AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

Aryan Khan Case: ಜೈಲಿನ ಶೌಚಾಲಯವನ್ನು ಬಳಸಲು ಆರ್ಯನ್​ ಖಾನ್​ ಹಿಂದೆಮುಂದೆ ನೋಡುತ್ತಿದ್ದಾರೆ. ಶೌಚಾಲಯಕ್ಕೆ ಹೋಗುವುದನ್ನು ತಪ್ಪಿಸಲು ಅವರು ಊಟ, ನೀರು ಸೇವಿಸುವುದನ್ನು ಕಡಿಮೆ ಮಾಡಿದ್ದಾರೆ ಎನ್ನಲಾಗುತ್ತಿದೆ.

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ
ಆರ್ಯನ್​ ಖಾನ್​, ಶಾರುಖ್​ ಖಾನ್​
TV9 Web
| Updated By: ಮದನ್​ ಕುಮಾರ್​|

Updated on: Oct 19, 2021 | 8:13 AM

Share

ಡ್ರಗ್ಸ್​ ಪಾರ್ಟಿ ಮಾಡಿದ ಆರೋಪದ ಮೇಲೆ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಜೈಲು ಸೇರಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಮುಂಬೈನ ಆರ್ಥರ್​ ರೋಡ್​ ಜೈಲಿನಲ್ಲಿ ಇರುವ ಅವರಿಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಮತ್ತು ಗೌರಿ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಆದರೆ ಅವರ ಪ್ರಯತ್ನ ಫಲಿಸುತ್ತಿಲ್ಲ. ಈ ನಡುವೆ ಹೊಸ ಸುದ್ದಿಯೊಂದು ಕೇಳಿಬಂದಿದೆ. ಜೈಲಿನಲ್ಲಿ ಆರ್ಯನ್​ ಖಾನ್​ ಸ್ನಾನ ಮಾಡುತ್ತಿಲ್ಲ ಎನ್ನಲಾಗಿದೆ. ಇದು ಜೈಲು ಅಧಿಕಾರಿಗಳಿಗೆ ತಲೆನೋವು ತಂದಿದೆ. ಈ ಕುರಿತು ಹಲವು ಕಡೆಗಳಲ್ಲಿ ವರದಿ ಆಗಿದೆ.

ಸ್ಟಾರ್​ ಪುತ್ರನಾಗಿ ಹುಟ್ಟಿದ ಆರ್ಯನ್​ ಖಾನ್​ ಅವರು ಜೀವನದಲ್ಲಿ ಕಷ್ಟವನ್ನೇ ಕಂಡಿರಲಿಲ್ಲ. ಇಷ್ಟು ದಿನ ಐಷಾರಾಮಿ ಜೀವನ ಸಾಗಿಸಿದ್ದ ಅವರಿಗೆ ಈಗ ಜೈಲಿನಲ್ಲಿ ಹೊಂದಿಕೊಳ್ಳುವುದು ಕಷ್ಟ ಆಗಿದೆ. ಅಲ್ಲಿನ ಶೌಚಾಲಯವನ್ನು ಬಳಸಲು ಆರ್ಯನ್​ ಹಿಂದೆಮುಂದೆ ನೋಡುತ್ತಿದ್ದಾರೆ. ಶೌಚಾಲಯಕ್ಕೆ ಹೋಗುವುದನ್ನು ತಪ್ಪಿಸಲು ಅವರು ಊಟ, ನೀರು ಸೇವಿಸುವುದನ್ನು ಕಡಿಮೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಸ್ನಾನವನ್ನೂ ಮಾಡುತ್ತಿಲ್ಲ ಎಂಬ ಮಾಹಿತಿ ಕೇಳಿಬಂದಿದೆ.

ಶಾರುಖ್​ ಪುತ್ರನ ಈ ವರ್ತನೆಯಿಂದ ಜೈಲು ಅಧಿಕಾರಿಗಳಿಗೆ ತಲೆನೋವು ಉಂಟಾಗಿದೆ. ಹೀಗೆಲ್ಲ ಮಾಡಿ ಆರೋಗ್ಯ ಕೆಡಿಸಿಕೊಂಡರೆ ಮುಂದಿನ ವಿಚಾರಣೆಗೆ ತೊಂದರೆ ಆಗುತ್ತದೆ. ಹಾಗಾಗಿ ಜೈಲು ಅಧಿಕಾರಿಗಳು ಶಾರುಖ್​ ಪುತ್ರನನ್ನು ಬೇರೊಂದು ಸೆಲ್​ಗೆ ವರ್ಗಾಯಿಸಿದ್ದಾರೆ. ಆದರೆ ಅಲ್ಲಿ ಅವರನ್ನು ಭೇಟಿ ಮಾಡಲು ಶಾರುಖ್​ ಖಾನ್​, ಗೌರಿ ಖಾನ್​ ಸೇರಿದಂತೆ ಯಾರಿಗೂ ಅವಕಾಶ ನೀಡಿಲ್ಲ. ಕೇವಲ ವಿಡಿಯೋ ಕಾಲ್​ ಮೂಲಕ ಮಾತನಾಡಲು ಅವಕಾಶ ನೀಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಅ.20ರವರೆಗೆ ಆರ್ಯನ್ ಖಾನ್​ ಜೈಲಿನಲ್ಲೇ ಕಳೆಯಬೇಕಾಗಿದೆ. ಆ ಬಳಿಕ ಅವರಿಗೆ ಜಾಮೀನು ಸಿಗುತ್ತೋ ಇಲ್ಲವೋ ಎಂಬ ಕೌತುಕ ಮನೆ ಮಾಡಿದೆ. ಘಟಾನುಘಟಿ ವಕೀಲರ ಸಹಾಯ ಪಡೆದುಕೊಳ್ಳುತ್ತಿರುವ ಶಾರುಖ್​ ಖಾನ್​ ಅವರು ಮಗನಿಗೆ ಜಾಮೀನು ಕೊಡಿಸಲು ಕಷ್ಟಪಡುತ್ತಿದ್ದಾರೆ. ಆರ್ಯನ್​ ಖಾನ್​ ಮಾಡಿದ ತಪ್ಪಿನಿಂದಾಗಿ ಶಾರುಖ್​ ವೃತ್ತಿಜೀವನ ಕೂಡ ಹಾದಿ ತಪ್ಪುವಂತಾಗಿದೆ. ಅನೇಕ ಪ್ರತಿಷ್ಠಿತ ಕಂಪನಿಗಳು ಶಾರುಖ್​ ಜೊತೆ ಮಾಡಿಕೊಂಡಿದ್ದ ಜಾಹೀರಾತು ಒಪ್ಪಂದವನ್ನು ಮುರಿದುಕೊಳ್ಳುತ್ತಿವೆ.

ಇದನ್ನೂ ಓದಿ:

ಇಲ್ಲೊಬ್ಬ ಬಡಪಾಯಿ, ನಕಲಿ ಶಾರುಖ್​ ಖಾನ್​ಗೆ ಮಕ್ಕಳ ಶಾಲೆ ಫೀಸ್​ ಕಟ್ಟಲು ದುಡ್ಡಿಲ್ಲ; ಯಾರಿದು?

‘ಇನ್ಮೇಲೆ ಒಳ್ಳೇ ಮನುಷ್ಯ ಆಗ್ತೀನಿ’; ಎನ್​ಸಿಬಿ ಅಧಿಕಾರಿಗಳಿಗೆ ಭರವಸೆ ನೀಡಿದ ಶಾರುಖ್​ ಪುತ್ರ ಆರ್ಯನ್​ ಖಾನ್​

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು