AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘We Stand With SRK’ ಎಂದು ಶಾರುಖ್​ ಪರ ನಿಂತಿರುವ ಇವರೆಲ್ಲ ಯಾರು? ಟ್ವಿಟರ್​ನಲ್ಲಿ ಜೋರಾಗಿದೆ ಟ್ರೆಂಡ್​

ಆರ್ಯನ್​ ಖಾನ್​ ಡ್ರಗ್ಸ್​ ಕೇಸ್​ ವಿಚಾರದಲ್ಲಿ ಶಾರುಖ್​ ಖಾನ್​ಗೆ ಬೆಂಬಲ ನೀಡುತ್ತಿರುವವರೆಲ್ಲ ಅವರ ಡೈಹಾರ್ಡ್​ ಅಭಿಮಾನಿಗಳು. ಅವರೆಲ್ಲ ತಮ್ಮದೇ ಮೊಂಡುವಾದವನ್ನು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡುತ್ತಿದ್ದಾರೆ.

‘We Stand With SRK’ ಎಂದು ಶಾರುಖ್​ ಪರ ನಿಂತಿರುವ ಇವರೆಲ್ಲ ಯಾರು? ಟ್ವಿಟರ್​ನಲ್ಲಿ ಜೋರಾಗಿದೆ ಟ್ರೆಂಡ್​
ಆರ್ಯನ್ ಖಾನ್, ಶಾರುಖ್ ಖಾನ್
TV9 Web
| Edited By: |

Updated on: Oct 04, 2021 | 1:45 PM

Share

ಡ್ರಗ್ಸ್​ ಪಾರ್ಟಿ ಮಾಡುತ್ತಿರುವಾಗ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರು ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ಅಷ್ಟೇ ಅಲ್ಲ, ಈ ಕುರಿತು ಪರ-ವಿರೋಧದ ಚರ್ಚೆ ಕೂಡ ಆಗುತ್ತಿದೆ. ಕೆಲವರು ಆರ್ಯನ್​ ಖಾನ್ ಪರವಾಗಿ ಬ್ಯಾಟ್​ ಬೀಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ #WeStandWithSRK ಎಂಬ ಹ್ಯಾಷ್​ಟ್ಯಾಗ್​ ಮೂಲಕ ಅನೇಕರು ಶಾರುಖ್​ ಖಾನ್​ ಪರ ನಿಂತಿದ್ದಾರೆ.

ಬಾಲಿವುಡ್​ನ ಸೂಪರ್​ ಸ್ಟಾರ್​ ನಟನ ಮಗ ಎಂಬುದನ್ನೂ ಲೆಕ್ಕಿಸದೇ ಅರೆಸ್ಟ್​ ಮಾಡಿರುವ ಎನ್​ಸಿಬಿ ಅಧಿಕಾರಿಗಳನ್ನು ಅನೇಕರು ಶ್ಲಾಘಿಸುತ್ತಿದ್ದಾರೆ. ಆದರೆ ಕೆಲವರು ಮಾತ್ರ ಆರ್ಯನ್​ ಖಾನ್​ ಪರ ಮಾತನಾಡುತ್ತಿದ್ದಾರೆ. ಬಾಲಿವುಡ್​ ನಟ ಸುನೀಲ್​ ಶೆಟ್ಟಿ ಕೂಡ ಶಾರುಖ್​ ಪುತ್ರನಿಗೆ ಕರುಣೆ ತೋರಿಸುವ ರೀತಿಯಲ್ಲಿ ಟ್ವೀಟ್​ ಮಾಡಿ, ನೆಟ್ಟಿಗರಿಂದ ವಿರೋಧ ಎದುರಿಸುತ್ತಿದ್ದಾರೆ. ಅದರ ಬೆನ್ನಲೇ #WeStandWithSRK ಎಂಬ ಹ್ಯಾಷ್​ಟ್ಯಾಗ್ ಮೂಲಕ ಶಾರುಖ್​ ಫ್ಯಾನ್ಸ್​ ಅಭಿಯಾನ ಶುರುಮಾಡಿಕೊಂಡಿದ್ದಾರೆ.

ಶಾರುಖ್​ ಖಾನ್​ಗೆ ಬೆಂಬಲ ನೀಡುತ್ತಿರುವವರೆಲ್ಲ ಅವರ ಡೈಹಾರ್ಡ್​ ಅಭಿಮಾನಿಗಳು. ಅವರೆಲ್ಲ ತಮ್ಮದೇ ಮೊಂಡುವಾದವನ್ನು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡುತ್ತಿದ್ದಾರೆ. ‘ಶಾರುಖ್​ ಖಾನ್​ರನ್ನು ಮಣಿಸಲು ಆಗದವರು ಈಗ ಅವರ ಮಕ್ಕಳ ಮೂಲಕ ತಮ್ಮ ಉದ್ದೇಶ ಈಡೇರಿಸಿಕೊಳ್ಳಲು ನೋಡುತ್ತಿದ್ದಾರೆ. ಏನೇ ಆದರೂ ನಾವು ಶಾರುಖ್​ ಪರ ನಿಲ್ಲುತ್ತೇವೆ’ ಎಂದು ಅನೇಕರು ಟ್ವೀಟ್​ ಮಾಡಿದ್ದಾರೆ.

ಹೈ-ಪ್ರೊಫೈಲ್​ ವ್ಯಕ್ತಿಗಳ ಜೀವನದಲ್ಲಿ ಏನೇ ನಡೆದರೂ ಕೂಡ ಮಾಧ್ಯಮಗಳು ತೀರ್ಪು ನೀಡಲು ಮುಂದಾಗುತ್ತವೆ ಎಂಬುದು ಅನೇಕ ಆರೋಪ. ಸದ್ಯ ಅಧಿಕಾರಿಗಳು, ವಕೀಲರು ಅವರವರ ಕೆಲಸ ಮಾಡುತ್ತಿದ್ದಾರೆ. ಕೋರ್ಟ್​ ತೀರ್ಪು ನೀಡುವುದಕ್ಕಿಂತಲೂ ಮುನ್ನವೇ ಶಾರುಖ್​ ಪುತ್ರನನ್ನು ಟಾರ್ಗೆಟ್​ ಮಾಡುವುದು ಸರಿಯಲ್ಲ ಎಂದು ಕೂಡ ಕೆಲವರು ವಾದಿಸುತ್ತಿದ್ದಾರೆ.

ಎನ್​ಸಿಬಿ ಅಧಿಕಾರಿಗಳು ಆರ್ಯನ್​ಗೆ ಹಲವು ಪ್ರಶ್ನೆ ಕೇಳಿದ್ದಾರೆ. ವಿಚಾರಣೆ ವೇಳೆ ಅನೇಕ ಸತ್ಯಗಳನ್ನು ಅವರು ಬಾಯಿ ಬಿಟ್ಟಿದ್ದಾರೆ. ಕಳೆದ ನಾಲ್ಕು ವರ್ಷದಿಂದಲೂ ತಾವು ಡ್ರಗ್ಸ್​ ಸೇವಿಸುತ್ತಿರುವುದಾಗಿ ಆರ್ಯನ್ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿ ಕೂಡ ಕೇಳಿಬಂದಿದೆ. ಅವರಿಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಹರಸಾಹಸ ಮಾಡುತ್ತಿದ್ದಾರೆ.

ಇದನ್ನೂ ಓದಿ:

‘ನನ್ನ ಮಗ ಡ್ರಗ್ಸ್​ ಸೇವಿಸಲಿ, ಹುಡುಗಿಯರ ಹಿಂದೆ ಹೋಗಲಿ’ ಎಂದಿದ್ದ ಶಾರುಖ್​; ಇಲ್ಲಿದೆ ಶಾಕಿಂಗ್​ ವಿಡಿಯೋ​

ಶಾರುಖ್​ ಪುತ್ರ ಆರ್ಯನ್​ ಖಾನ್​ ಅರೆಸ್ಟ್​ ಆದಾಗ ಅಕ್ಷಯ್​ ಕುಮಾರ್​ ಮಗ ಆರವ್​ ಏನು ಮಾಡ್ತಿದ್ರು? ಎಲ್ಲಿದ್ರು?

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ