AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohit Kamboj: ಆರ್ಯನ್​ ಖಾನ್​ ಕೇಸ್​ಗೆ ಹೊಸ ಟ್ವಿಸ್ಟ್​; ಬಿಜೆಪಿ ಮುಖಂಡ ಮೋಹಿತ್​ ಕಡೆಯಿಂದ ಗಂಭೀರ ಆರೋಪ

Aryan Khan Case: ‘ಮಹಾರಾಷ್ಟ್ರದ ಕೆಲವು ಸಚಿವರು ಶಾರುಖ್​ ಖಾನ್​ ಅವರಿಂದ ಹಣ ದೋಚಲು ಪ್ರಯತ್ನಿಸಿರಬಹುದು. ಈ ಹೈ ಪ್ರೊಫೈಲ್​ ಡ್ರಗ್​ ಕೇಸ್​ನಲ್ಲಿ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿಗೆ ಲಿಂಕ್​ ಇದೆ’ ಎಂದು ಬಿಜೆಪಿ ಮುಖಂಡ ಮೋಹಿತ್​ ಕಂಬೋಜ್​ ಆರೋಪಿಸಿದ್ದಾರೆ.

Mohit Kamboj: ಆರ್ಯನ್​ ಖಾನ್​ ಕೇಸ್​ಗೆ ಹೊಸ ಟ್ವಿಸ್ಟ್​; ಬಿಜೆಪಿ ಮುಖಂಡ ಮೋಹಿತ್​ ಕಡೆಯಿಂದ ಗಂಭೀರ ಆರೋಪ
ಮೋಹಿತ್​, ಆರ್ಯನ್​ ಖಾನ್​
TV9 Web
| Edited By: |

Updated on: Nov 06, 2021 | 7:25 PM

Share

ಡ್ರಗ್ಸ್​ ಪಾರ್ಟಿ ಮಾಡಿದ ಆರೋಪ ಎದುರಿಸುತ್ತಿರುವ ಆರ್ಯುನ್​ ಖಾನ್​ ಸದ್ಯ ಜಾಮೀನು ಪಡೆದು ಮನೆಯಲ್ಲಿದ್ದಾರೆ. ಆದರೆ ಅವರ ಕೇಸ್​ ಕುರಿತಂತೆ ಅನೇಕ ಚರ್ಚೆಗಳು ನಡೆಯುತ್ತಿವೆ. ಒಟ್ಟಾರೆ ಈ ಪ್ರಕರಣದ ಹಿಂದೆ ಪ್ರಮುಖ ವ್ಯಕ್ತಿಗಳ ಕೈವಾಡ ಇದೆ ಎನ್ನಲಾಗುತ್ತಿದೆ. ಶಾರುಖ್​ ಖಾನ್​ ಅವರಿಂದ ಹಣ ಕೀಳಲು ಕೆಲವು ರಾಜಕೀಯ ವ್ಯಕ್ತಿಗಳು ಹುನ್ನಾರ ನಡೆಸಿದ್ದರಿಂದಲೇ ಆರ್ಯನ್​ ಖಾನ್​ ಮೇಲೆ ದಾಳಿ ನಡೆಯಿತು ಎಂದು ಬಿಜೆಪಿ ಮುಖಂಡ ಮೋಹಿತ್​ ಕಂಬೋಜ್​ ಆರೋಪಿಸಿದ್ದಾರೆ. ಈಗ ತಮ್ಮ ಜೀವಕ್ಕೆ ಅಪಾಯ ಇದೆ ಎಂದು ಕೂಡ ಅವರು ಹೇಳಿದ್ದಾರೆ.

‘ಮಹಾರಾಷ್ಟ್ರದ ಕೆಲವು ಸಚಿವರು ಶಾರುಖ್​ ಖಾನ್​ ಅವರಿಂದ ಹಣ ದೋಚಲು ಪ್ರಯತ್ನಿಸಿರಬಹುದು. ಈ ಹೈ ಪ್ರೊಫೈಲ್​ ಡ್ರಗ್​ ಕೇಸ್​ನಲ್ಲಿ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿಗೆ ಲಿಂಕ್​ ಇದೆ. ಮಾಜಿ ಗೃಹ ಸಚಿವ ಅನಿಲ್​ ದೇಖಮುಖ್​ ಅವರಿಗೆ ಆಪ್ತನಾಗಿರುವ ಸುನೀಲ್​ ಪಾಟೀಲ್​ ಎಂಬ ವ್ಯಕ್ತಿಯೇ ಈ ಡ್ರಗ್ಸ್​ ಕೇಸ್​ ಹಿಂದಿನ ಮಾಸ್ಟರ್​ ಮೈಂಡ್​’ ಎಂದು ಮೋಹಿತ್​ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿರುವ ಮೋಹಿತ್​ ಅವರು ಸುನೀಲ್​ ಪಾಟೀಲ್​ರದ್ದು ಎನ್ನಲಾದ ಆಡಿಯೋ ಕ್ಲಿಪ್​ ಒಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ತಾವು ಹೋಮ್​ ಮಿನಿಸ್ಟರ್​ಗೆ ಆಪ್ತ ಎಂದು ಸುನೀಲ್​ ಪಾಟೀಲ್​ ಹೇಳಿಕೊಂಡಿದ್ದಾರೆ. ಆ ಆಡಿಯೋ ಕ್ಲಿಪ್​ನ ಸತ್ಯಾಸತ್ಯತೆ ಬಗ್ಗೆ ಇನ್ನೂ ತನಿಖೆ ಆಗಬೇಕಿದೆ. ಸುದ್ದಿಗೋಷ್ಠಿ ನಡೆಸಿದ ಬಳಿಕ ತಮ್ಮ ಜೀವಕ್ಕೆ ಅಪಾಯ ಇದೆ ಎಂದು ಮೋಹಿತ್​ ಹೇಳಿದ್ದಾರೆ.

ಮೋಹಿತ್​ ಅವರ ಎಲ್ಲ ಆರೋಪಗಳನ್ನು ಎನ್​ಸಿಪಿ ಮುಖಂಡ ನವಾಬ್​ ಮಲಿಕ್​ ತಳ್ಳಿ ಹಾಕಿದ್ದಾರೆ. ‘ಸಮೀರ್​ ದಾವೂದ್​ ವಾಂಖೆಡೆಯ ಖಾಸಗಿ ಸೈನ್ಯ ಈಗ ಒಂದು ಸುದ್ದಿಗೋಷ್ಠಿ ನಡೆಸಿದೆ’ ಎಂದು ವ್ಯಂಗ್ಯವಾಗಿ ಅವರು ಟ್ವೀಟ್​ ಮಾಡಿದ್ದಾರೆ. ‘ಗಮನ ಬೇರೆಡೆಗೆ ಸೆಳೆದು ಸತ್ಯದ ದಾರಿ ತಪ್ಪಿಸಲು ಈ ವಿಫಲ ಪ್ರಯತ್ನ ಮಾಡಲಾಗಿದೆ’ ಎಂದು ನವಾಬ್​ ಮಲಿಕ್​ ಹೇಳಿದ್ದಾರೆ.

ಆರ್ಯನ್​ ಖಾನ್​ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಶಾರುಖ್​ ಪುತ್ರನನ್ನು ಬಂಧಿಸಿದ್ದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಮೇಲೆ ಹಲವು ಆರೋಪಗಳು ಕೇಳಿಬಂದಿವೆ. ಅದರ ಬೆನ್ನಲ್ಲೇ ಸಮೀರ್​ ವಾಂಖೆಡೆಗೆ ತನಿಖೆಯಿಂದ ಹೊರಗೆ ಉಳಿಯುವಂತೆ ಸೂಚಿಸಲಾಗಿದೆ. ಸದ್ಯ ಈ ಪ್ರಕರಣವನ್ನು ಕೇಂದ್ರದ ಉನ್ನತ ತಂಡ ವಹಿಸಿಕೊಂಡಿದೆ.

ಇದನ್ನೂ ಓದಿ:

Aryan Khan: 22 ದಿನ ಜೈಲಿನಲ್ಲಿದ್ದ ಆರ್ಯನ್​ ಖಾನ್​ಗೆ ಈಗ ಮನೆಯವರಿಂದಲೇ ಬ್ಲಡ್​ ಟೆಸ್ಟ್​; ಕಾರಣ ಏನು?

‘ಅಪ್ಪ-ಅಮ್ಮನ ವೆಡ್ಡಿಂಗ್​ ಆ್ಯನಿವರ್ಸರಿಗೆ ವಿಶ್​ ಮಾಡ್ಬೇಕು, ವಿಡಿಯೋ ಕಾಲ್​ ಮಾಡಿಕೊಡಿ ಪ್ಲೀಸ್​’; ಆರ್ಯನ್​ ಅಳಲು?

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್