AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ಆರ್ಯನ್​ಗೆ ಜಾಮೀನು ಕೊಡಿಸಬಹುದೇ ಸಲ್ಮಾನ್​ಗೆ ಜಾಮೀನು ಕೊಡಿಸಿದ್ದ ವಕೀಲರು?; ಇಂದು ನಡೆಯಲಿದೆ ವಿಚಾರಣೆ

Aryan Khan drugs case: ಬಾಲಿವುಡ್​ನ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ಇಂದು (ಬುಧವಾರ) ಮುಂಬೈನ ಸೆಷನ್ಸ್ ಕೋರ್ಟ್​ನಲ್ಲಿ ನಡೆಯಲಿದೆ. ಸಲ್ಮಾನ್ ಖಾನ್​ಗೆ ಜಾಮೀನು ಕೊಡಿಸಿದ್ದ ವಕೀಲ ಅಮಿತ್ ದೇಸಾಯಿ ಇಂದು ಆರ್ಯನ್ ಪರ ವಾದ ಮಂಡಿಸಲಿದ್ದಾರೆ.

Aryan Khan: ಆರ್ಯನ್​ಗೆ ಜಾಮೀನು ಕೊಡಿಸಬಹುದೇ ಸಲ್ಮಾನ್​ಗೆ ಜಾಮೀನು ಕೊಡಿಸಿದ್ದ ವಕೀಲರು?; ಇಂದು ನಡೆಯಲಿದೆ ವಿಚಾರಣೆ
ಆರ್ಯನ್ ಖಾನ್
TV9 Web
| Updated By: shivaprasad.hs|

Updated on: Oct 13, 2021 | 10:52 AM

Share

ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ಇಂದು(ಬುಧವಾರ) ನಡೆಯಲಿದೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಆರ್ಯನ್, ಅರ್ಥರ್ ಜೈಲಿನಲ್ಲಿದ್ದಾರೆ. ಈಗಾಗಲೇ‌ ಹಲವು ಬಾರಿ ಆರ್ಯನ್ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ಜಾಮೀನನ್ನು ನಿರಾಕರಿಸಲಾಗಿತ್ತು. ಇಂದು ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆಯು ಮುಂಬೈನ ಸೆಷನ್ಸ್ ಕೋರ್ಟ್​​ನಲ್ಲಿ ಮಧ್ಯಾಹ್ನ 2.45ಕ್ಕೆ ನಡೆಯಲಿದೆ.

ಇಂದು ಬೆಳಗ್ಗೆ 11 ಗಂಟೆಯೊಳಗೆ ಎನ್​ಸಿಬಿ ಮುಂಬೈ ಸೆಷನ್ಸ್ ಕೋರ್ಟ್ ಪ್ರತಿಕ್ರಿಯೆ ಸಲ್ಲಿಸಲಿದೆ. ಅದು ಆರ್ಯನ್​ಗೆ ಜಾಮೀನು ನಿಡುವುದನ್ನು ವಿರೋಧಿಸುವ ಸಾಧ್ಯತೆಗಳಿವೆ. ಎನ್​ಸಿಬಿಯು ಈಗಾಗಲೇ ಹಲವರ ಹೇಳಿಕೆಗಳನ್ನು ದಾಖಲಿಸಿದೆ. ಇತ್ತೀಚೆಗೆ ಆರ್ಯನ್ ಅವರನ್ನು ಹಡಗಿನ ಬಳಿ ಡ್ರಾಪ್ ಮಾಡಿದ್ದ ಡ್ರೈವರ್ ಹೇಳಿಕೆಗಳನ್ನು ದಾಖಲಿಸಿತ್ತು.

‘ಹಿಟ್​ ಆಂಡ್ ರನ್’ ಕೇಸ್​ನಲ್ಲಿ ಸಲ್ಮಾನ್​ಗೆ ಜಾಮೀನು ಕೊಡಿಸಿದ್ದ ವಕೀಲ ಅಮಿತ್ ದೇಸಾಯಿ ಇಂದು ಆರ್ಯನ್ ಪರ ವಕಾಲತ್ತು: ನಟಿ ರಿಯಾ ಚಕ್ರವರ್ತಿ ಸೇರಿದಂತೆ ಹಲವು ಖ್ಯಾತ ತಾರೆಯರ ಪ್ರಕರಣವನ್ನು ನಿರ್ವಹಿಸಿದ್ದ ಖ್ಯಾತ ವಕೀಲ ಸತೀಸ್ ಮಾನೆಶಿಂಧೆ ಆರ್ಯನ್ ಪರ ವಾದ ಮಂಡಿಸಿದ್ದರು. ಆದರೆ ಅವರು ಜಾಮೀನು ಕೊಡಿಸಲು ವಿಫಲರಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತೋರ್ವ ಖ್ಯಾತ ವಕೀಲ ಆರ್ಯನ್ ಪರ ವಕಾಲತ್ತು ವಹಿಸಲಿದ್ದಾರೆ. ಬಾಲಿವುಡ್ ತಾರೆ ಸಲ್ಮಾನ್‌ ಖಾನ್‌ಗೆ ‘ಹಿಟ್ ಆಂಡ್ ರನ್’ ಪ್ರಕರಣದಲ್ಲಿ ಜಾಮೀನು ಕೊಡಿಸಿದ್ದ ಅಮಿತ್ ದೇಸಾಯಿ ಇಂದು ಆರ್ಯನ್ ಪರ ವಾದ ಮಂಡಿಸಲಿದ್ದಾರೆ. ಆದ್ದರಿಂದ ಇಂದಿನ ವಿಚಾರಣೆಯು ಕುತೂಹಲ ಹೆಚ್ಚಿಸಿದೆ.

ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಶಾರುಖ್ ಖಾನ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಿಂದಾಗಿ ಶಾರುಖ್ ಖಾನ್ ಕಂಗೆಟ್ಟಿದ್ದಾರೆ ಎಂದು ಬಾಲಿವುಡ್ ಲೈಫ್ ವರದಿ ಮಾಡಿತ್ತು. ಅವರು ಮತ್ತು ಪತ್ನಿ ಗೌರಿ ಖಾನ್ ಊಟ, ತಿಂಡಿಯ ಕಡೆಗೂ ಗಮನ ಕೊಡದೆ ಮಗನ ಕುರಿತು ಚಿಂತಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಪ್ರಕರಣದ ನಂತರ ಶಾರುಖ್ ದಂಪತಿ ತಮ್ಮ ಮನ್ನತ್ ನಿವಾಸದಿಂದ ಹೊರಗೆ ಬಂದಿಲ್ಲ. ಚಿತ್ರೀಕರಣದಲ್ಲಿ ಬ್ಯುಸಿಯಿದ್ದ ಶಾರುಖ್, ಬಿಗ್ ಬಜೆಟ್ ಚಿತ್ರಗಳನ್ನೂ ಮುಂದಕ್ಕೆ ದೂಡಿದ್ದಾರೆ. ಇದರಿಂದ ಸಾಕಷ್ಟು ನಷ್ಟವಾದರೂ ಮಗನಿಗಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂಬ ಮಾತು ಬಾಲಿವುಡ್ ಅಂಗಳದಿಂದ ಕೇಳಿಬರುತ್ತಿದೆ.

ಇದನ್ನೂ ಓದಿ:

ಹೈದರಾಬಾದ್​ನಲ್ಲಿ ಪತ್ತೆಯಾದ ಗರಿಗರಿ ನೋಟುಗಳ ಕಪಾಟು; 142 ಕೋಟಿ ಮೌಲ್ಯದ ಹಣ! ಫೋಟೋ ನೋಡಿ

ಡ್ರಗ್ಸ್​ ಕೇಸ್​: ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ; ಶಾರುಖ್​ ಪುತ್ರನಿಗೆ ಮುಗಿಯದ ಸಂಕಷ್ಟ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ