Aryan Khan: ಆರ್ಯನ್​ ಖಾನ್​ ಜನ್ಮದಿನ: ಮಧ್ಯರಾತ್ರಿ 12 ಗಂಟೆಗೆ NCB ಅಧಿಕಾರಿಗಳ ಜತೆ ಕಾಲ ಕಳೆದ ಶಾರುಖ್​ ಪುತ್ರ​

Aryan Khan Birthday: ಆರ್ಯನ್​ ಖಾನ್​ ಅವರು ಶುಕ್ರವಾರ (ನ.12) ಬೆಳಗ್ಗೆ ಎನ್​ಸಿಬಿ ಕಚೇರಿಗೆ ಭೇಟಿ ನೀಡಿ ಸಹಿ ಹಾಕಿದ್ದಾರೆ. ಬಾಂಬೆ ಹೈಕೋರ್ಟ್​ನ ಆದೇಶದಂತೆ ಅವರು ಈ ರೀತಿ ಸಹಿ ಮಾಡುವುದು ಕಡ್ಡಾಯ. ಬಳಿಕ ಅವರು ವಿಶೇಷ ತನಿಖಾ ತಂಡದ ಎದುರು ಹಾಜರಾದರು.

Aryan Khan: ಆರ್ಯನ್​ ಖಾನ್​ ಜನ್ಮದಿನ: ಮಧ್ಯರಾತ್ರಿ 12 ಗಂಟೆಗೆ NCB ಅಧಿಕಾರಿಗಳ ಜತೆ ಕಾಲ ಕಳೆದ ಶಾರುಖ್​ ಪುತ್ರ​
ಆರ್ಯನ್ ಖಾನ್
Follow us
| Edited By: ಮದನ್​ ಕುಮಾರ್​

Updated on:Nov 13, 2021 | 9:57 AM

ಶಾರುಖ್​ ಖಾನ್​ (Shah Rukh Khan) ಪುತ್ರ ಆರ್ಯನ್​ ಖಾನ್​ (Aryan Khan) ಅವರಿಗೆ ಇಂದು (ನ.13) ಜನ್ಮದಿನದ ಸಂಭ್ರಮ. 24ನೇ ವರ್ಷಕ್ಕೆ ಅವರು ಕಾಲಿಟ್ಟಿದ್ದು ಆಪ್ತರೆಲ್ಲ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಪ್ರತಿ ವರ್ಷ ಸ್ನೇಹಿತರು ಮತ್ತು ಕುಟುಂಬದವರ ಜೊತೆ ಅದ್ದೂರಿಯಾಗಿ ಆರ್ಯನ್​ ಖಾನ್​ ಬರ್ತ್​ಡೇ (Aryan Khan Birthday) ಆಚರಿಸಿಕೊಳ್ಳುತ್ತಿದ್ದರು. ಆದರೆ ಈ ವರ್ಷ ಪರಿಸ್ಥಿತಿ ಬದಲಾಗಿದೆ. ಡ್ರಗ್ಸ್​ ಕೇಸ್​ನಲ್ಲಿ ಅವರು ಸಿಕ್ಕಿಹಾಕಿಕೊಂಡಿದ್ದು, ಎನ್​ಸಿಬಿ (NCB) ಅಧಿಕಾರಿಗಳಿಂದ ವಿಚಾರಣೆಗೆ ಒಳಪಡುತ್ತಿದ್ದಾರೆ. ಅಲ್ಲದೇ, ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ಹೆಚ್ಚಾಗಿ ಯಾರನ್ನೂ ಅವರು ಭೇಟಿ ಮಾಡುತ್ತಿಲ್ಲ. ಈ ಎಲ್ಲ ಕಾರಣಗಳಿಂದ ಈ ವರ್ಷದ ಬರ್ತ್​ಡೇ ಅವರಿಗೆ ವಿಶೇಷವಾಗಿಲ್ಲ. ಅಚ್ಚರಿ ಎಂದರೆ ಹುಟ್ಟುಹಬ್ಬದ ದಿನ ಕೂಡ ಅವರು ಎನ್​ಸಿಬಿ ಕಚೇರಿಯಲ್ಲಿ ಕಾಲ ಕಳೆಯುವಂತಾಗಿದೆ.

ಶುಕ್ರವಾರ (ನ.12) ಬೆಳಗ್ಗೆ ಆರ್ಯನ್​ ಖಾನ್​ ಅವರು ಎನ್​ಸಿಬಿ ಕಚೇರಿಗೆ ಭೇಟಿ ನೀಡಿ ಸಹಿ ಹಾಕಿದ್ದಾರೆ. ಬಾಂಬೆ ಹೈಕೋರ್ಟ್​ನ ಆದೇಶದಂತೆ ಅವರು ಈ ರೀತಿ ಸಹಿ ಮಾಡುವುದು ಕಡ್ಡಾಯ. ಬಳಿಕ ಅವರು ವಿಶೇಷ ತನಿಖಾ ತಂಡದ ಎದುರು ಹಾಜರಾದರು. ಎನ್​ಸಿಬಿ ಡೆಪ್ಯೂಟಿ ಡೈರೆಕ್ಟರ್​ ಜನರಲ್​ ಸಂಜಯ್​ ಕುಮಾರ್​ ಸಿಂಗ್​ ಅವರು ಆರ್ಯನ್​ ಖಾನ್​ರನ್ನು ವಿಚಾರಣೆಗೆ ಒಳಪಡಿಸಿದರು. ಶುಕ್ರವಾರ ಮಧ್ಯರಾತ್ರಿವರೆಗೂ ವಿಚಾರಣೆ ಮುಂದುವರಿದಿತ್ತು. ಅಂದರೆ, ಮನೆಯಲ್ಲಿ ಆಪ್ತರ ಜೊತೆ ಬರ್ತ್​ಡೇ ಸೆಲೆಬ್ರೇಟ್​ ಮಾಡಿಕೊಳ್ಳಬೇಕಾದ ಹೊತ್ತಿನಲ್ಲಿ ಆರ್ಯನ್​ ಖಾನ್​ ಅವರು ಎನ್​ಸಿಬಿ ಅಧಿಕಾರಿಗಳ ಜೊತೆ ಕಾಲ ಕಳೆಯುವಂತಾಯಿತು ಎಂದು ವರದಿ ಆಗಿದೆ.

ಕಳೆದ 10 ವರ್ಷಗಳಿಂದಲೂ ಶಾರುಖ್​ ಖಾನ್​ಗೆ ಬಾಡಿಗಾರ್ಡ್​ ಆಗಿ ರವಿ ಸಿಂಗ್​ ಕೆಲಸ ಮಾಡುತ್ತಿದ್ದಾರೆ. ಶಾರುಖ್​ ಎಲ್ಲಿಯೇ ಹೋದರು ಅವರ ಜತೆ ರವಿ ಇರುತ್ತಾರೆ. ಎಷ್ಟೇ ದೊಡ್ಡ ಗುಂಪಿದ್ದರೂ ಶಾರುಖ್​ ಖಾನ್​ ಅವರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗುವ ಕೆಲಸವನ್ನು ರವಿ ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಈಗ ಆರ್ಯನ್​ ಜತೆ ರವಿ ಸಿಂಗ್​ ಅವರನ್ನು ಬಿಟ್ಟು, ತಾವು ಹೊಸ ಬಾಡಿಗಾರ್ಡ್ ಹುಡುಕಲು ಶಾರುಖ್​ ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಶಾರುಖ್​ ಖಾನ್ ಅವರು ರವಿಗೆ​ ವರ್ಷಕ್ಕೆ 2.7 ಕೋಟಿ ರೂ. ಸಂಬಳ ನೀಡುತ್ತಾರೆ.

ಇದನ್ನೂ ಓದಿ:

‘ಆರ್ಯನ್​ ಖಾನ್​ ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್​ ಗಂಭೀರ ಆರೋಪ

Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು?

Published On - 9:55 am, Sat, 13 November 21

ತಾಜಾ ಸುದ್ದಿ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಕಾವೇರಿ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಿಕೊಳ್ಳಲಾಗದು: ತೇಜಸ್ವೀ ಸೂರ್ಯ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಶಿವಕುಮಾರ್ ಯೋಚಿಸುವುದು ಬೇಡ: ಹೆಚ್ ಡಿ ಕೆ
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ದಸರಾ: ಮೈಸೂರಿನಲ್ಲಿ ಸ್ವಚ್ಛತಾ ಕಾರ್ಯ: ಮರದ ರಂಬೆ, ಕೊಂಬೆಗಳ ಕಟಾವು
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ
ಬಿಜೆಪಿ-ಜೆಡಿಎಸ್ ಮೈತ್ರಿ ಪರಿಣಾಮ:ಎರಡು ಪಕ್ಷಗಳ ಕೆಲ ಮುಖಂಡರು ಕಾಂಗ್ರೆಸ್​ಗೆ