AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾಲಿ ಹಾಳೆಗೆ ಸಮೀರ್​ ವಾಂಖೆಡೆ ಸಹಿ ಮಾಡಿಸಿಕೊಂಡ್ರು’: ಆರ್ಯನ್​ ಬಂಧಿಸಿದ ಅಧಿಕಾರಿ ಮೇಲೆ ಗಂಭೀರ ಆರೋಪ

ಪ್ರಭಾಕರ್​ ಸೈಲ್​ ಅವರು ಕೆಪಿ ಗೋಸಾವಿಯ ಬಾಡಿಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದರು. ರೇವ್​ ಪಾರ್ಟಿ ಮೇಲೆ ದಾಳಿ ನಡೆದ ದಿನ ಅವರು ಕೂಡ ಸ್ಥಳದಲ್ಲಿ ಇದ್ದರು. ಅವರೀಗ ಸ್ಫೋಟಕ ಹೇಳಿಕೆ ನೀಡಿದ್ದಾರೆ.

‘ಖಾಲಿ ಹಾಳೆಗೆ ಸಮೀರ್​ ವಾಂಖೆಡೆ ಸಹಿ ಮಾಡಿಸಿಕೊಂಡ್ರು’: ಆರ್ಯನ್​ ಬಂಧಿಸಿದ ಅಧಿಕಾರಿ ಮೇಲೆ ಗಂಭೀರ ಆರೋಪ
ಕೆಪಿ ಗೋಸಾವಿ, ಆರ್ಯನ್ ಖಾನ್
TV9 Web
| Edited By: |

Updated on: Oct 24, 2021 | 3:35 PM

Share

ಶಾರುಖ್ ಖಾನ್​ ಮಗ ಆರ್ಯನ್​ ಖಾನ್​ ಅವರ ಬಂಧನದ ಬಗ್ಗೆ ಅನೇಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಹಲವು ಬಾಲಿವುಡ್​ ಸೆಲೆಬ್ರಿಟಿಗಳು ಶಾರುಖ್​ ಕುಟುಂಬದ ಪರವಾಗಿ ಮಾತನಾಡುತ್ತಿದ್ದಾರೆ. ಆರ್ಯನ್​ ಬಂಧನದ ಹಿಂದೆ ಬೇರೇನೋ ಪಿತೂರಿ ಇದೆ ಎಂಬ ಶಂಕೆ ಕೂಡ ವ್ಯಕ್ತವಾಗುತ್ತಿದೆ. ಈಗ ಆ ಮಾತಿಗೆ ಪುಷ್ಟಿ ನೀಡುವಂತಹ ಘಟನೆ ನಡೆದಿದೆ. ಆರ್ಯನ್​ ಖಾನ್​ ರೇವ್​ ಪಾರ್ಟಿ ಮಾಡುತ್ತಿದ್ದರು ಎನ್ನಲಾದ ಐಷಾರಾಮಿ ಹಡಗಿನ ಮೇಲೆ ದಾಳಿ ನಡೆದ ಬಳಿಕ ಕೆಲವು ಸಾಕ್ಷಿದಾರರಿಂದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಅವರು ಖಾಲಿ ಹಾಳೆ ಮೇಲೆ ಸಹಿ ಹಾಕಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಆರ್ಯನ್​ ಖಾನ್​ ಅವರು ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದ ದಿನವೇ ವ್ಯಕ್ತಿಯೊಬ್ಬರು ಆರ್ಯನ್​ ಜೊತೆ ಸೆಲ್ಫಿ ತೆಗೆದುಕೊಂಡಿದ್ದು ವೈರಲ್​ ಆಗಿತ್ತು. ಆ ವ್ಯಕ್ತಿಯ ಹೆಸರು ಕೆಪಿ ಗೋಸಾವಿ. ಅವರು ಎನ್​ಸಿಬಿ ಸಿಬ್ಬಂದಿ ಅಲ್ಲ ಎಂಬುದು ನಂತರ ಗೊತ್ತಾಯಿತು. ಈಗ ಗೋಸಾವಿ ನಾಪತ್ತೆ ಆಗಿದ್ದಾರೆ. ಗೋಸಾವಿ ಆಪ್ತ ಎನ್ನಲಾದ ಪ್ರಭಾಕರ್​ ಸೈಲ್​ ಅವರು ಸಮೀರ್​ ವಾಂಖೆಡೆ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ತಮಗೆ ಜೀವ ಬೆದರಿಕೆ ಇದೆ ಎಂಬುದನ್ನೂ ಅವರು ತಿಳಿಸಿದ್ದಾರೆ.

ಪ್ರಭಾಕರ್​ ಸೈಲ್​ ಅವರು ಕೆಪಿ ಗೋಸಾವಿಯ ಬಾಡಿಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದರು. ರೇವ್​ ಪಾರ್ಟಿ ಮೇಲೆ ದಾಳಿ ನಡೆದ ದಿನ ಅವರು ಕೂಡ ಸ್ಥಳದಲ್ಲಿ ಇದ್ದರು. ಆದರೆ ದಾಳಿ ಬಗ್ಗೆ ತಮಗೇನೂ ಗೊತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ. ‘ಪಂಚನಾಮೆಯ ಖಾಲಿ ಹಾಳೆ ಮೇಲೆ ನಮ್ಮಿಂದ ಸಹಿ ಮಾಡಿಸಿಕೊಂಡರು. ಗೋಸಾವಿ ನಾಪತ್ತೆ ಆದ ಬಳಿಕ ಸಮೀರ್​ ವಾಂಖೆಡೆ ಅವರಿಂದ ನನಗೂ ಜೀವ ಬೆದರಿಕೆ ಇದೆ. 18 ಕೋಟಿ ರೂ. ಡೀಲ್​ ಬಗ್ಗೆ ನಾನು ಕೇಳಲ್ಪಟ್ಟಿದ್ದೇನೆ’ ಎಂದು ಪ್ರಭಾಕರ್​ ಸೈಲ್​ ಹೇಳಿದ್ದಾರೆ.

ಈ ಆರೋಪಕ್ಕೆ ಸಂಬಂಧ ಪಟ್ಟಂತೆ ಸಮೀರ್​ ವಾಂಖೆಡೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಭಾಕರ್​ ಸೈಲ್​ ಮಾಡಿದ ಎಲ್ಲ ಆರೋಪಗಳನ್ನು ಅವರು ತಳ್ಳಿ ಹಾಕಿದ್ದಾರೆ. ಶೀಘ್ರವೇ ಸೂಕ್ತ ಉತ್ತರ ನೀಡುವುದಾಗಿ ಅವರು ತಿಳಿಸಿದ್ದಾರೆ. ‘ದುಡ್ಡಿನ ವ್ಯವಹಾರ ನಡೆದಿದ್ದರೆ ಯಾರನ್ನಾದರೂ​ ಯಾಕೆ ಜೈಲಿಗೆ ಕಳಿಸಬೇಕಿತ್ತು?’ ಎಂದು ಅವರು ಪ್ರಶ್ನಿಸಿದ್ದಾರೆ. ಒಟ್ಟಾರೆ ಪ್ರಭಾಕರ್​ ಸೈಲ್​ ಹೇಳಿಕೆಯಿಂದ ಇಡೀ ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಸಿಕ್ಕಂತಾಗಿದೆ.

ಇದನ್ನೂ ಓದಿ:

ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!