AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiran Gosavi: ಆರ್ಯನ್​ ಸಿಕ್ಕಿಬಿದ್ದಾಗ ಸೆಲ್ಫಿ ಕ್ಲಿಕ್ಕಿಸಿ ಖುಷಿಪಟ್ಟಿದ್ದ ಕಿರಣ್​ ಗೋಸಾವಿ ಅರೆಸ್ಟ್​;​ ಈ ವ್ಯಕ್ತಿ ಮೇಲಿನ ಆರೋಪ ಒಂದೆರಡಲ್ಲ

Aryan Khan: ಆರ್ಯನ್​ ಖಾನ್​ ಬಂಧನದ ಬಗ್ಗೆ ಅನುಮಾನ ಮೂಡುತ್ತಿದ್ದಂತೆಯೇ ಕಿರಣ್​ ಗೋಸಾವಿ ನಾಪತ್ತೆ ಆಗಿದ್ದರು. ಪುಣೆ ಪೊಲೀಸರು ಗೋಸಾವಿಗಾಗಿ ಈ ಮೊದಲಿನಿಂದಲೂ ಹುಡುಕಾಟ ನಡೆಸಿದ್ದರು. ಈಗ ಅವರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

Kiran Gosavi: ಆರ್ಯನ್​ ಸಿಕ್ಕಿಬಿದ್ದಾಗ ಸೆಲ್ಫಿ ಕ್ಲಿಕ್ಕಿಸಿ ಖುಷಿಪಟ್ಟಿದ್ದ ಕಿರಣ್​ ಗೋಸಾವಿ ಅರೆಸ್ಟ್​;​ ಈ ವ್ಯಕ್ತಿ ಮೇಲಿನ ಆರೋಪ ಒಂದೆರಡಲ್ಲ
ಕಿರಣ್ ಗೋಸಾವಿ, ಆರ್ಯನ್ ಖಾನ್
TV9 Web
| Edited By: |

Updated on: Oct 28, 2021 | 8:58 AM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ (Aryan Khan) ಅವರ ಡ್ರಗ್ಸ್​ ಪ್ರಕರಣ ದಿನದಿಂದ ದಿನಕ್ಕೆ ಬೇರೆಬೇರೆ ಸ್ವರೂಪ ಪಡೆದುಕೊಳ್ಳುತ್ತಿದೆ. ಎನ್​ಸಿಬಿ ಅಧಿಕಾರಿಗಳ ತನಿಖೆ ಬಗ್ಗೆಯೂ ಅನೇಕ ಅನುಮಾನಗಳು ವ್ಯಕ್ತವಾಗಿವೆ. ಅಚ್ಚರಿ ಎಂದರೆ ಐಷಾರಾಮಿ ಹಡಗಿನ ಮೇಲಿನ ದಾಳಿ ಸಂದರ್ಭದಲ್ಲಿ ಎನ್​ಸಿಬಿಗೆ ಸಂಬಂಧವೇ ಇಲ್ಲದ ವ್ಯಕ್ತಿಗಳು ಕೂಡ ಹಾಜರಿದ್ದರು. ಆ ಪೈಕಿ ಪ್ರಮುಖವಾಗಿ ಕೇಳಿಬಂದ ಹೆಸರು ಕಿರಣ್​ ಗೋಸಾವಿ. ಆರ್ಯನ್​ ಖಾನ್​ ಸಿಕ್ಕಿಬಿದ್ದಾಗ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಕಿರಣ್​ ಗೋಸಾವಿ (Kiran Gosavi ) ಖುಷಿಪಟ್ಟಿದ್ದರು. ಆದರೆ ಈಗ ಅವರು ಪುಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಆರ್ಯನ್​ ಖಾನ್​ ಬಂಧನದ ಬಗ್ಗೆ ಅನುಮಾನ ಮೂಡುತ್ತಿದ್ದಂತೆಯೇ ಕಿರಣ್​ ಗೋಸಾವಿ ನಾಪತ್ತೆ ಆಗಿದ್ದರು. ಅವರಿಗೂ ಎನ್​ಸಿಬಿಗೂ ಯಾವುದೇ ಸಂಬಂಧ ಇಲ್ಲ ಎಂದು ಎನ್​ಸಿಬಿ ಕಡೆಯಿಂದಲೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗಿತ್ತು. ಆದರೆ ಅವರನ್ನು ಈ ಪ್ರಕರಣದ ಪ್ರಮುಖ ಸಾಕ್ಷಿ ಎಂದು ಪರಿಗಣಿಸಲಾಗಿತ್ತು. ಕಿರಣ್​ ಗೋಸಾವಿ ನಾಪತ್ತೆ ಆದ ಬಳಿಕ ಅವರ ಬಾಡಿಗಾರ್ಡ್​ ಪ್ರಭಾಕರ್​ ಸೈಲ್​ ಕೆಲವು ಗಂಭೀರ ಆರೋಪ ಮಾಡಿದ್ದರು. ಎನ್​ಸಿಬಿ ಅಧಿಕಾರಿಗಳು ಖಾಲಿ ಹಾಳೆ ಮೇಲೆ ಸಹಿ ಮಾಡಿಸಿಕೊಂಡರು. ಬಹುಕೋಟಿ ಡೀಲ್​ ನಡೆದಿದೆ. ತಮ್ಮ ಮೇಲೆ ಜೀವ ಬೆದರಿಕೆ ಹಾಕಲಾಗಿದೆ ಎಂಬಿತ್ಯಾದಿ ಆರೋಪಗಳನ್ನು ಅವರು ಮಾಡಿದ್ದರು. ಇದರ ಬೆನ್ನಲೇ ಪುಣೆ ಪೊಲೀಸರು ಗೋಸಾವಿಯನ್ನು ಅರೆಸ್ಟ್​ ಮಾಡಿದ್ದಾರೆ.

ಗೋಸಾವಿ ಓರ್ವ ಖಾಸಗಿ ಡಿಟೆಕ್ಟೀವ್​ ಎಂದು ಹೇಳಲಾಗಿದೆ. ಅವರ ವಿರುದ್ಧ ಹಲವು ಕೇಸ್​ಗಳು ಇವೆ. ಅನೇಕರಿಗೆ ಮೋಸ ಮಾಡಿ ಎಸ್ಕೇಪ್​ ಆಗಿರುವ ಬಗ್ಗೆ ದೂರುಗಳು ದಾಖಲಾಗಿದ್ದವು. ಪುಣೆ ಪೊಲೀಸರು ಗೋಸಾವಿಗಾಗಿ ಈ ಮೊದಲಿನಿಂದಲೂ ಹುಡುಕಾಟ ನಡೆಸಿದ್ದರು. ಈಗ ಅವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ತನಿಖೆ ಮುಂದುವರಿದಿದ್ದು, ಈ ವ್ಯಕ್ತಿಯ ಇನ್ನಷ್ಟು ಕರಾಮತ್ತುಗಳ ಬಗ್ಗೆ ಮಾಹಿತಿ ಸಿಗಬೇಕಿದೆ.

ಆರ್ಯನ್​ ಖಾನ್​ ಅರೆಸ್ಟ್​ ಆದ ದಿನ ಶಾರುಖ್​ ಮ್ಯಾನೇಜರ್​ ಜೊತೆ ಮಾತನಾಡಲು ಆರ್ಯನ್​ಗೆ ಗೋಸಾವಿಯ ಫೋನ್​ ನೀಡಲಾಗಿತ್ತು. ಅದರ ವಿಡಿಯೋ ಕೂಡ ಈಗಾಗಲೇ ವೈರಲ್​ ಆಗಿದೆ. ಅಂದು ಶಾರುಖ್​ ಮ್ಯಾನೇಜರ್​ ಜೊತೆ ಬಹುಕೋಟಿ ಡೀಲ್​ ಖುದುರಿಸುವ ಪ್ರಯತ್ನ ನಡೆದಿತ್ತು ಎಂಬ ಶಂಕೆ ಕೂಡ ವ್ಯಕ್ತವಾಗಿದೆ.

ಇದನ್ನೂ ಓದಿ:

ಜೈಲಲ್ಲಿ ರಾಮ-ಸೀತೆಯ ಪುಸ್ತಕ ಓದುತ್ತಿರುವ ಆರ್ಯನ್​ ಖಾನ್​; ಜಾಮೀನು ಸಿಗದೇ ಸ್ಟಾರ್​ ಪುತ್ರ ಕಂಗಾಲು

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್