AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryan Khan: ‘ಡ್ರಗ್ಸ್​, ವೇಶ್ಯಾವಾಟಿಕೆ ಎಂದಿಗೂ ನಾಶ ಆಗಲ್ಲ’; ಆರ್ಯನ್​ ಪರ ಮಾತಾಡಿದ ಸಲ್ಮಾನ್​ ಮಾಜಿ ಪ್ರೇಯಸಿ ಸೋಮಿ ಅಲಿ

Somy Ali: ‘ಸೆಲೆಬ್ರಿಟಿಯ ಮಗ ಎಂಬ ಕಾರಣಕ್ಕೆ ಆರ್ಯನ್​ ಖಾನ್​ ಅವರನ್ನು ಈ ಕೇಸ್​ನಲ್ಲಿ ಎಳೆದು ತರಲಾಗಿದೆ’ ಎಂದು ಸೋಮಿ ಅಲಿ ಹೇಳಿದ್ದಾರೆ. ಅವರ ಈ ಮಾತುಗಳಿಗೆ ಪರ-ವಿರೋಧ ವ್ಯಕ್ತವಾಗುತ್ತಿದೆ.

Aryan Khan: ‘ಡ್ರಗ್ಸ್​, ವೇಶ್ಯಾವಾಟಿಕೆ ಎಂದಿಗೂ ನಾಶ ಆಗಲ್ಲ’; ಆರ್ಯನ್​ ಪರ ಮಾತಾಡಿದ ಸಲ್ಮಾನ್​ ಮಾಜಿ ಪ್ರೇಯಸಿ ಸೋಮಿ ಅಲಿ
ಸೋಮಿ ಅಲಿ, ಆರ್ಯನ್​ ಖಾನ್​
TV9 Web
| Edited By: |

Updated on: Oct 22, 2021 | 9:05 AM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಕೇಸ್​ ದಿನದಿಂದ ದಿನಕ್ಕೆ ಜಟಿಲವಾಗುತ್ತಲೇ ಇದೆ. ಅವರಿಗೆ ಜಾಮೀನು ಸಿಗುವುದು ಮರೀಚಿಕೆ ಆಗಿದೆ. ಈ ನಡುವೆ ಅನೇಕ ಸೆಲೆಬ್ರಿಟಿಗಳು ಆರ್ಯನ್​ ಖಾನ್​ ಪರವಾಗಿ ಮಾತನಾಡುತ್ತಿದ್ದಾರೆ. ಫರ್ಹಾ ಖಾನ್​, ಹೃತಿಕ್​ ರೋಷನ್​, ಸಲ್ಮಾನ್​ ಖಾನ್​, ಶೇಖರ್ ಸುಮನ್​, ವಿಶಾಲ್​ ದದ್ಲಾನಿ, ಸ್ವರಾ ಭಾಸ್ಕರ್​ ಮುಂತಾದವರು ಶಾರುಖ್​ ಬೆಂಬಲಕ್ಕೆ ನಿಂತಿದ್ದಾರೆ. ಈಗ ಸಲ್ಮಾನ್​ ಖಾನ್​ ಮಾಜಿ ಪ್ರೇಯಸಿ ಸೋಮಿ ಅಲಿ ಕೂಡ ಸ್ಟಾರ್​ ಕಿಡ್​ ಆರ್ಯನ್​ ಪರ ಬ್ಯಾಟ್​ ಬೀಸಿದ್ದಾರೆ.

ಪಾಕಿಸ್ತಾನ ಮೂಲದ ನಟಿ ಸೋಮಿ ಅಲಿ ಅವರು ಒಂದು ಕಾಲದಲ್ಲಿ ಬಾಲಿವುಡ್​ನಲ್ಲಿ ಸಕ್ರಿಯರಾಗಿದ್ದರು. ಆಗ ಅವರಿಗೆ ಸಲ್ಮಾನ್​ ಖಾನ್​ ಜೊತೆ ಪ್ರೀತಿ ಚಿಗುರಿತ್ತು. ನಂತರ ಅವರಿಬ್ಬರ ಸಂಬಂಧ ಬ್ರೇಕಪ್​ನಲ್ಲಿ ಅಂತ್ಯವಾಯ್ತು ಎಂಬುದು ಬೇರೆ ವಿಚಾರ. ಈಗ ಸೋಮಿ ಅಲಿ ಅವರು ಶಾರುಖ್​ ಪುತ್ರನ ಬಂಧನದ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ಡ್ರಗ್ಸ್​ ಮತ್ತು ವೇಶ್ಯಾವಾಟಿಕೆ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ವೇಶ್ಯಾವಾಟಿಕೆ ರೀತಿಯೇ ಡ್ರಗ್ಸ್​ ಕೂಡ ಈ ಸಮಾಜದಲ್ಲಿ ನಾಶ ಆಗುವುದಿಲ್ಲ. ಇವೆರಡಕ್ಕೂ ಕಾನೂನಿನ ಸಮ್ಮತಿ ಸಿಗಬೇಕು ಎಂಬ ಮಾತಿಗೆ ನಾನು ಮೊದಲಿನಿಂದಲೂ ಬೆಂಬಲ ನೀಡುತ್ತಲೇ ಬಂದಿದ್ದೇನೆ. ಡ್ರಗ್ಸ್​ ಮತ್ತು ವೇಶ್ಯಾವಾಟಿಕೆಯನ್ನು ತಡೆಯಲು ಕಾನೂನಿಗೆ ಸಾಧ್ಯವಾಗಿಲ್ಲ. ಇವೆರಡೂ ತುಂಬ ಸುಲಭವಾಗಿ ಲಭ್ಯ ಆಗುತ್ತಿರುವುದರಿಂದ ಬೇಕಂತಲೇ ನಾನು ಇವುಗಳನ್ನು ಪರಸ್ಪರ ಹೋಲಿಸುತ್ತಿದ್ದೇನೆ’ ಎಂದು ಸೋಮಿ ಅಲಿ ಹೇಳಿದ್ದಾರೆ.

‘ಸೆಲೆಬ್ರಿಟಿಯ ಮಗ ಎಂಬ ಕಾರಣಕ್ಕೆ ಆರ್ಯನ್​ ಖಾನ್​ ಅವರನ್ನು ಈ ಕೇಸ್​ನಲ್ಲಿ ಎಳೆದು ತರಲಾಗಿದೆ’ ಎಂದು ಅವರು ಹೇಳಿದ್ದಾರೆ. ಅವರ ಈ ಮಾತುಗಳಿಗೆ ಪರ-ವಿರೋಧ ವ್ಯಕ್ತವಾಗುತ್ತಿದೆ. ಸದ್ಯಕ್ಕಂತೂ ಆರ್ಯನ್​ ಖಾನ್​ಗೆ ಜಾಮೀನು ಸಿಕ್ಕಿಲ್ಲ. ಹಾಗಾಗಿ ಅವರ ಪರ ವಕೀಲರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆರ್ಯನ್​ ಖಾನ್​ ಸೇರಿ 8 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್​ 30ರವರೆಗೆ ವಿಸ್ತರಣೆ ಮಾಡಿ ಎನ್​ಸಿಬಿ ಕೋರ್ಟ್​ ಆದೇಶ ಹೊರಡಿಸಿದೆ. ಇದರಿಂದ ಶಾರುಖ್​ ಮತ್ತು ಗೌರಿ ಖಾನ್​ ಇನ್ನಷ್ಟು ಚಿಂತೆಗೆ ಒಳಗಾಗಿದ್ದಾರೆ.

ಇದನ್ನೂ ಓದಿ:

Aryan Khan: ಜೈಲಿನಲ್ಲಿ ಸ್ನಾನ ಮಾಡುತ್ತಿಲ್ಲ ಆರ್ಯನ್​ ಖಾನ್​; ಅಧಿಕಾರಿಗಳಿಗೆ ತಲೆಬಿಸಿ ತಂದ ಶಾರುಖ್​ ಮಗನ ವರ್ತನೆ

‘ಅದಾನಿ ಬಂದರು ಡ್ರಗ್ಸ್​ ಮತ್ತು ರೈತರ ಕೊಲೆ ಮರೆಮಾಚಲು ಶಾರುಖ್​ ಮಗ ಟಾರ್ಗೆಟ್​’: ವಿಶಾಲ್​ ದದ್ಲಾನಿ

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ