AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೀತಿಯ ಆರ್ಯನ್​ ಖಾನ್​..’: ಶಾರುಖ್​ ಪುತ್ರನಿಗೆ ಹೃತಿಕ್​ ರೋಷನ್​ ಬಹಿರಂಗ ಪತ್ರ

ಹಲವು ಸೆಲೆಬ್ರಿಟಿಗಳಿಂದ ಆರ್ಯನ್​ ಖಾನ್​ಗೆ ಬೆಂಬಲ ಸಿಗುತ್ತಿದೆ. ಈಗ ಹೃತಿಕ್​ ರೋಷನ್​ ಅವರು ಶಾರುಖ್​ ಪುತ್ರನಿಗಾಗಿ ಒಂದು ಪತ್ರ ಬರೆದಿದ್ದಾರೆ. ಅದು ಸಖತ್​ ವೈರಲ್​ ಆಗುತ್ತಿದೆ.

‘ಪ್ರೀತಿಯ ಆರ್ಯನ್​ ಖಾನ್​..’: ಶಾರುಖ್​ ಪುತ್ರನಿಗೆ ಹೃತಿಕ್​ ರೋಷನ್​ ಬಹಿರಂಗ ಪತ್ರ
ಹೃತಿಕ್ ರೋಷನ್, ಆರ್ಯನ್ ಖಾನ್
TV9 Web
| Edited By: |

Updated on: Oct 07, 2021 | 1:44 PM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರು ಡ್ರಗ್ಸ್​ ಪಾರ್ಟಿ ಮಾಡಿದ ಆರೋಪ ಹೊತ್ತು ಎನ್​ಸಿಬಿ ಕಸ್ಟಡಿಯಲ್ಲಿದ್ದಾರೆ. ಈ ವೇಳೆ ಅನೇಕರು ಅವರಿಗೆ ಸಪೋರ್ಟ್​ ಮಾಡುತ್ತಿದ್ದಾರೆ. ಈಗ ನಟ ಹೃತಿಕ್​ ರೋಷನ್​ ಅವರು ಆರ್ಯನ್​ ಖಾನ್​ ಪರವಾಗಿ ತಮ್ಮ ವಾದ ಮಂಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಬಹಿರಂಗವಾಗಿ ಒಂದು ದೀರ್ಘವಾದ ಪತ್ರ ಬರೆಯುವ ಮೂಲಕ ಆರ್ಯನ್​ಗೆ ಅವರು ಮಾರ್ಗದರ್ಶನ ಮಾಡಿದ್ದಾರೆ. ಅದು ಈಗ ಚರ್ಚೆಗೆ ಒಳಗಾಗುತ್ತಿದೆ. ಹೃತಿಕ್​ ಜೊತೆ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕೂಡ ಶಾರುಖ್​ ಫ್ಯಾಮಿಲಿಗೆ ಸಾಥ್​ ನೀಡುತ್ತಿದ್ದಾರೆ.

‘ನನ್ನ ಪ್ರೀತಿಯ ಆರ್ಯನ್​ ಖಾನ್​..’ ಎಂದು ಹೃತಿಕ್​ ಈ ಪತ್ರ ಆರಂಭಿಸಿದ್ದಾರೆ. ‘ಬದುಕೊಂದು ವಿಚಿತ್ರವಾದ ಪ್ರಯಾಣ. ಅನಿಶ್ಚಿತತೆ ಮತ್ತು ಕಷ್ಟದ ಕಾರಣದಿಂದಲೇ ಇದು ಮಹಾನ್​ ಎನಿಸಿಕೊಂಡಿದೆ. ಆದರೆ ದೇವರು ಕರುಣಾಮಯ. ಪ್ರಬಲರಿಗೆ ಮಾತ್ರ ಅವನು ಕಠಿಣವಾದ ಕಷ್ಟ ಕೊಡುತ್ತಾನೆ. ಸಿಟ್ಟು, ಗೊಂದಲ, ಅಸಹಾಯಕತೆ ಎಲ್ಲವನ್ನೂ ನೀನು ಫೀಲ್​ ಮಾಡಬೇಕು. ನಿನ್ನೊಳಗಿನ ಹೀರೋನನ್ನು ಹೊರತರಲು ಇವು ಪ್ರಮುಖ ಅಂಶಗಳು. ಆದರೆ ಹುಷಾರು… ಒಳ್ಳೆಯತನವನ್ನೂ ಇವು ಸುಟ್ಟು ಹಾಕಬಹುದು’ ಎಂದು ಹೃತಿಕ್​ ಅವರು ಈ ಪತ್ರದಲ್ಲಿ ಬರೆದಿದ್ದಾರೆ.

‘ಅನುಭವಗಳಿಂದ ಯಾವ ಅಂಶವನ್ನು ನಮ್ಮ ಜೊತೆಗೆ ಇಟ್ಟುಕೊಳ್ಳಬೇಕು ಮತ್ತು ಯಾವುದನ್ನು ದೂರ ಎಸೆಯಬೇಕು ಎಂದು ಅರ್ಥ ಮಾಡಿಕೊಂಡಾಗ ತಪ್ಪು, ಸೋಲು, ಯಶಸ್ಸು ಇವೆಲ್ಲವೂ ಒಂದೇ ಎನಿಸುತ್ತದೆ. ಅವೆಲ್ಲವುಗಳಿಂದ ನೀನು ಇನ್ನೂ ಚೆನ್ನಾಗಿ ಬೆಳೆಯಬಹುದು. ನಿನ್ನನ್ನು ಮಗು ಆಗಿದ್ದಾಗಿನಿಂದ ನಾನು ನೋಡಿದ್ದೇನೆ. ದೊಡ್ಡವನಾದ ಮೇಲೂ ನೋಡಿದ್ದೇನೆ. ಎಲ್ಲ ಅನುಭವಗಳನ್ನು ನಿನ್ನದಾಗಿಸಿಕೋ. ಅವು ನಿನ್ನ ಉಡುಗೊರೆಗಳು’ ಎಂದು ಹೃತಿಕ್​ ಬರೆದಿದ್ದಾರೆ.

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅದರ ಪರಿಣಾಮವಾಗಿ ಬಾಲಿವುಡ್​ನ ಡ್ರಗ್ಸ್​ ಪುರಾಣ ಮತ್ತೆ ಮುನ್ನೆಲೆಗೆ ಬಂದಿದೆ. ಆರ್ಯನ್​ಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಮಗನ ಎಡವಟ್ಟಿನಿಂದಾಗಿ ಶಾರುಖ್​ ಸಿನಿಮಾಗಳಿಗೆ ಕೋಟ್ಯಂತರ ರೂಪಾಯಿ ನಷ್ಟ ಆಗುತ್ತಿದೆ. ಅವರು ನಟಿಸುತ್ತಿದ್ದ ಎಲ್ಲ ಚಿತ್ರಗಳ ಶೂಟಿಂಗ್​ ನಿಂತಿದೆ.

ಇದನ್ನೂ ಓದಿ:

‘ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್​ ಖಾನ್​ಗೆ ಶಿಕ್ಷೆ ಆಗಲ್ಲ’; ಭವಿಷ್ಯ ನುಡಿದ ಕಮಾಲ್ ಆರ್​. ಖಾನ್​

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ