Ananya Panday: ಎನ್​ಸಿಬಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾದ ಅನನ್ಯಾ ಪಾಂಡೆ; ಇಲ್ಲಿಗೇ ಮುಗಿದಿಲ್ಲ ಕಂಟಕ

ಬಾಲಿವುಡ್​ನಲ್ಲಿ ಚಂಕಿ ಪಾಂಡೆ ಬೇಡಿಕೆಯ ನಟ ಆಗಿದ್ದರು. ನೂರಕ್ಕೂ ಅಧಿಕ ಹಿಂದಿ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗಿದೆ. ಶಾರುಖ್​ ಮಗ ಆರ್ಯನ್​ಗೂ ಚಂಕಿ ಪಾಂಡೆ ಮಗಳು ಅನನ್ಯಾ ನಡುವೆ ಒಳ್ಳೆಯ ಗೆಳೆತನ ಇತ್ತು.

Ananya Panday: ಎನ್​ಸಿಬಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾದ ಅನನ್ಯಾ ಪಾಂಡೆ; ಇಲ್ಲಿಗೇ ಮುಗಿದಿಲ್ಲ ಕಂಟಕ
ಅನನ್ಯಾ ಪಾಂಡೆ
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 21, 2021 | 4:27 PM

ಬಾಲಿವುಡ್​ ಖ್ಯಾತ ನಟ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಬಂಧನದ ನಂತರ ಎನ್​ಸಿಬಿ ಅಧಿಕಾರಿಗಳು ಯಾವುದೇ ಸೆಲೆಬ್ರಿಟಿ ಮನೆ ಮೇಲೆ ದಾಳಿ ಮಾಡಿರಲಿಲ್ಲ. ಆದರೆ, ಈಗ ಆರ್ಯನ್​ ಬಂಧನವಾಗಿ ಅರ್ಧ ತಿಂಗಳು ಕಳೆದ ನಂತರ ಒಬ್ಬೊಬ್ಬರಿಗೇ ಬಿಸಿ ಮುಟ್ಟಿಸಲು ಎನ್​ಸಿಬಿ ಅಣಿಯಾದಂತಿದೆ. ಇಂದು (ಅಕ್ಟೋಬರ್​ 21) ಎನ್​ಸಿಬಿ ಅಧಿಕಾರಿಗಳು ಶಾರುಖ್​ ಖಾನ್​ ಮನೆ ಮನ್ನತ್​ ಹಾಗೂ ನಟಿ ಅನನ್ಯಾ ಪಾಂಡೆ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಅನನ್ಯಾಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅದರಂತೆಯೇ ತಂದೆ, ಚಂಕಿ ಪಾಂಡೆ ಜತೆ ಅವರು ವಿಚಾರಣೆಗೆ ಹಾಜರಾಗಿದ್ದಾರೆ.

ಬಾಲಿವುಡ್​ನಲ್ಲಿ ಚಂಕಿ ಪಾಂಡೆ ಬೇಡಿಕೆಯ ನಟ ಆಗಿದ್ದರು. ನೂರಕ್ಕೂ ಅಧಿಕ ಹಿಂದಿ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗಿದೆ. ಶಾರುಖ್​ ಮಗ ಆರ್ಯನ್​ಗೂ ಚಂಕಿ ಪಾಂಡೆ ಮಗಳು ಅನನ್ಯಾ ನಡುವೆ ಒಳ್ಳೆಯ ಗೆಳೆತನ ಇತ್ತು. ಇದು ಅವರಿಗೆ ಸಂಕಷ್ಟ ತಂದಿಟ್ಟಿದ್ದೆ. ಹೀಗಾಗಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಅಂತೆಯೇ ಅನನ್ಯಾ ಮುಂಬೈನ ಎನ್​ಸಿಬಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ.

ಆರ್ಯನ್​ ಮತ್ತು ನಿಮ್ಮ ನಡುವಿನ ಗೆಳೆತನ ಎಂಥದ್ದು? ಆರ್ಯನ್​ ಡ್ರಗ್ಸ್​ ತೆಗೆದುಕೊಳ್ಳುತ್ತಿದ್ದರೇ? ಆ ಬಗ್ಗೆ ನಿಮಗೆ ಮಾಹಿತಿ ಇತ್ತೇ? ಎಂಬಿತ್ಯಾದಿ ಪ್ರಶ್ನೆಗಳು ಎನ್​ಸಿಬಿ ಕಡೆಯಿಂದ ಅನನ್ಯಾಗೆ ಎದುರಾಗಿರುವ ಸಾಧ್ಯತೆ ಇದೆ. ಒಂದೊಮ್ಮೆ ಅನನ್ಯಾ ಬಗ್ಗೆ ಅನುಮಾನ ಹೆಚ್ಚಾದರೆ ಅವರನ್ನು ವಶಕ್ಕೆ ಪಡೆಯಬಹುದು. ಅವರ ವಿರುದ್ಧ ಸೂಕ್ತ ಸಾಕ್ಷ್ಯ ಸಿಕ್ಕರೆ ಬಂಧನ ಕೂಡ ನಡೆಯಬಹುದು. ಸದ್ಯ ವಿಜಯ್​ ದೇವರಕೊಂಡ ಜೊತೆ ‘ಲೈಗರ್​’ ಚಿತ್ರದಲ್ಲಿ ಅನನ್ಯಾ ಅಭಿನಯಿಸುತ್ತಿದ್ದಾರೆ. ಅಷ್ಟರಲ್ಲಾಗಲೇ ಅವರ ಹೆಸರು ಡ್ರಗ್ಸ್​ ಜಾಲದ ಜೊತೆ ತಳುಕು ಹಾಕಿಕೊಂಡಿದೆ.

ಶಾರುಖ್​ ಪುತ್ರಿ ಸುಹಾನಾ ಖಾನ್​, ಸಂಜಯ್​ ಕಪೂರ್​ ಮಗಳು ಶನಾಯಾ ಹಾಗೂ ಅನನ್ಯಾ ಪಾಂಡೆ ಬೆಸ್ಟ್​ ಫ್ರೆಂಡ್ಸ್​. ‘ಚಿಕ್ಕವರಿದ್ದಾಗ ನಾವೆಲ್ಲ ವಿಚಿತ್ರ ಕೆಲಸಗಳನ್ನು ಮಾಡುತ್ತಿದ್ದವು. ಅದಕ್ಕೆಲ್ಲ ಶಾರುಖ್ ಖಾನ್​ ಪ್ರೋತ್ಸಾಹ ನೀಡುತ್ತಿದ್ದರು. ಅವರು ನಮ್ಮ ಫೋಟೋಶೂಟ್​ ಮಾಡುತ್ತಿದ್ದರು. ನಮ್ಮ ವಿಡಿಯೋಗಳನ್ನು ಚಿತ್ರಿಸಿ ನಮ್ಮನ್ನು ಅತ್ಯುತ್ತಮ ನಟರು ಎಂಬಂತೆ ಟ್ರೀಟ್​ ಮಾಡುತ್ತಿದ್ದರು. ಅದನ್ನು ಎಲ್ಲರಿಗೂ ತೋರಿಸುತ್ತಿದ್ದರು’ ಎಂದು ಅನನ್ಯಾ ಹೇಳಿಕೊಂಡಿದ್ದರು.

ಇದನ್ನೂ ಓದಿ: ಇಲ್ಲೊಬ್ಬ ಬಡಪಾಯಿ, ನಕಲಿ ಶಾರುಖ್​ ಖಾನ್​ಗೆ ಮಕ್ಕಳ ಶಾಲೆ ಫೀಸ್​ ಕಟ್ಟಲು ದುಡ್ಡಿಲ್ಲ; ಯಾರಿದು?

Ananya Panday: ‘ಶಾರುಖ್​ ಖಾನ್​ ನನ್ನ 2ನೇ ಅಪ್ಪ’ ಎಂದಿದ್ದ ಅನನ್ಯಾ ಪಾಂಡೆ; ಡ್ರಗ್ಸ್​ ಸುಳಿಯಲ್ಲಿ ನಟಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ