AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

Aryan Khan Case: ಜೈಲಿನ ಶೌಚಾಲಯವನ್ನು ಬಳಸಲು ಆರ್ಯನ್​ ಖಾನ್​ ಹಿಂದೆಮುಂದೆ ನೋಡುತ್ತಿದ್ದಾರೆ. ಶೌಚಾಲಯಕ್ಕೆ ಹೋಗುವುದನ್ನು ತಪ್ಪಿಸಲು ಅವರು ಊಟ, ನೀರು ಸೇವಿಸುವುದನ್ನು ಕಡಿಮೆ ಮಾಡಿದ್ದಾರೆ ಎನ್ನಲಾಗುತ್ತಿದೆ.

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ
ಆರ್ಯನ್​ ಖಾನ್​, ಶಾರುಖ್​ ಖಾನ್​
TV9 Web
| Edited By: |

Updated on: Oct 19, 2021 | 8:13 AM

Share

ಡ್ರಗ್ಸ್​ ಪಾರ್ಟಿ ಮಾಡಿದ ಆರೋಪದ ಮೇಲೆ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಜೈಲು ಸೇರಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಮುಂಬೈನ ಆರ್ಥರ್​ ರೋಡ್​ ಜೈಲಿನಲ್ಲಿ ಇರುವ ಅವರಿಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಆದರೆ ಅವರ ಪ್ರಯತ್ನ ಫಲಿಸುತ್ತಿಲ್ಲ. ಈ ನಡುವೆ ಹೊಸ ಸುದ್ದಿಯೊಂದು ಕೇಳಿಬಂದಿದೆ. ಜೈಲಿನಲ್ಲಿ ಆರ್ಯನ್​ ಖಾನ್​ ಸ್ನಾನ ಮಾಡುತ್ತಿಲ್ಲ ಎನ್ನಲಾಗಿದೆ. ಇದು ಜೈಲು ಅಧಿಕಾರಿಗಳಿಗೆ ತಲೆನೋವು ತಂದಿದೆ. ಈ ಕುರಿತು ಹಲವು ಕಡೆಗಳಲ್ಲಿ ವರದಿ ಆಗಿದೆ.

ಸ್ಟಾರ್​ ಪುತ್ರನಾಗಿ ಹುಟ್ಟಿದ ಆರ್ಯನ್​ ಖಾನ್​ ಅವರು ಜೀವನದಲ್ಲಿ ಕಷ್ಟವನ್ನೇ ಕಂಡಿರಲಿಲ್ಲ. ಇಷ್ಟು ದಿನ ಐಷಾರಾಮಿ ಜೀವನ ಸಾಗಿಸಿದ್ದ ಅವರಿಗೆ ಈಗ ಜೈಲಿನಲ್ಲಿ ಹೊಂದಿಕೊಳ್ಳುವುದು ಕಷ್ಟ ಆಗಿದೆ. ಅಲ್ಲಿನ ಶೌಚಾಲಯವನ್ನು ಬಳಸಲು ಆರ್ಯನ್​ ಹಿಂದೆಮುಂದೆ ನೋಡುತ್ತಿದ್ದಾರೆ. ಶೌಚಾಲಯಕ್ಕೆ ಹೋಗುವುದನ್ನು ತಪ್ಪಿಸಲು ಅವರು ಊಟ, ನೀರು ಸೇವಿಸುವುದನ್ನು ಕಡಿಮೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಸ್ನಾನವನ್ನೂ ಮಾಡುತ್ತಿಲ್ಲ ಎಂಬ ಮಾಹಿತಿ ಕೇಳಿಬಂದಿದೆ.

ಶಾರುಖ್​ ಪುತ್ರನ ಈ ವರ್ತನೆಯಿಂದ ಜೈಲು ಅಧಿಕಾರಿಗಳಿಗೆ ತಲೆನೋವು ಉಂಟಾಗಿದೆ. ಹೀಗೆಲ್ಲ ಮಾಡಿ ಆರೋಗ್ಯ ಕೆಡಿಸಿಕೊಂಡರೆ ಮುಂದಿನ ವಿಚಾರಣೆಗೆ ತೊಂದರೆ ಆಗುತ್ತದೆ. ಹಾಗಾಗಿ ಜೈಲು ಅಧಿಕಾರಿಗಳು ಶಾರುಖ್​ ಪುತ್ರನನ್ನು ಬೇರೊಂದು ಸೆಲ್​ಗೆ ವರ್ಗಾಯಿಸಿದ್ದಾರೆ. ಆದರೆ ಅಲ್ಲಿ ಅವರನ್ನು ಭೇಟಿ ಮಾಡಲು ಶಾರುಖ್​ ಖಾನ್​, ಗೌರಿ ಖಾನ್​ ಸೇರಿದಂತೆ ಯಾರಿಗೂ ಅವಕಾಶ ನೀಡಿಲ್ಲ. ಕೇವಲ ವಿಡಿಯೋ ಕಾಲ್​ ಮೂಲಕ ಮಾತನಾಡಲು ಅವಕಾಶ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಅ.20ರವರೆಗೆ ಆರ್ಯನ್ ಖಾನ್​ ಜೈಲಿನಲ್ಲೇ ಕಳೆಯಬೇಕಾಗಿದೆ. ಆ ಬಳಿಕ ಅವರಿಗೆ ಜಾಮೀನು ಸಿಗುತ್ತೋ ಇಲ್ಲವೋ ಎಂಬ ಕೌತುಕ ಮನೆ ಮಾಡಿದೆ. ಘಟಾನುಘಟಿ ವಕೀಲರ ಸಹಾಯ ಪಡೆದುಕೊಳ್ಳುತ್ತಿರುವ ಶಾರುಖ್​ ಖಾನ್​ ಅವರು ಮಗನಿಗೆ ಜಾಮೀನು ಕೊಡಿಸಲು ಕಷ್ಟಪಡುತ್ತಿದ್ದಾರೆ. ಆರ್ಯನ್​ ಖಾನ್​ ಮಾಡಿದ ತಪ್ಪಿನಿಂದಾಗಿ ಶಾರುಖ್​ ವೃತ್ತಿಜೀವನ ಕೂಡ ಹಾದಿ ತಪ್ಪುವಂತಾಗಿದೆ. ಅನೇಕ ಪ್ರತಿಷ್ಠಿತ ಕಂಪನಿಗಳು ಶಾರುಖ್​ ಜೊತೆ ಮಾಡಿಕೊಂಡಿದ್ದ ಜಾಹೀರಾತು ಒಪ್ಪಂದವನ್ನು ಮುರಿದುಕೊಳ್ಳುತ್ತಿವೆ.

ಇದನ್ನೂ ಓದಿ:

ಇಲ್ಲೊಬ್ಬ ಬಡಪಾಯಿ, ನಕಲಿ ಶಾರುಖ್​ ಖಾನ್​ಗೆ ಮಕ್ಕಳ ಶಾಲೆ ಫೀಸ್​ ಕಟ್ಟಲು ದುಡ್ಡಿಲ್ಲ; ಯಾರಿದು?

‘ಇನ್ಮೇಲೆ ಒಳ್ಳೇ ಮನುಷ್ಯ ಆಗ್ತೀನಿ’; ಎನ್​ಸಿಬಿ ಅಧಿಕಾರಿಗಳಿಗೆ ಭರವಸೆ ನೀಡಿದ ಶಾರುಖ್​ ಪುತ್ರ ಆರ್ಯನ್​ ಖಾನ್​

Follow Us
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?