AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಯನ್​ ಖಾನ್​ ಜತೆ ಬಂಧನಕ್ಕೊಳಗಾದ ಈ ಗ್ಲಾಮರ್ ಬೆಡಗಿ ಯಾರು?

ಪಾರ್ಟಿ ನಡೆಯುವಾಗ ಆರ್ಯನ್​ ಜತೆ ಮುನ್​ಮುನ್​, ಅರ್ಬಾಜ್​ ಸೇರಿ 8 ಜನರು ಇದ್ದರು. ಇಂದು ನಡೆದ ವಿಚಾರಣೆ ವೇಳೆ ಅಕ್ಟೋಬರ್​ 7ರವರೆಗೆ ಇವರನ್ನು ಎನ್​ಸಿಬಿ ಕಸ್ಟಡಿಗೆ ನೀಡಲಾಗಿದೆ.

ಆರ್ಯನ್​ ಖಾನ್​ ಜತೆ ಬಂಧನಕ್ಕೊಳಗಾದ ಈ ಗ್ಲಾಮರ್ ಬೆಡಗಿ ಯಾರು?
ಮುನ್​​ಮುನ್​-ಶಾರುಖ್​,ಆರ್ಯನ್​​
TV9 Web
| Edited By: |

Updated on:Oct 04, 2021 | 8:39 PM

Share

ಕ್ರೂಸ್​ ಶಿಪ್​ನಲ್ಲಿ ನಡೆಯುತ್ತಿದ್ದ ಡ್ರಗ್ಸ್​ ಪಾರ್ಟಿ ಪ್ರಕರಣದಲ್ಲಿ ಶಾರುಖ್​ ಖಾನ್​ ಮಗ ಆರ್ಯನ್​ ಖಾನ್​ ಜತೆಗೆ ಇನ್ನೂ ಕೆಲವರ ಬಂಧನವಾಗಿದೆ. ಇವರು ಯಾರು ಎನ್ನುವ ಪ್ರಶ್ನೆ ಜನರಲ್ಲಿ ಮೂಡುತ್ತಿದೆ. ಆರ್ಯನ್​ ಖಾನ್​ ಜತೆ ಬಂಧನಕ್ಕೆ ಒಳಗಾದವರು ಮುನ್​ಮುನ್​ ಧಮೆಚಾ ಮತ್ತು ಅರ್ಬಾಜ್ ಸೇತ್​ ಮರ್ಚಂಟ್​.

ಪಾರ್ಟಿ ನಡೆಯುವಾಗ ಆರ್ಯನ್​ ಜತೆ ಮುನ್​ಮುನ್​, ಅರ್ಬಾಜ್​ ಸೇರಿ 8 ಜನರು ಇದ್ದರು. ಇಂದು ನಡೆದ ವಿಚಾರಣೆ ವೇಳೆ ಅಕ್ಟೋಬರ್​ 7ರವರೆಗೆ ಇವರನ್ನು ಎನ್​ಸಿಬಿ ಕಸ್ಟಡಿಗೆ ನೀಡಲಾಗಿದೆ. ಹಾಗಾದರೆ ಮುನ್​ಮುನ್​ ಮತ್ತು ಅರ್ಬಾಜ್​ ಯಾರು? ಈ ಪ್ರಶ್ನೆಗೆ ಇಲ್ಲಿದೆ ಉತ್ತರ.  ಆರ್ಯನ್​ ಅವರು ಬಾಲಿವುಡ್​ ಸ್ಟಾರ್​ ನಟ ಶಾರುಖ್​ ಖಾನ್​ ಮಗ. ಅರ್ಬಾಜ್​ ಎಂಬುವವರು ಆರ್ಯನ್​​ ಅವರ ಆಪ್ತ ಗೆಳೆಯ. ಮುನ್​ಮುನ್​ಗೆ ಅರ್ಬಾಜ್​​ ಗೆಳೆತನವಿತ್ತು.

ಮುನ್​ಮುನ್​ ಮಾಡೆಲ್​. ವಯಸ್ಸು 39. ಮಧ್ಯಪ್ರದೇಶದ ಸಾಗರ್​ ಜಿಲ್ಲೆಯವರು. ಮುನ್​ಮುನ್​ ತಾಯಿ ಕಳೆದ ವರ್ಷ ನಿಧನ ಹೊಂದಿದ್ದಾರೆ. ಅವರ ಸಹೋದರ ಪ್ರಿನ್ಸ್​ ಧಮೇಚಾ ಅವರು ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮುನ್​ಮುನ್​ ಸಾಗರದಲ್ಲಿ ಸಮಯ ಕಳೆದಿದ್ದು ತುಂಬಾನೇ ಕಡಿಮೆ. ಅವರು ದೆಹಲಿಗೆ ಶಿಫ್ಟ್​ ಆಗುವುದಕ್ಕೂ ಮೊದಲು ಭೋಪಾಲ್​ಗೆ ತೆರಳಿದ್ದರು.

ಮುನ್​ಮುನ್​ ಮಾಡೆಲ್​ ಆಗಿ ಹೆಚ್ಚು ಖ್ಯಾತಿ ಗಳಿಸಿಕೊಂಡಿದ್ದಾರೆ. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 13 ಸಾವಿರ ​ ಹಿಂಬಾಲಕರಿದ್ದಾರೆ. ಅವರು ಕೊನೆಯದಾಗಿ ಪೋಸ್ಟ್ ಮಾಡಿದ್ದು ಸೆಪ್ಟೆಂಬರ್​ 22ರಂದು.

ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಶನಿವಾರ (ಅ.2) ರಾತ್ರಿ ನಡೆಯುತ್ತಿದ್ದ ರೇವ್​ ಪಾರ್ಟಿಯಲ್ಲಿ ಆರ್ಯನ್​ ಕೂಡ ಇದ್ದರು. ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಆರ್ಯನ್​ ಅವರನ್ನು ವಶಕ್ಕೆ ಪಡೆದು ಎನ್​ಸಿಬಿ ಕಚೇರಿಗೆ ಕರೆದುಕೊಂಡು ಬಂದಿತ್ತು. ಎನ್​ಸಿಬಿ ಕಚೇರಿ ಒಳಗೆ ಆರ್ಯನ್​ ಅವರಿಗೆ ನಾನಾ ರೀತಿಯ ಪ್ರಶ್ನೆಯನ್ನು ಮಾಡಲಾಯಿತು. ಇಂದು ಆರ್ಯನ್​ ಸೇರಿ ಮೂವರ ಕಸ್ಟಡಿ ವಿಸ್ತರಣೆಗೊಂಡಿದೆ. ಆರ್ಯನ್​ ಮೊಬೈಲ್​ನಲ್ಲಿ ಸಿಕ್ಕ ಪ್ರಮುಖ ಮಾಹಿತಿ ಹಾಗೂ ವಾಟ್ಸ್ಆ್ಯಪ್​ ​ಚಾಟ್​ಗಳನ್ನು ಇಟ್ಟುಕೊಂಡು ಎನ್​ಸಿಬಿ ಪರ ವಕೀಲರು ವಾದ ಮಂಡಿಸಿದ್ದರು. ಈ ಎಲ್ಲಾ ಸಾಕ್ಷ್ಯಗಳು ಆರ್ಯನ್​ ವಿರುದ್ಧವಾಗಿಯೇ ಇದ್ದವು. ಹೀಗಾಗಿ, ಕೋರ್ಟ್​ ಹೆಚ್ಚಿನ ವಿಚಾರಣೆಗೆ ಎನ್​ಸಿಬಿಗೆ ಅವಕಾಶ ನೀಡಿದೆ.

ಇದನ್ನೂ ಓದಿ: ಆರ್ಯನ್ ಏನು ಬೇಕಾದರೂ ಮಾಡಬಹುದು ಎಂದಿದ್ದ ಶಾರುಖ್ ಖಾನ್; ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಆರ್ಯನ್ ಏನು ಬೇಕಾದರೂ ಮಾಡಬಹುದು ಎಂದಿದ್ದ ಶಾರುಖ್ ಖಾನ್; ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

Published On - 8:36 pm, Mon, 4 October 21

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ