AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೀತಿಯ ಆರ್ಯನ್​ ಖಾನ್​..’: ಶಾರುಖ್​ ಪುತ್ರನಿಗೆ ಹೃತಿಕ್​ ರೋಷನ್​ ಬಹಿರಂಗ ಪತ್ರ

ಹಲವು ಸೆಲೆಬ್ರಿಟಿಗಳಿಂದ ಆರ್ಯನ್​ ಖಾನ್​ಗೆ ಬೆಂಬಲ ಸಿಗುತ್ತಿದೆ. ಈಗ ಹೃತಿಕ್​ ರೋಷನ್​ ಅವರು ಶಾರುಖ್​ ಪುತ್ರನಿಗಾಗಿ ಒಂದು ಪತ್ರ ಬರೆದಿದ್ದಾರೆ. ಅದು ಸಖತ್​ ವೈರಲ್​ ಆಗುತ್ತಿದೆ.

‘ಪ್ರೀತಿಯ ಆರ್ಯನ್​ ಖಾನ್​..’: ಶಾರುಖ್​ ಪುತ್ರನಿಗೆ ಹೃತಿಕ್​ ರೋಷನ್​ ಬಹಿರಂಗ ಪತ್ರ
ಹೃತಿಕ್ ರೋಷನ್, ಆರ್ಯನ್ ಖಾನ್
TV9 Web
| Updated By: ಮದನ್​ ಕುಮಾರ್​|

Updated on: Oct 07, 2021 | 1:44 PM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರು ಡ್ರಗ್ಸ್​ ಪಾರ್ಟಿ ಮಾಡಿದ ಆರೋಪ ಹೊತ್ತು ಎನ್​ಸಿಬಿ ಕಸ್ಟಡಿಯಲ್ಲಿದ್ದಾರೆ. ಈ ವೇಳೆ ಅನೇಕರು ಅವರಿಗೆ ಸಪೋರ್ಟ್​ ಮಾಡುತ್ತಿದ್ದಾರೆ. ಈಗ ನಟ ಹೃತಿಕ್​ ರೋಷನ್​ ಅವರು ಆರ್ಯನ್​ ಖಾನ್​ ಪರವಾಗಿ ತಮ್ಮ ವಾದ ಮಂಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಬಹಿರಂಗವಾಗಿ ಒಂದು ದೀರ್ಘವಾದ ಪತ್ರ ಬರೆಯುವ ಮೂಲಕ ಆರ್ಯನ್​ಗೆ ಅವರು ಮಾರ್ಗದರ್ಶನ ಮಾಡಿದ್ದಾರೆ. ಅದು ಈಗ ಚರ್ಚೆಗೆ ಒಳಗಾಗುತ್ತಿದೆ. ಹೃತಿಕ್​ ಜೊತೆ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕೂಡ ಶಾರುಖ್​ ಫ್ಯಾಮಿಲಿಗೆ ಸಾಥ್​ ನೀಡುತ್ತಿದ್ದಾರೆ.

‘ನನ್ನ ಪ್ರೀತಿಯ ಆರ್ಯನ್​ ಖಾನ್​..’ ಎಂದು ಹೃತಿಕ್​ ಈ ಪತ್ರ ಆರಂಭಿಸಿದ್ದಾರೆ. ‘ಬದುಕೊಂದು ವಿಚಿತ್ರವಾದ ಪ್ರಯಾಣ. ಅನಿಶ್ಚಿತತೆ ಮತ್ತು ಕಷ್ಟದ ಕಾರಣದಿಂದಲೇ ಇದು ಮಹಾನ್​ ಎನಿಸಿಕೊಂಡಿದೆ. ಆದರೆ ದೇವರು ಕರುಣಾಮಯ. ಪ್ರಬಲರಿಗೆ ಮಾತ್ರ ಅವನು ಕಠಿಣವಾದ ಕಷ್ಟ ಕೊಡುತ್ತಾನೆ. ಸಿಟ್ಟು, ಗೊಂದಲ, ಅಸಹಾಯಕತೆ ಎಲ್ಲವನ್ನೂ ನೀನು ಫೀಲ್​ ಮಾಡಬೇಕು. ನಿನ್ನೊಳಗಿನ ಹೀರೋನನ್ನು ಹೊರತರಲು ಇವು ಪ್ರಮುಖ ಅಂಶಗಳು. ಆದರೆ ಹುಷಾರು… ಒಳ್ಳೆಯತನವನ್ನೂ ಇವು ಸುಟ್ಟು ಹಾಕಬಹುದು’ ಎಂದು ಹೃತಿಕ್​ ಅವರು ಈ ಪತ್ರದಲ್ಲಿ ಬರೆದಿದ್ದಾರೆ.

‘ಅನುಭವಗಳಿಂದ ಯಾವ ಅಂಶವನ್ನು ನಮ್ಮ ಜೊತೆಗೆ ಇಟ್ಟುಕೊಳ್ಳಬೇಕು ಮತ್ತು ಯಾವುದನ್ನು ದೂರ ಎಸೆಯಬೇಕು ಎಂದು ಅರ್ಥ ಮಾಡಿಕೊಂಡಾಗ ತಪ್ಪು, ಸೋಲು, ಯಶಸ್ಸು ಇವೆಲ್ಲವೂ ಒಂದೇ ಎನಿಸುತ್ತದೆ. ಅವೆಲ್ಲವುಗಳಿಂದ ನೀನು ಇನ್ನೂ ಚೆನ್ನಾಗಿ ಬೆಳೆಯಬಹುದು. ನಿನ್ನನ್ನು ಮಗು ಆಗಿದ್ದಾಗಿನಿಂದ ನಾನು ನೋಡಿದ್ದೇನೆ. ದೊಡ್ಡವನಾದ ಮೇಲೂ ನೋಡಿದ್ದೇನೆ. ಎಲ್ಲ ಅನುಭವಗಳನ್ನು ನಿನ್ನದಾಗಿಸಿಕೋ. ಅವು ನಿನ್ನ ಉಡುಗೊರೆಗಳು’ ಎಂದು ಹೃತಿಕ್​ ಬರೆದಿದ್ದಾರೆ.

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಅದರ ಪರಿಣಾಮವಾಗಿ ಬಾಲಿವುಡ್​ನ ಡ್ರಗ್ಸ್​ ಪುರಾಣ ಮತ್ತೆ ಮುನ್ನೆಲೆಗೆ ಬಂದಿದೆ. ಆರ್ಯನ್​ಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಮಗನ ಎಡವಟ್ಟಿನಿಂದಾಗಿ ಶಾರುಖ್​ ಸಿನಿಮಾಗಳಿಗೆ ಕೋಟ್ಯಂತರ ರೂಪಾಯಿ ನಷ್ಟ ಆಗುತ್ತಿದೆ. ಅವರು ನಟಿಸುತ್ತಿದ್ದ ಎಲ್ಲ ಚಿತ್ರಗಳ ಶೂಟಿಂಗ್​ ನಿಂತಿದೆ.

ಇದನ್ನೂ ಓದಿ:

‘ಡ್ರಗ್ಸ್​ ಕೇಸ್​ನಲ್ಲಿ ಆರ್ಯನ್​ ಖಾನ್​ಗೆ ಶಿಕ್ಷೆ ಆಗಲ್ಲ’; ಭವಿಷ್ಯ ನುಡಿದ ಕಮಾಲ್ ಆರ್​. ಖಾನ್​

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ