ರಗ್ಸ್ ಸೇವನೆ ಬಗ್ಗೆ ಪರೀಕ್ಷೆ ಮಾಡಿಲ್ಲವೆಂದು ಹೇಳುತ್ತಿದ್ದಾರೆ. ಅವರು ಡ್ರಗ್ಸ್ ಸೇವಿಸಿಲ್ಲ ಅಂದ್ರೆ ಪರೀಕ್ಷೆ ನಡೆಸುವುದು ಏಕೆ? ಆರೋಪಿಗಳ ಬಳಿ ಅಪಾರ ಪ್ರಮಾಣದಲ್ಲಿ ಡ್ರಗ್ಸ್ ಸಿಕ್ಕಿತ್ತು’ ಎಂದು ಅನಿಲ್ ಸಿಂಗ್ ವಾದ ಮಂಡಿಸಿದರು.

ಆರ್ಯನ್ ಪರ ವಾದ ಮಂಡನೆ ಮಾಡಿದ ವಕೀಲ ಮುಕುಲ್‌ ರೋಹ್ಟಗಿ. ‘ಆರ್ಯನ್ ಖಾನ್‌ ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಸೂಕ್ತ ಕಾರಣ ನೀಡದೇ ಬಂಧಿಸಲಾಗಿದೆ.  ಬಂಧನಕ್ಕೂ ಮುನ್ನ ಸೂಕ್ತ ಕಾರಣ ತಿಳಿಸಬೇಕಿತ್ತು. ಯಾವ ಕಾರಣಕ್ಕೆ ಬಂಧನವೆಂದು ತಿಳಿದುಕೊಳ್ಳುವ ಹಕ್ಕಿದೆ. ಬಂಧನಕ್ಕೆ ಸೂಕ್ತ ಕಾರಣ ನೀಡದೆ ಎನ್‌ಸಿಬಿ ದಾರಿ ತಪ್ಪಿಸಿದೆ’ ಎಂದು ಮುಕುಲ್‌ ರೋಹ್ಟಗಿ ವಾದ ಮಂಡಿಸಿದರು.

ಇದನ್ನೂ ಓದಿ:  Hrithik Roshan on Aryan Khan Case: ಆರ್ಯನ್ ಪರ ಮತ್ತೊಮ್ಮೆ ಬ್ಯಾಟ್ ಬೀಸಿದ ಹೃತಿಕ್; ಈ ಬಾರಿ ಹೇಳಿದ್ದೇನು?

Published On - 4:44 pm, Thu, 28 October 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!