AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

ರೇವ್​ ಪಾರ್ಟಿಯಲ್ಲಿ ಆರ್ಯನ್​ ಖಾನ್​ ಸಿಕ್ಕಿ ಬಿದ್ದಿರುವುದರಿಂದ ಅವರ ಕುಟುಂಬಕ್ಕೆ ಇದು ಕಪ್ಪು ಚುಕ್ಕಿ ಆಗಿದೆ. ಆರ್ಯನ್​ ಮೊಬೈಲ್​ನಲ್ಲಿ ಇರುವ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ.

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ
ಆರ್ಯನ್ ಖಾನ್
TV9 Web
| Edited By: |

Updated on: Oct 03, 2021 | 12:22 PM

Share

ಬಾಲಿವುಡ್​ನ ಸ್ಟಾರ್​ ನಟ ಶಾರುಖ್​ ಖಾನ್​ಗೆ ಈಗ ಮುಜುಗರ ಉಂಟಾಗಿದೆ. ಅವರ ಪುತ್ರ ಆರ್ಯನ್​ ಖಾನ್​ ಅವರು ಡ್ರಗ್ಸ್​ ಪಾರ್ಟಿ ಮಾಡಿ ಸಿಕ್ಕಿ ಬಿದ್ದಿದ್ದಾರೆ. ಮುಂಬೈನ ಸಮುದ್ರದಲ್ಲಿ ಐಷಾರಾಮಿ ಹಡಗಿನಲ್ಲಿ ರೇವ್​ ಪಾರ್ಟಿ ಆಯೋಜಿಸಲಾಗಿತ್ತು. ಅದರಲ್ಲಿ ಆರ್ಯನ್​ ಖಾನ್​ ಕೂಡ ಭಾಗಿ ಆಗಿದ್ದರು. ಹಾಗಾಗಿ ಅವರನ್ನು ಎನ್​ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅವರ ಮೊಬೈಲ್​ ಪರಿಶೀಲಿಸಲಾಗುತ್ತಿದೆ. ಈ ದಾಳಿಯಲ್ಲಿ ಹತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಯುತ್ತಿದೆ. ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಾರುಖ್​ ಪುತ್ರನ ಬಗ್ಗೆ ಇಲ್ಲಿದೆ ಕೆಲವು ಮಾಹಿತಿ.

ಆರ್ಯನ್​ ಖಾನ್​ಗೆ ನಟನಾಗುವ ಆಸಕ್ತಿ ಇಲ್ಲವಂತೆ. ಅದನ್ನು ಈ ಹಿಂದೆ ಶಾರುಖ್​ ಹೇಳಿಕೊಂಡಿದ್ದರು. ಹಾಗಂತ ಅವರು ಸಿನಿಮಾ ಕ್ಷೇತ್ರದಿಂದ ದೂರ ಉಳಿದುಕೊಳ್ಳುತ್ತಾರೆ ಎಂದರ್ಥವಲ್ಲ. ನಿರ್ದೇಶನದಲ್ಲಿ ತೊಡಗಿಕೊಳ್ಳುವ ಆಸಕ್ತಿ ಅವರಿಗೆ ಇದೆ. ಲಂಡನ್​ನ ‘ಸೆವೆನ್​ ಓಕ್ಸ್​ ಹೈಸ್ಕೂಲ್​’ನಲ್ಲಿ ಆರ್ಯನ್​ ಪದವಿ ಶಿಕ್ಷಣ ಪಡೆದಿದ್ದಾರೆ. ಕಳೆದ ವರ್ಷ, ಅಂದರೆ 2020ರಲ್ಲಿ ಫೈನ್​ ಆರ್ಟ್ಸ್​, ಸಿನಿಮ್ಯಾಟಿಕ್​ ಆರ್ಟ್ಸ್​, ಫಿಲ್ಮ್​ ಮತ್ತು ಟೆಲಿವಿಷನ್​ ಪ್ರೊಡಕ್ಷನ್​ ವಿಷಯಗಳಲ್ಲಿ ಅವರು ಪದವಿ ಪಡೆದಿದ್ದಾರೆ.

‘ದಿ ಲಯನ್​ ಕಿಂಗ್​’ ಸಿನಿಮಾದ ಹಿಂದಿ ಅವತರಣಿಕೆಗೆ ಆರ್ಯನ್​ ಖಾನ್​ ಡಬ್ಬಿಂಗ್​ ಮಾಡಿದ್ದರು. ಅಲ್ಲದೆ ಚಿಕ್ಕ ವಯಸ್ಸಿನಲ್ಲಿದ್ದಾಗ ಕೆಲವು ಸಿನಿಮಾಗಳಲ್ಲೂ ಅವರು ಕಾಣಿಸಿಕೊಂಡಿದ್ದರು. ಶಾರುಖ್​ ನಟನೆಯ ‘ಕಭಿ ಅಲ್ವಿದಾ ನಾ ಕೆಹನಾ’, ‘ಕಭಿ ಖುಷಿ ಕಭಿ ಗಮ್​’ ಸಿನಿಮಾದ ಸಣ್ಣ-ಪುಟ್ಟ ದೃಶ್ಯಗಳಲ್ಲಿ ಅವರು ಬಂದುಹೋಗಿದ್ದರು. ‘ಧೂಮ್​’ ಸರಣಿಯ ಮುಂಬರುವ ಚಿತ್ರಕ್ಕೆ ಆರ್ಯನ್​ ಖಾನ್​ ಹೀರೋ ಆಗುತ್ತಾರೆ ಎಂಬ ಗಾಸಿಪ್​ ಬಹಳ ಹಿಂದೆಯೇ ಕೇಳಿಬಂದಿತ್ತು. ಆದರೆ ಅದಿನ್ನೂ ನಿಜವಾಗಿಲ್ಲ.

ಶಾರುಖ್​ ಖಾನ್​ ಪುತ್ರಿ ಸುಹಾನಾ ಖಾನ್​ ಕೂಡ ಸೋಶಿಯಲ್​ ಮೀಡಿಯಾದಲ್ಲಿ ಫೇಮಸ್​ ಆಗಿದ್ದಾರೆ. ಇನ್ನೋರ್ವ ಪುತ್ರ ಅಬ್​ರಾಮ್​ ಫೋಟೋಗಳೂ ಆಗಾಗ ವೈರಲ್​ ಆಗುತ್ತಿರುತ್ತವೆ. ರೇವ್​ ಪಾರ್ಟಿಯಲ್ಲಿ ಆರ್ಯನ್​ ಖಾನ್​ ಸಿಕ್ಕಿ ಬಿದ್ದಿರುವುದರಿಂದ ಅವರ ಇಡೀ ಕುಟುಂಬಕ್ಕೆ ಇದು ಕಪ್ಪು ಚುಕ್ಕಿ ಆಗಿದೆ. ಆರ್ಯನ್​ ಮೊಬೈಲ್​ನಲ್ಲಿ ಇರುವ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ. ಡ್ರಗ್ಸ್​ ಪಾರ್ಟಿ ಆಯೋಜಕರ ಜೊತೆ ಆರ್ಯನ್​ ಯಾವ ರೀತಿ ಸಂಪರ್ಕದಲ್ಲಿ ಇದ್ದರು? ಯಾವ ಸಂದೇಶಗಳು ರವಾನೆ ಆಗಿವೆ ಎಂಬಿತ್ಯಾದಿ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.

ಈವರೆಗೂ ಆರ್ಯನ್ ಮೇಲೆ ಯಾವುದೇ ಕೇಸ್​ ದಾಖಲಾಗಿಲ್ಲ. ವಶಕ್ಕೆ ಪಡೆದು ವಿಚಾರಣೆಯಷ್ಟೇ ಮಾಡಲಾಗುತ್ತಿದೆ. ಪಾರ್ಟಿ ನಡೆದ ಸ್ಥಳದಲ್ಲಿ ಮಾದಕ ವಸ್ತುಗಳು ಕೂಡ ಪತ್ತೆ ಆಗಿವೆ. ಆದರೆ ಎಷ್ಟು ಪ್ರಮಾಣದ ಡ್ರಗ್ಸ್​ ಸಿಕ್ಕಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ:

ಶಾರುಖ್​ ಖಾನ್​ ಮಗ ಆರ್ಯನ್​ಗೆ ಅಮೆರಿಕ ವಿವಿಯಲ್ಲಿ ಪದವಿ ಪ್ರದಾನ; ಫೋಟೋ ವೈರಲ್​

ಡ್ರಗ್ಸ್​ ಪಾರ್ಟಿ: ಎನ್​ಸಿಬಿ ಬಲೆಗೆ ಬಿದ್ದ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​