ಡ್ರಗ್ಸ್​ ಕೇಸ್​: ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ; ಶಾರುಖ್​ ಪುತ್ರನಿಗೆ ಮುಗಿಯದ ಸಂಕಷ್ಟ

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್​ ಪಾರ್ಟಿ ಮಾಡುತ್ತಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಆರ್ಯನ್​ ಖಾನ್​ಗೆ ಈವರೆಗೂ ಜಾಮೀನು ಸಿಕ್ಕಿಲ್ಲ. ಶಾರುಖ್​ ಪುತ್ರನಿಗೆ ಜಾಮೀನು ಕೊಡಿಸಲು ಆರ್ಯನ್​ ಪರ ವಕೀಲರಾದ ಸತೀಶ್​ ಮಾನೆಶಿಂಧೆ ಎಲ್ಲಿಲ್ಲದ ಪ್ರಯತ್ನ ಪಡುತ್ತಿದ್ದಾರೆ.

ಡ್ರಗ್ಸ್​ ಕೇಸ್​: ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ; ಶಾರುಖ್​ ಪುತ್ರನಿಗೆ ಮುಗಿಯದ ಸಂಕಷ್ಟ
ಆರ್ಯನ್ ಖಾನ್
Follow us
| Updated By: ಮದನ್​ ಕುಮಾರ್​

Updated on:Oct 11, 2021 | 12:38 PM

ರೇವ್ಸ್​ ಪಾರ್ಟಿ ಮಾಡಿ ಸಿಕ್ಕಿ ಬಿದ್ದಿರುವ ಆರ್ಯನ್​ ಖಾನ್​ಗೆ ಜಾಮೀನು ಎಂಬುದು ಮರೀಚಿಕೆಯಾಗಿದೆ. ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಾರುಖ್​ ಖಾನ್​ ಪುತ್ರ ಸದ್ಯ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಸೋಮವಾರ (ಅ.11) ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಿತ್ತು. ಆದರೆ ಅರ್ಜಿ ವಿಚಾರಣೆ ದಿನಾಂಕವನ್ನು ನ್ಯಾಯಾಲಯಕ್ಕೆ ಬುಧವಾರಕ್ಕೆ (ಅ.13) ಮುಂದೂಡಿದೆ. ಅಲ್ಲಿಯವರೆಗೂ ಆರ್ಯನ್​ ಖಾನ್​ ಜೈಲಿನಲ್ಲಿ ದಿನ ಕಳೆಯದೇ ಬೇರೆ ದಾರಿ ಇಲ್ಲ.

ಆರ್ಯನ್​ ಖಾನ್​ಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಪುತ್ರ ಅರೆಸ್ಟ್​ ಆದ ದಿನದಿಂದಲೂ ಶಾರುಖ್​ ಮತ್ತು ಗೌರಿ ಖಾನ್​ ದಂಪತಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ಊಟ, ನಿದ್ರೆಯ ಕಡೆಗೂ ಅವರು ಗಮನ ಕೊಡುತ್ತಿಲ್ಲ ಎಂಬ ಮಾಹಿತಿ ಕೇಳಿಬರುತ್ತಿದೆ. ಒಂದು ವೇಳೆ ಸ್ಪೆಷಲ್​ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಆರ್ಯನ್​ಗೆ ಜಾಮೀನು ಸಿಗದೇ ಇದ್ದರೆ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ವಕೀಲ ಸತೀಶ್​ ಮಾನೆಶಿಂಧೆ ನಿರ್ಧರಿಸಿದ್ದಾರೆ. ಯಾವುದಕ್ಕೂ ಬುಧವಾರದವರೆಗೆ ಕಾಯುವುದು ಅನಿವಾರ್ಯ.

ಶಾರುಖ್​ ಕುಟುಂಬದ ಪರ ನಿಂತ ಸೆಲೆಬ್ರಿಟಿಗಳು:

ಶಾರುಖ್​ ಮತ್ತು ಅವರ ಕುಟುಂಬದ ಪರವಾಗಿ ಅನೇಕರು ಧ್ವನಿ ಎತ್ತಿದ್ದಾರೆ. ಫರ್ಹಾ ಖಾನ್​, ಶೇಖರ್​ ಸುಮನ್​, ಹೃತಿಕ್​ ರೋಷನ್​, ಸಲ್ಮಾನ್​ ಖಾನ್​ ಸೇರಿದಂತೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಎಸ್​ಆರ್​ಕೆಗೆ ಬೆಂಬಲ ಸೂಚಿಸಿದ್ದಾರೆ. ಈಗ ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ವಿಶಾಲ್​ ದದ್ಲಾನಿ ಅವರು ಶಾರುಖ್​ ಪರ ಬ್ಯಾಟ್​ ಬೀಸಿದ್ದಾರೆ. ಅಲ್ಲದೇ, ಆರ್ಯನ್​ ಖಾನ್​ ಬಂಧನ ಒಂದು ಸಂಚು ಎಂದು ಅವರು ಆರೋಪಿಸಿದ್ದಾರೆ.

‘ಅದಾನಿ ಬಂದರಿನಲ್ಲಿ ಸಿಕ್ಕ 3 ಸಾವಿರ ಕೆಜಿ ತಾಲಿಬಾನಿ ಡ್ರಗ್ಸ್​ ಮತ್ತು ಬಿಜೆಪಿ ಶಾಸಕನ ಮಗ ಮಾಡಿದ ರೈತರ ಕೊಲೆ ಪ್ರಕರಣವನ್ನು ಮರೆಮಾಚಲು ಶಾರುಖ್​ ಖಾನ್​ ಮತ್ತು ಅವರ ಕುಟುಂಬವನ್ನು ಟಾರ್ಗೆಟ್​ ಮಾಡಲಾಗಿದೆ’ ಎಂದು ವಿಶಾಲ್​ ದದ್ಲಾನಿ ನೇರವಾಗಿ ಆರೋಪ ಮಾಡಿದ್ದಾರೆ. ‘ಕಳೆದ 30 ವರ್ಷದಲ್ಲಿ ಶಾರುಖ್​ ಖಾನ್​ ಜೊತೆ ಕೆಲಸ ಮಾಡಿದವರಲ್ಲಿ ಎಷ್ಟು ಜನರು ಈಗ ಅವರ ಪರವಾಗಿ ಇದ್ದೀರಿ’ ಎಂದು ಕೂಡ ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:

‘ಪ್ರೀತಿಯ ಆರ್ಯನ್​ ಖಾನ್​..’: ಶಾರುಖ್​ ಪುತ್ರನಿಗೆ ಹೃತಿಕ್​ ರೋಷನ್​ ಬಹಿರಂಗ ಪತ್ರ

ಶಾರುಖ್​ ಪುತ್ರನ ಅರೆಸ್ಟ್​ ಬೆನ್ನಲ್ಲೇ ಓಡೋಡಿ ಬಂದ ಸಲ್ಮಾನ್​ ಖಾನ್​; ‘ಮನ್ನತ್​’ನಲ್ಲಿ ನಡೆದಿದ್ದು ಏನು?

Published On - 12:22 pm, Mon, 11 October 21

ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ