AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಇಮ್ತಿಯಾಜ್​ ಖತ್ರಿ ಮನೆ ಮೇಲೆ ಎನ್​ಸಿಬಿ ದಾಳಿ; ಬಾಲಿವುಡ್​ ಸೆಲೆಬ್ರಿಟಿಗಳಿಗೆ ನಡುಕ ಶುರು

ವಿವಿಐಪಿ ಯೂನಿವರ್ಸಲ್​ ಎಂಟರ್​ಟೇನ್ಮೆಂಟ್​ ಕಂಪನಿ ಮೂಲಕ ನಿರ್ಮಾಪಕನಾಗಿ ಇಮ್ತಿಯಾಜ್​ ಖತ್ರಿ ಗುರುತಿಸಿಕೊಂಡಿದ್ದಾರೆ. ಹಲವು ಸೆಲೆಬ್ರಿಟಿಗಳಿಗೆ ಅವರು ಮಾದಕ ವಸ್ತು ಪೂರೈಕೆ ಮಾಡುತ್ತಾರೆ ಎಂಬ ಆರೋಪ ಇದೆ.

ನಿರ್ಮಾಪಕ ಇಮ್ತಿಯಾಜ್​ ಖತ್ರಿ ಮನೆ ಮೇಲೆ ಎನ್​ಸಿಬಿ ದಾಳಿ; ಬಾಲಿವುಡ್​ ಸೆಲೆಬ್ರಿಟಿಗಳಿಗೆ ನಡುಕ ಶುರು
ಇಮ್ತಿಯಾಜ್​ ಖತ್ರಿ, ಆರ್ಯನ್ ಖಾನ್
TV9 Web
| Edited By: |

Updated on:Oct 09, 2021 | 9:55 AM

Share

ಡ್ರಗ್ಸ್​ ಕೇಸ್​ನಲ್ಲಿ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಬಂಧನದ ಬಳಿಕ ತನಿಖೆ ಚುರುಕಾಗಿದೆ. ವಿಚಾರಣೆ ವೇಳೆ ಅನೇಕ ಹೆಸರುಗಳು ಹೊರಬರುತ್ತಿವೆ. ಬಾಲಿವುಡ್​ ನಿರ್ಮಾಪಕ ಇಮ್ತಿಯಾಜ್​ ಖತ್ರಿ ಮನೆ ಮತ್ತು ಕಚೇರಿ ಮೇಲೆ ಎನ್​ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಬೈನ ಬಾಂದ್ರಾದಲ್ಲಿರುವ ಮನೆ ಮತ್ತು ಆಫೀಸ್​ನಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ಮುಂಬೈನ ಉದ್ಯಮಿಯೊಬ್ಬರ ಪುತ್ರನಾದ ಇಮ್ತಿಯಾಜ್​ ಖತ್ರಿಗೆ ಬಾಲಿವುಡ್​ನ ಹಲವು ಮಂದಿ ಜೊತೆ ಸಂಪರ್ಕ ಇದೆ. ಸುಶಾಂತ್​ ಸಿಂಗ್​ ರಜಪೂತ್​ ಅವರಿಗೆ ಡ್ರಗ್ಸ್​ ಪೂರೈಕೆ ಮಾಡುತ್ತಿದ್ದದ್ದು ಇದೇ ಇಮ್ತಿಯಾಜ್​ ಖತ್ರಿ ಎಂದು ಈ ಹಿಂದೆ ಸುಶಾಂತ್ ಮ್ಯಾನೇಜರ್​ ಶ್ರುತಿ ಮೋದಿ ಆರೋಪ ಮಾಡಿದ್ದರು. ಖತ್ರಿಗೆ ರಾಜಕೀಯ ವ್ಯಕ್ತಿಗಳ ಜೊತೆಗೂ ನಂಟು ಇದೆ ಎಂದು ಶ್ರುತಿ ಮೋದಿ ಪರ ವಕೀಲರು ಹೇಳಿಕೆ ನೀಡಿದ್ದರು.

ವಿವಿಐಪಿ ಯೂನಿವರ್ಸಲ್​ ಎಂಟರ್​ಟೇನ್ಮೆಂಟ್​ ಕಂಪನಿ ಮೂಲಕ ನಿರ್ಮಾಪಕನಾಗಿ ಇಮ್ತಿಯಾಜ್​ ಖತ್ರಿ ಗುರುತಿಸಿಕೊಂಡಿದ್ದಾರೆ. ಹಲವು ಸೆಲೆಬ್ರಿಟಿಗಳಿಗೆ ಅವರು ಮಾದಕ ವಸ್ತು ಪೂರೈಕೆ ಮಾಡುತ್ತಾರೆ ಎಂಬ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಎನ್​ಸಿಬಿ ದಾಳಿ ನಡೆಸಿದೆ. ಶಾರುಖ್​ ಪುತ್ರನಿಗೆ ಅವರೇ ಡ್ರಗ್ಸ್​ ಸಪ್ಲೈ ಮಾಡಿರಬಹುದು ಎಂಬ ಶಂಕೆ ಕೂಡ ಮೂಡಿದೆ. ಪೂರ್ತಿ ವಿಚಾರಣೆ ಬಳಿಕ ಸತ್ಯ ಹೊರಬರಬೇಕಿದೆ.

ಆರ್ಯನ್​ಗೆ ಸಿಕ್ಕಿಲ್ಲ ಜಾಮೀನು:

ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ಶುಕ್ರವಾರ (ಅ.8) ಮುಂಬೈನ ನ್ಯಾಯಾಲಯದಲ್ಲಿ ನಡೆಯಿತು. 23 ವರ್ಷದ ಆರ್ಯನ್ ಪರ ಸತೀಶ್ ಮಾನೆಶಿಂಧೆ ವಾದ ಮಂಡಿಸಿದರು. ಈ ಕುರಿತು ತೀರ್ಪು ನೀಡಿರುವ ನ್ಯಾಯಾಲಯವು ಆರ್ಯನ್​ಗೆ ಜಾಮೀನು ನೀಡಿಲ್ಲ. ಗುರುವಾರ ನಡೆದಿದ್ದ ವಿಚಾರಣೆಯಲ್ಲಿ ನ್ಯಾಯಾಲಯವು ಆರ್ಯನ್ ಖಾನ್​ಗೆ ಎನ್​ಸಿಬಿ ಕಸ್ಟಡಿಯನ್ನು ವಿಸ್ತರಿಸಲು ನಿರಾಕರಿಸಿತ್ತು. ಈಗಾಗಲೇ ಅಗತ್ಯವಿದ್ದಷ್ಟು ಸಮಯವನ್ನು ಎನ್​ಸಿಬಿಗೆ ನೀಡಲಾಗಿದೆ ಎಂದು ಹೆಚ್ಚುವರಿ ಮೆಟ್ರೋಪಾಲಿಟನ್ ನ್ಯಾಯಾಧೀಶರಾದ ಆರ್​.ಎಂ .ನಿರ್ಲೇಕರ್ ತಿಳಿಸಿದ್ದರು. ನಂತರ ಅವರು ಆರ್ಯನ್ ಖಾನ್ ಸೇರಿದಂತೆ 8 ಜನರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದರು.

ಪ್ರಕರಣದ 8 ಆರೋಪಿಗಳ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಸೆಷನ್ ಕೋರ್ಟ್ ಮೊರೆ ಹೋಗಲು ಆರ್ಯನ್ ಖಾನ್ ಪರ ವಕೀಲರು ಈಗ ಚಿಂತನೆ ನಡೆಸಿದ್ದಾರೆ.

ಇದನ್ನೂ ಓದಿ:

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

‘ಪ್ರೀತಿಯ ಆರ್ಯನ್​ ಖಾನ್​..’: ಶಾರುಖ್​ ಪುತ್ರನಿಗೆ ಹೃತಿಕ್​ ರೋಷನ್​ ಬಹಿರಂಗ ಪತ್ರ

Published On - 9:47 am, Sat, 9 October 21

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ