AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohit Kamboj: ಆರ್ಯನ್​ ಖಾನ್​ ಕೇಸ್​ಗೆ ಹೊಸ ಟ್ವಿಸ್ಟ್​; ಬಿಜೆಪಿ ಮುಖಂಡ ಮೋಹಿತ್​ ಕಡೆಯಿಂದ ಗಂಭೀರ ಆರೋಪ

Aryan Khan Case: ‘ಮಹಾರಾಷ್ಟ್ರದ ಕೆಲವು ಸಚಿವರು ಶಾರುಖ್​ ಖಾನ್​ ಅವರಿಂದ ಹಣ ದೋಚಲು ಪ್ರಯತ್ನಿಸಿರಬಹುದು. ಈ ಹೈ ಪ್ರೊಫೈಲ್​ ಡ್ರಗ್​ ಕೇಸ್​ನಲ್ಲಿ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿಗೆ ಲಿಂಕ್​ ಇದೆ’ ಎಂದು ಬಿಜೆಪಿ ಮುಖಂಡ ಮೋಹಿತ್​ ಕಂಬೋಜ್​ ಆರೋಪಿಸಿದ್ದಾರೆ.

Mohit Kamboj: ಆರ್ಯನ್​ ಖಾನ್​ ಕೇಸ್​ಗೆ ಹೊಸ ಟ್ವಿಸ್ಟ್​; ಬಿಜೆಪಿ ಮುಖಂಡ ಮೋಹಿತ್​ ಕಡೆಯಿಂದ ಗಂಭೀರ ಆರೋಪ
ಮೋಹಿತ್​, ಆರ್ಯನ್​ ಖಾನ್​
TV9 Web
| Updated By: ಮದನ್​ ಕುಮಾರ್​|

Updated on: Nov 06, 2021 | 7:25 PM

Share

ಡ್ರಗ್ಸ್​ ಪಾರ್ಟಿ ಮಾಡಿದ ಆರೋಪ ಎದುರಿಸುತ್ತಿರುವ ಆರ್ಯುನ್​ ಖಾನ್​ ಸದ್ಯ ಜಾಮೀನು ಪಡೆದು ಮನೆಯಲ್ಲಿದ್ದಾರೆ. ಆದರೆ ಅವರ ಕೇಸ್​ ಕುರಿತಂತೆ ಅನೇಕ ಚರ್ಚೆಗಳು ನಡೆಯುತ್ತಿವೆ. ಒಟ್ಟಾರೆ ಈ ಪ್ರಕರಣದ ಹಿಂದೆ ಪ್ರಮುಖ ವ್ಯಕ್ತಿಗಳ ಕೈವಾಡ ಇದೆ ಎನ್ನಲಾಗುತ್ತಿದೆ. ಶಾರುಖ್​ ಖಾನ್​ ಅವರಿಂದ ಹಣ ಕೀಳಲು ಕೆಲವು ರಾಜಕೀಯ ವ್ಯಕ್ತಿಗಳು ಹುನ್ನಾರ ನಡೆಸಿದ್ದರಿಂದಲೇ ಆರ್ಯನ್​ ಖಾನ್​ ಮೇಲೆ ದಾಳಿ ನಡೆಯಿತು ಎಂದು ಬಿಜೆಪಿ ಮುಖಂಡ ಮೋಹಿತ್​ ಕಂಬೋಜ್​ ಆರೋಪಿಸಿದ್ದಾರೆ. ಈಗ ತಮ್ಮ ಜೀವಕ್ಕೆ ಅಪಾಯ ಇದೆ ಎಂದು ಕೂಡ ಅವರು ಹೇಳಿದ್ದಾರೆ.

‘ಮಹಾರಾಷ್ಟ್ರದ ಕೆಲವು ಸಚಿವರು ಶಾರುಖ್​ ಖಾನ್​ ಅವರಿಂದ ಹಣ ದೋಚಲು ಪ್ರಯತ್ನಿಸಿರಬಹುದು. ಈ ಹೈ ಪ್ರೊಫೈಲ್​ ಡ್ರಗ್​ ಕೇಸ್​ನಲ್ಲಿ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿಗೆ ಲಿಂಕ್​ ಇದೆ. ಮಾಜಿ ಗೃಹ ಸಚಿವ ಅನಿಲ್​ ದೇಖಮುಖ್​ ಅವರಿಗೆ ಆಪ್ತನಾಗಿರುವ ಸುನೀಲ್​ ಪಾಟೀಲ್​ ಎಂಬ ವ್ಯಕ್ತಿಯೇ ಈ ಡ್ರಗ್ಸ್​ ಕೇಸ್​ ಹಿಂದಿನ ಮಾಸ್ಟರ್​ ಮೈಂಡ್​’ ಎಂದು ಮೋಹಿತ್​ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿರುವ ಮೋಹಿತ್​ ಅವರು ಸುನೀಲ್​ ಪಾಟೀಲ್​ರದ್ದು ಎನ್ನಲಾದ ಆಡಿಯೋ ಕ್ಲಿಪ್​ ಒಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ತಾವು ಹೋಮ್​ ಮಿನಿಸ್ಟರ್​ಗೆ ಆಪ್ತ ಎಂದು ಸುನೀಲ್​ ಪಾಟೀಲ್​ ಹೇಳಿಕೊಂಡಿದ್ದಾರೆ. ಆ ಆಡಿಯೋ ಕ್ಲಿಪ್​ನ ಸತ್ಯಾಸತ್ಯತೆ ಬಗ್ಗೆ ಇನ್ನೂ ತನಿಖೆ ಆಗಬೇಕಿದೆ. ಸುದ್ದಿಗೋಷ್ಠಿ ನಡೆಸಿದ ಬಳಿಕ ತಮ್ಮ ಜೀವಕ್ಕೆ ಅಪಾಯ ಇದೆ ಎಂದು ಮೋಹಿತ್​ ಹೇಳಿದ್ದಾರೆ.

ಮೋಹಿತ್​ ಅವರ ಎಲ್ಲ ಆರೋಪಗಳನ್ನು ಎನ್​ಸಿಪಿ ಮುಖಂಡ ನವಾಬ್​ ಮಲಿಕ್​ ತಳ್ಳಿ ಹಾಕಿದ್ದಾರೆ. ‘ಸಮೀರ್​ ದಾವೂದ್​ ವಾಂಖೆಡೆಯ ಖಾಸಗಿ ಸೈನ್ಯ ಈಗ ಒಂದು ಸುದ್ದಿಗೋಷ್ಠಿ ನಡೆಸಿದೆ’ ಎಂದು ವ್ಯಂಗ್ಯವಾಗಿ ಅವರು ಟ್ವೀಟ್​ ಮಾಡಿದ್ದಾರೆ. ‘ಗಮನ ಬೇರೆಡೆಗೆ ಸೆಳೆದು ಸತ್ಯದ ದಾರಿ ತಪ್ಪಿಸಲು ಈ ವಿಫಲ ಪ್ರಯತ್ನ ಮಾಡಲಾಗಿದೆ’ ಎಂದು ನವಾಬ್​ ಮಲಿಕ್​ ಹೇಳಿದ್ದಾರೆ.

ಆರ್ಯನ್​ ಖಾನ್​ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಶಾರುಖ್​ ಪುತ್ರನನ್ನು ಬಂಧಿಸಿದ್ದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಮೇಲೆ ಹಲವು ಆರೋಪಗಳು ಕೇಳಿಬಂದಿವೆ. ಅದರ ಬೆನ್ನಲ್ಲೇ ಸಮೀರ್​ ವಾಂಖೆಡೆಗೆ ತನಿಖೆಯಿಂದ ಹೊರಗೆ ಉಳಿಯುವಂತೆ ಸೂಚಿಸಲಾಗಿದೆ. ಸದ್ಯ ಈ ಪ್ರಕರಣವನ್ನು ಕೇಂದ್ರದ ಉನ್ನತ ತಂಡ ವಹಿಸಿಕೊಂಡಿದೆ.

ಇದನ್ನೂ ಓದಿ:

Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು?

‘ಅಪ್ಪ-ಅಮ್ಮನ ವೆಡ್ಡಿಂಗ್​ ಆ್ಯನಿವರ್ಸರಿಗೆ ವಿಶ್​ ಮಾಡ್ಬೇಕು, ವಿಡಿಯೋ ಕಾಲ್​ ಮಾಡಿಕೊಡಿ ಪ್ಲೀಸ್​’; ಆರ್ಯನ್​ ಅಳಲು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ