Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ಆರ್ಯನ್​ ಖಾನ್​ ಜನ್ಮದಿನ: ಮಧ್ಯರಾತ್ರಿ 12 ಗಂಟೆಗೆ NCB ಅಧಿಕಾರಿಗಳ ಜತೆ ಕಾಲ ಕಳೆದ ಶಾರುಖ್​ ಪುತ್ರ​

Aryan Khan Birthday: ಆರ್ಯನ್​ ಖಾನ್​ ಅವರು ಶುಕ್ರವಾರ (ನ.12) ಬೆಳಗ್ಗೆ ಎನ್​ಸಿಬಿ ಕಚೇರಿಗೆ ಭೇಟಿ ನೀಡಿ ಸಹಿ ಹಾಕಿದ್ದಾರೆ. ಬಾಂಬೆ ಹೈಕೋರ್ಟ್​ನ ಆದೇಶದಂತೆ ಅವರು ಈ ರೀತಿ ಸಹಿ ಮಾಡುವುದು ಕಡ್ಡಾಯ. ಬಳಿಕ ಅವರು ವಿಶೇಷ ತನಿಖಾ ತಂಡದ ಎದುರು ಹಾಜರಾದರು.

Aryan Khan: ಆರ್ಯನ್​ ಖಾನ್​ ಜನ್ಮದಿನ: ಮಧ್ಯರಾತ್ರಿ 12 ಗಂಟೆಗೆ NCB ಅಧಿಕಾರಿಗಳ ಜತೆ ಕಾಲ ಕಳೆದ ಶಾರುಖ್​ ಪುತ್ರ​
ಆರ್ಯನ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on:Nov 13, 2021 | 9:57 AM

ಶಾರುಖ್​ ಖಾನ್​ (Shah Rukh Khan) ಪುತ್ರ ಆರ್ಯನ್​ ಖಾನ್​ (Aryan Khan) ಅವರಿಗೆ ಇಂದು (ನ.13) ಜನ್ಮದಿನದ ಸಂಭ್ರಮ. 24ನೇ ವರ್ಷಕ್ಕೆ ಅವರು ಕಾಲಿಟ್ಟಿದ್ದು ಆಪ್ತರೆಲ್ಲ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಪ್ರತಿ ವರ್ಷ ಸ್ನೇಹಿತರು ಮತ್ತು ಕುಟುಂಬದವರ ಜೊತೆ ಅದ್ದೂರಿಯಾಗಿ ಆರ್ಯನ್​ ಖಾನ್​ ಬರ್ತ್​ಡೇ (Aryan Khan Birthday) ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ವರ್ಷ ಪರಿಸ್ಥಿತಿ ಬದಲಾಗಿದೆ. ಡ್ರಗ್ಸ್​ ಕೇಸ್​ನಲ್ಲಿ ಅವರು ಸಿಕ್ಕಿಹಾಕಿಕೊಂಡಿದ್ದು, ಎನ್​ಸಿಬಿ (NCB) ಅಧಿಕಾರಿಗಳಿಂದ ವಿಚಾರಣೆಗೆ ಒಳಪಡುತ್ತಿದ್ದಾರೆ. ಅಲ್ಲದೇ, ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ಹೆಚ್ಚಾಗಿ ಯಾರನ್ನೂ ಅವರು ಭೇಟಿ ಮಾಡುತ್ತಿಲ್ಲ. ಈ ಎಲ್ಲ ಕಾರಣಗಳಿಂದ ಈ ವರ್ಷದ ಬರ್ತ್​ಡೇ ಅವರಿಗೆ ವಿಶೇಷವಾಗಿಲ್ಲ. ಅಚ್ಚರಿ ಎಂದರೆ ಹುಟ್ಟುಹಬ್ಬದ ದಿನ ಕೂಡ ಅವರು ಎನ್​ಸಿಬಿ ಕಚೇರಿಯಲ್ಲಿ ಕಾಲ ಕಳೆಯುವಂತಾಗಿದೆ.

ಶುಕ್ರವಾರ (ನ.12) ಬೆಳಗ್ಗೆ ಆರ್ಯನ್​ ಖಾನ್​ ಅವರು ಎನ್​ಸಿಬಿ ಕಚೇರಿಗೆ ಭೇಟಿ ನೀಡಿ ಸಹಿ ಹಾಕಿದ್ದಾರೆ. ಬಾಂಬೆ ಹೈಕೋರ್ಟ್​ನ ಆದೇಶದಂತೆ ಅವರು ಈ ರೀತಿ ಸಹಿ ಮಾಡುವುದು ಕಡ್ಡಾಯ. ಬಳಿಕ ಅವರು ವಿಶೇಷ ತನಿಖಾ ತಂಡದ ಎದುರು ಹಾಜರಾದರು. ಎನ್​ಸಿಬಿ ಡೆಪ್ಯೂಟಿ ಡೈರೆಕ್ಟರ್​ ಜನರಲ್​ ಸಂಜಯ್​ ಕುಮಾರ್​ ಸಿಂಗ್​ ಅವರು ಆರ್ಯನ್​ ಖಾನ್​ರನ್ನು ವಿಚಾರಣೆಗೆ ಒಳಪಡಿಸಿದರು. ಶುಕ್ರವಾರ ಮಧ್ಯರಾತ್ರಿವರೆಗೂ ವಿಚಾರಣೆ ಮುಂದುವರಿದಿತ್ತು. ಅಂದರೆ, ಮನೆಯಲ್ಲಿ ಆಪ್ತರ ಜೊತೆ ಬರ್ತ್​ಡೇ ಸೆಲೆಬ್ರೇಟ್​ ಮಾಡಿಕೊಳ್ಳಬೇಕಾದ ಹೊತ್ತಿನಲ್ಲಿ ಆರ್ಯನ್​ ಖಾನ್​ ಅವರು ಎನ್​ಸಿಬಿ ಅಧಿಕಾರಿಗಳ ಜೊತೆ ಕಾಲ ಕಳೆಯುವಂತಾಯಿತು ಎಂದು ವರದಿ ಆಗಿದೆ.

ಕಳೆದ 10 ವರ್ಷಗಳಿಂದಲೂ ಶಾರುಖ್​ ಖಾನ್​ಗೆ ಬಾಡಿಗಾರ್ಡ್​ ಆಗಿ ರವಿ ಸಿಂಗ್​ ಕೆಲಸ ಮಾಡುತ್ತಿದ್ದಾರೆ. ಶಾರುಖ್​ ಎಲ್ಲಿಯೇ ಹೋದರು ಅವರ ಜತೆ ರವಿ ಇರುತ್ತಾರೆ. ಎಷ್ಟೇ ದೊಡ್ಡ ಗುಂಪಿದ್ದರೂ ಶಾರುಖ್​ ಖಾನ್​ ಅವರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗುವ ಕೆಲಸವನ್ನು ರವಿ ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಈಗ ಆರ್ಯನ್​ ಜತೆ ರವಿ ಸಿಂಗ್​ ಅವರನ್ನು ಬಿಟ್ಟು, ತಾವು ಹೊಸ ಬಾಡಿಗಾರ್ಡ್ ಹುಡುಕಲು ಶಾರುಖ್​ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಶಾರುಖ್​ ಖಾನ್ ಅವರು ರವಿಗೆ​ ವರ್ಷಕ್ಕೆ 2.7 ಕೋಟಿ ರೂ. ಸಂಬಳ ನೀಡುತ್ತಾರೆ.

ಇದನ್ನೂ ಓದಿ:

‘ಆರ್ಯನ್​ ಖಾನ್​ ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್​ ಗಂಭೀರ ಆರೋಪ

Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು?

Published On - 9:55 am, Sat, 13 November 21

ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್