AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದ ಮಗನ ಜತೆ ಹೆಮ್ಮೆಯಿಂದ ಪೋಸ್​ ಕೊಟ್ಟ ತಂದೆ; ನಗೆಪಾಟಲಿನ ವಿಡಿಯೋ ವೈರಲ್​

Arbaaz Merchant Viral Video: ಮಕ್ಕಳು ಏನಾದರೂ ತಪ್ಪು ಮಾಡಿ ಸಿಕ್ಕಿಬಿದ್ದರೆ ತಂದೆ-ತಾಯಿ ತಲೆ ತಗ್ಗಿಸುವಂತಹ ವಾತಾವರಣ ನಿರ್ಮಾಣ ಆಗುತ್ತದೆ. ಆದರೆ ಡ್ರಗ್ಸ್​ ಪ್ರಕರಣದ ಆರೋಪಿ ಅರ್ಬಾಜ್​​ ಮರ್ಚೆಂಟ್​ ಅವರ ತಂದೆಗೆ ಇದೇನೋ ಹೆಮ್ಮೆ ತರುವಂತಹ ಕೃತ್ಯದ ರೀತಿ ಕಾಣಿಸುತ್ತಿದೆ.

ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದ ಮಗನ ಜತೆ ಹೆಮ್ಮೆಯಿಂದ ಪೋಸ್​ ಕೊಟ್ಟ ತಂದೆ; ನಗೆಪಾಟಲಿನ ವಿಡಿಯೋ ವೈರಲ್​
ತಂದೆ ಜತೆ ಡ್ರಗ್ಸ್​ ಕೇಸ್​ ಆರೋಪಿ ಅರ್ಬಾಜ್​ ಮರ್ಚೆಂಟ್​
TV9 Web
| Edited By: |

Updated on:Nov 27, 2021 | 9:53 AM

Share

ಮುಂಬೈ ಡ್ರಗ್ಸ್​ ಕೇಸ್ (Drug Case)​ ಸಂಬಂಧಿಸಿದಂತೆ ವಿಚಾರಣೆ ಮುಂದುವರಿದಿದೆ. ಶಾರುಖ್​ ಖಾನ್ (Shah Rukh Khan)​ ಪುತ್ರ ಆರ್ಯನ್​ ಖಾನ್ (Aryan Khan )​ ಸೇರಿದಂತೆ ಅನೇಕ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಕೋರ್ಟ್​ ಆದೇಶದಂತೆ ಅವರೆಲ್ಲರೂ ಎನ್​ಸಿಬಿ ಕಚೇರಿಗೆ ಬಂದು ಸಹಿ ಹಾಕಬೇಕು. ಹಾಗಾಗಿ ಡ್ರಗ್ಸ್​ ಪ್ರಕರಣದ ಆರೋಪಿ ಅರ್ಬಾಜ್​​ ಮರ್ಚೆಂಟ್​ (Arbaaz Merchant) ಕೂಡ ಶುಕ್ರವಾರ (ನ.26) ಎನ್​ಸಿಬಿ ಕಚೇರಿಗೆ ಬಂದಿದ್ದರು. ಆ ವೇಳೆ ಅವರ ತಂದೆ ನಡೆದುಕೊಂಡ ರೀತಿ ಸಿಕ್ಕಾಪಟ್ಟೆ ವಿಚಿತ್ರವಾಗಿತ್ತು. ಮಾಧ್ಯಮಗಳಿಗೆ ಪೋಸ್​ ನೀಡುವಂತೆ ಮಗನಿಗೆ ಅವರು ಒತ್ತಾಯಿಸಿದರು. ಅಲ್ಲದೇ ತಾವು ಕೂಡ ಖುಷಿಖುಷಿಯಿಂದಲೇ ಕ್ಯಾಮೆರಾಗಳಿಗೆ ಪೋಸ್​ ನೀಡಿದರು. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ (Arbaaz Merchant Viral Video) ಆಗುತ್ತಿದೆ. ಅವರ ವರ್ತನೆಯನ್ನು ಅನೇಕರು ಖಂಡಿಸುತ್ತಿದ್ದಾರೆ.

ಮಕ್ಕಳು ಏನಾದರೂ ತಪ್ಪು ಮಾಡಿ ಸಿಕ್ಕಿಬಿದ್ದರೆ ತಂದೆ-ತಾಯಿ ತಲೆ ತಗ್ಗಿಸುವಂತಹ ವಾತಾವರಣ ನಿರ್ಮಾಣ ಆಗುತ್ತದೆ. ಆದರೆ ಡ್ರಗ್ಸ್​ ಪ್ರಕರಣದ ಆರೋಪಿ ಅರ್ಬಾಜ್​​ ಮರ್ಚೆಂಟ್​ ಅವರ ತಂದೆಗೆ ಇದೇನೋ ಹೆಮ್ಮೆ ತರುವಂತಹ ಕೃತ್ಯದ ರೀತಿ ಕಾಣಿಸುತ್ತಿದೆ. ಹಾಗಾಗಿ ಅವರು ಪಾಪರಾಜಿಗಳ ಕ್ಯಾಮೆರಾಗಳಿಗೆ ಪೋಸ್​ ನೀಡುವಂತೆ ಮಗನನ್ನು ಒತ್ತಾಯಿಸಿದರು. ಪುತ್ರನ ಮೈ ಮೇಲೆ ಕೈ ಹಾಕಿ ಅವರು ನಗುನಗುತ್ತಾ ಪೋಸ್​ ನೀಡಿದರು. ಅವರ ವರ್ತನೆಯಿಂದ ಅರ್ಬಾಜ್​​ ಮರ್ಚೆಂಟ್​ಗೆ ಸಿಕ್ಕಾಪಟ್ಟೆ ಕಿರಿಕಿರಿ ಆಯಿತು. ‘ಸ್ಟಾಪ್​ ಇಟ್​’ ಎಂದು ತಂದೆಗೆ ವಾರ್ನಿಂಗ್​ ನೀಡಿ ಅವರು ಕಾರು ಹತ್ತಿ ಹೊರಟು ಹೋದರು.

ಹೇಗಿದೆ ಆರ್ಯನ್​ ಖಾನ್​ ಪರಿಸ್ಥಿತಿ?

ಹುಟ್ಟಿನಿಂದಲೂ ಸುಖದ ಸುಪ್ಪತ್ತಿಗೆಯಲ್ಲಿ ಬೆಳೆದವರು ಆರ್ಯನ್​ ಖಾನ್​. ಹಾಗಾಗಿ ಅವರಿಗೆ ಜೈಲಿನಲ್ಲಿ ಹೊಂದಿಕೊಳ್ಳಲು ಕಷ್ಟ ಆಗಿತ್ತು. ಜೈಲಿನ ಕಠಿಣ ವಾತಾವರಣವು ಅವರ ಮನಸ್ಸಿನ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಕೋರ್ಟ್​ ತೀರ್ಪು ನೀಡುವುದಕ್ಕೂ ಮುನ್ನವೇ ಒಂದು ವರ್ಗದ ಜನರು ಆರ್ಯನ್​ ಖಾನ್​ರನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಇದರಿಂದ ಆರ್ಯನ್​ ಮನಸ್ಸಿಗೆ ಘಾಸಿ ಆಗಿದೆಯಂತೆ. ಆದ್ದರಿಂದ ಮಗನಿಗೆ ಆಪ್ತ ಸಮಾಲೋಚನೆ ಕೊಡಿಸಲು ಗೌರಿ ಖಾನ್​ ನಿರ್ಧರಿಸಿದ್ದಾರೆ. ಪುತ್ರನ ಮಾನಸಿಕ ಆರೋಗ್ಯದ ಬಗ್ಗೆ ಅವರು ಕಾಳಜಿ ವಹಿಸುತ್ತಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ:

Aryan Khan: ಆರ್ಯನ್​ ಖಾನ್​ ಜನ್ಮದಿನ: ಮಧ್ಯರಾತ್ರಿ 12 ಗಂಟೆಗೆ NCB ಅಧಿಕಾರಿಗಳ ಜತೆ ಕಾಲ ಕಳೆದ ಶಾರುಖ್​ ಪುತ್ರ​

‘ಆರ್ಯನ್​ ಖಾನ್​ ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್​ ಗಂಭೀರ ಆರೋಪ

Published On - 9:50 am, Sat, 27 November 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ