ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದ ಮಗನ ಜತೆ ಹೆಮ್ಮೆಯಿಂದ ಪೋಸ್​ ಕೊಟ್ಟ ತಂದೆ; ನಗೆಪಾಟಲಿನ ವಿಡಿಯೋ ವೈರಲ್​

Arbaaz Merchant Viral Video: ಮಕ್ಕಳು ಏನಾದರೂ ತಪ್ಪು ಮಾಡಿ ಸಿಕ್ಕಿಬಿದ್ದರೆ ತಂದೆ-ತಾಯಿ ತಲೆ ತಗ್ಗಿಸುವಂತಹ ವಾತಾವರಣ ನಿರ್ಮಾಣ ಆಗುತ್ತದೆ. ಆದರೆ ಡ್ರಗ್ಸ್​ ಪ್ರಕರಣದ ಆರೋಪಿ ಅರ್ಬಾಜ್​​ ಮರ್ಚೆಂಟ್​ ಅವರ ತಂದೆಗೆ ಇದೇನೋ ಹೆಮ್ಮೆ ತರುವಂತಹ ಕೃತ್ಯದ ರೀತಿ ಕಾಣಿಸುತ್ತಿದೆ.

ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದ ಮಗನ ಜತೆ ಹೆಮ್ಮೆಯಿಂದ ಪೋಸ್​ ಕೊಟ್ಟ ತಂದೆ; ನಗೆಪಾಟಲಿನ ವಿಡಿಯೋ ವೈರಲ್​
ತಂದೆ ಜತೆ ಡ್ರಗ್ಸ್​ ಕೇಸ್​ ಆರೋಪಿ ಅರ್ಬಾಜ್​ ಮರ್ಚೆಂಟ್​
Follow us
| Updated By: ಮದನ್​ ಕುಮಾರ್​

Updated on:Nov 27, 2021 | 9:53 AM

ಮುಂಬೈ ಡ್ರಗ್ಸ್​ ಕೇಸ್ (Drug Case)​ ಸಂಬಂಧಿಸಿದಂತೆ ವಿಚಾರಣೆ ಮುಂದುವರಿದಿದೆ. ಶಾರುಖ್​ ಖಾನ್ (Shah Rukh Khan)​ ಪುತ್ರ ಆರ್ಯನ್​ ಖಾನ್ (Aryan Khan )​ ಸೇರಿದಂತೆ ಅನೇಕ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಕೋರ್ಟ್​ ಆದೇಶದಂತೆ ಅವರೆಲ್ಲರೂ ಎನ್​ಸಿಬಿ ಕಚೇರಿಗೆ ಬಂದು ಸಹಿ ಹಾಕಬೇಕು. ಹಾಗಾಗಿ ಡ್ರಗ್ಸ್​ ಪ್ರಕರಣದ ಆರೋಪಿ ಅರ್ಬಾಜ್​​ ಮರ್ಚೆಂಟ್​ (Arbaaz Merchant) ಕೂಡ ಶುಕ್ರವಾರ (ನ.26) ಎನ್​ಸಿಬಿ ಕಚೇರಿಗೆ ಬಂದಿದ್ದರು. ಆ ವೇಳೆ ಅವರ ತಂದೆ ನಡೆದುಕೊಂಡ ರೀತಿ ಸಿಕ್ಕಾಪಟ್ಟೆ ವಿಚಿತ್ರವಾಗಿತ್ತು. ಮಾಧ್ಯಮಗಳಿಗೆ ಪೋಸ್​ ನೀಡುವಂತೆ ಮಗನಿಗೆ ಅವರು ಒತ್ತಾಯಿಸಿದರು. ಅಲ್ಲದೇ ತಾವು ಕೂಡ ಖುಷಿಖುಷಿಯಿಂದಲೇ ಕ್ಯಾಮೆರಾಗಳಿಗೆ ಪೋಸ್​ ನೀಡಿದರು. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ (Arbaaz Merchant Viral Video) ಆಗುತ್ತಿದೆ. ಅವರ ವರ್ತನೆಯನ್ನು ಅನೇಕರು ಖಂಡಿಸುತ್ತಿದ್ದಾರೆ.

ಮಕ್ಕಳು ಏನಾದರೂ ತಪ್ಪು ಮಾಡಿ ಸಿಕ್ಕಿಬಿದ್ದರೆ ತಂದೆ-ತಾಯಿ ತಲೆ ತಗ್ಗಿಸುವಂತಹ ವಾತಾವರಣ ನಿರ್ಮಾಣ ಆಗುತ್ತದೆ. ಆದರೆ ಡ್ರಗ್ಸ್​ ಪ್ರಕರಣದ ಆರೋಪಿ ಅರ್ಬಾಜ್​​ ಮರ್ಚೆಂಟ್​ ಅವರ ತಂದೆಗೆ ಇದೇನೋ ಹೆಮ್ಮೆ ತರುವಂತಹ ಕೃತ್ಯದ ರೀತಿ ಕಾಣಿಸುತ್ತಿದೆ. ಹಾಗಾಗಿ ಅವರು ಪಾಪರಾಜಿಗಳ ಕ್ಯಾಮೆರಾಗಳಿಗೆ ಪೋಸ್​ ನೀಡುವಂತೆ ಮಗನನ್ನು ಒತ್ತಾಯಿಸಿದರು. ಪುತ್ರನ ಮೈ ಮೇಲೆ ಕೈ ಹಾಕಿ ಅವರು ನಗುನಗುತ್ತಾ ಪೋಸ್​ ನೀಡಿದರು. ಅವರ ವರ್ತನೆಯಿಂದ ಅರ್ಬಾಜ್​​ ಮರ್ಚೆಂಟ್​ಗೆ ಸಿಕ್ಕಾಪಟ್ಟೆ ಕಿರಿಕಿರಿ ಆಯಿತು. ‘ಸ್ಟಾಪ್​ ಇಟ್​’ ಎಂದು ತಂದೆಗೆ ವಾರ್ನಿಂಗ್​ ನೀಡಿ ಅವರು ಕಾರು ಹತ್ತಿ ಹೊರಟು ಹೋದರು.

ಹೇಗಿದೆ ಆರ್ಯನ್​ ಖಾನ್​ ಪರಿಸ್ಥಿತಿ?

ಹುಟ್ಟಿನಿಂದಲೂ ಸುಖದ ಸುಪ್ಪತ್ತಿಗೆಯಲ್ಲಿ ಬೆಳೆದವರು ಆರ್ಯನ್​ ಖಾನ್​. ಹಾಗಾಗಿ ಅವರಿಗೆ ಜೈಲಿನಲ್ಲಿ ಹೊಂದಿಕೊಳ್ಳಲು ಕಷ್ಟ ಆಗಿತ್ತು. ಜೈಲಿನ ಕಠಿಣ ವಾತಾವರಣವು ಅವರ ಮನಸ್ಸಿನ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಕೋರ್ಟ್​ ತೀರ್ಪು ನೀಡುವುದಕ್ಕೂ ಮುನ್ನವೇ ಒಂದು ವರ್ಗದ ಜನರು ಆರ್ಯನ್​ ಖಾನ್​ರನ್ನು ತಪ್ಪಿತಸ್ಥನ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಇದರಿಂದ ಆರ್ಯನ್​ ಮನಸ್ಸಿಗೆ ಘಾಸಿ ಆಗಿದೆಯಂತೆ. ಆದ್ದರಿಂದ ಮಗನಿಗೆ ಆಪ್ತ ಸಮಾಲೋಚನೆ ಕೊಡಿಸಲು ಗೌರಿ ಖಾನ್​ ನಿರ್ಧರಿಸಿದ್ದಾರೆ. ಪುತ್ರನ ಮಾನಸಿಕ ಆರೋಗ್ಯದ ಬಗ್ಗೆ ಅವರು ಕಾಳಜಿ ವಹಿಸುತ್ತಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ:

Aryan Khan: ಆರ್ಯನ್​ ಖಾನ್​ ಜನ್ಮದಿನ: ಮಧ್ಯರಾತ್ರಿ 12 ಗಂಟೆಗೆ NCB ಅಧಿಕಾರಿಗಳ ಜತೆ ಕಾಲ ಕಳೆದ ಶಾರುಖ್​ ಪುತ್ರ​

‘ಆರ್ಯನ್​ ಖಾನ್​ ಕಿಡ್ನಾಪ್​ ಮಾಡಿ, ಹಣಕ್ಕಾಗಿ ಬೇಡಿಕೆ ಇಡಲಾಯ್ತು’: ನವಾಬ್​ ಮಲಿಕ್​ ಗಂಭೀರ ಆರೋಪ

Published On - 9:50 am, Sat, 27 November 21

ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು