AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಕೇಸ್​: ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ; ಶಾರುಖ್​ ಪುತ್ರನಿಗೆ ಮುಗಿಯದ ಸಂಕಷ್ಟ

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್​ ಪಾರ್ಟಿ ಮಾಡುತ್ತಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಆರ್ಯನ್​ ಖಾನ್​ಗೆ ಈವರೆಗೂ ಜಾಮೀನು ಸಿಕ್ಕಿಲ್ಲ. ಶಾರುಖ್​ ಪುತ್ರನಿಗೆ ಜಾಮೀನು ಕೊಡಿಸಲು ಆರ್ಯನ್​ ಪರ ವಕೀಲರಾದ ಸತೀಶ್​ ಮಾನೆಶಿಂಧೆ ಎಲ್ಲಿಲ್ಲದ ಪ್ರಯತ್ನ ಪಡುತ್ತಿದ್ದಾರೆ.

ಡ್ರಗ್ಸ್​ ಕೇಸ್​: ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ; ಶಾರುಖ್​ ಪುತ್ರನಿಗೆ ಮುಗಿಯದ ಸಂಕಷ್ಟ
ಆರ್ಯನ್ ಖಾನ್
TV9 Web
| Edited By: |

Updated on:Oct 11, 2021 | 12:38 PM

Share

ರೇವ್ಸ್​ ಪಾರ್ಟಿ ಮಾಡಿ ಸಿಕ್ಕಿ ಬಿದ್ದಿರುವ ಆರ್ಯನ್​ ಖಾನ್​ಗೆ ಜಾಮೀನು ಎಂಬುದು ಮರೀಚಿಕೆಯಾಗಿದೆ. ಎನ್​ಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಶಾರುಖ್​ ಖಾನ್​ ಪುತ್ರ ಸದ್ಯ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಸೋಮವಾರ (ಅ.11) ವಿಶೇಷ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ ನಡೆಯಬೇಕಿತ್ತು. ಆದರೆ ಅರ್ಜಿ ವಿಚಾರಣೆ ದಿನಾಂಕವನ್ನು ನ್ಯಾಯಾಲಯಕ್ಕೆ ಬುಧವಾರಕ್ಕೆ (ಅ.13) ಮುಂದೂಡಿದೆ. ಅಲ್ಲಿಯವರೆಗೂ ಆರ್ಯನ್​ ಖಾನ್​ ಜೈಲಿನಲ್ಲಿ ದಿನ ಕಳೆಯದೇ ಬೇರೆ ದಾರಿ ಇಲ್ಲ.

ಆರ್ಯನ್​ ಖಾನ್​ಗೆ ಜಾಮೀನು ಕೊಡಿಸಲು ಶಾರುಖ್​ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಪುತ್ರ ಅರೆಸ್ಟ್​ ಆದ ದಿನದಿಂದಲೂ ಶಾರುಖ್​ ಮತ್ತು ಗೌರಿ ಖಾನ್​ ದಂಪತಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ಊಟ, ನಿದ್ರೆಯ ಕಡೆಗೂ ಅವರು ಗಮನ ಕೊಡುತ್ತಿಲ್ಲ ಎಂಬ ಮಾಹಿತಿ ಕೇಳಿಬರುತ್ತಿದೆ. ಒಂದು ವೇಳೆ ಸ್ಪೆಷಲ್​ ಎನ್​ಡಿಪಿಎಸ್​ ನ್ಯಾಯಾಲಯದಲ್ಲಿ ಆರ್ಯನ್​ಗೆ ಜಾಮೀನು ಸಿಗದೇ ಇದ್ದರೆ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ವಕೀಲ ಸತೀಶ್​ ಮಾನೆಶಿಂಧೆ ನಿರ್ಧರಿಸಿದ್ದಾರೆ. ಯಾವುದಕ್ಕೂ ಬುಧವಾರದವರೆಗೆ ಕಾಯುವುದು ಅನಿವಾರ್ಯ.

ಶಾರುಖ್​ ಕುಟುಂಬದ ಪರ ನಿಂತ ಸೆಲೆಬ್ರಿಟಿಗಳು:

ಶಾರುಖ್​ ಮತ್ತು ಅವರ ಕುಟುಂಬದ ಪರವಾಗಿ ಅನೇಕರು ಧ್ವನಿ ಎತ್ತಿದ್ದಾರೆ. ಫರ್ಹಾ ಖಾನ್​, ಶೇಖರ್​ ಸುಮನ್​, ಹೃತಿಕ್​ ರೋಷನ್​, ಸಲ್ಮಾನ್​ ಖಾನ್​ ಸೇರಿದಂತೆ ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಎಸ್​ಆರ್​ಕೆಗೆ ಬೆಂಬಲ ಸೂಚಿಸಿದ್ದಾರೆ. ಈಗ ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ವಿಶಾಲ್​ ದದ್ಲಾನಿ ಅವರು ಶಾರುಖ್​ ಪರ ಬ್ಯಾಟ್​ ಬೀಸಿದ್ದಾರೆ. ಅಲ್ಲದೇ, ಆರ್ಯನ್​ ಖಾನ್​ ಬಂಧನ ಒಂದು ಸಂಚು ಎಂದು ಅವರು ಆರೋಪಿಸಿದ್ದಾರೆ.

‘ಅದಾನಿ ಬಂದರಿನಲ್ಲಿ ಸಿಕ್ಕ 3 ಸಾವಿರ ಕೆಜಿ ತಾಲಿಬಾನಿ ಡ್ರಗ್ಸ್​ ಮತ್ತು ಬಿಜೆಪಿ ಶಾಸಕನ ಮಗ ಮಾಡಿದ ರೈತರ ಕೊಲೆ ಪ್ರಕರಣವನ್ನು ಮರೆಮಾಚಲು ಶಾರುಖ್​ ಖಾನ್​ ಮತ್ತು ಅವರ ಕುಟುಂಬವನ್ನು ಟಾರ್ಗೆಟ್​ ಮಾಡಲಾಗಿದೆ’ ಎಂದು ವಿಶಾಲ್​ ದದ್ಲಾನಿ ನೇರವಾಗಿ ಆರೋಪ ಮಾಡಿದ್ದಾರೆ. ‘ಕಳೆದ 30 ವರ್ಷದಲ್ಲಿ ಶಾರುಖ್​ ಖಾನ್​ ಜೊತೆ ಕೆಲಸ ಮಾಡಿದವರಲ್ಲಿ ಎಷ್ಟು ಜನರು ಈಗ ಅವರ ಪರವಾಗಿ ಇದ್ದೀರಿ’ ಎಂದು ಕೂಡ ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:

‘ಪ್ರೀತಿಯ ಆರ್ಯನ್​ ಖಾನ್​..’: ಶಾರುಖ್​ ಪುತ್ರನಿಗೆ ಹೃತಿಕ್​ ರೋಷನ್​ ಬಹಿರಂಗ ಪತ್ರ

ಶಾರುಖ್​ ಪುತ್ರನ ಅರೆಸ್ಟ್​ ಬೆನ್ನಲ್ಲೇ ಓಡೋಡಿ ಬಂದ ಸಲ್ಮಾನ್​ ಖಾನ್​; ‘ಮನ್ನತ್​’ನಲ್ಲಿ ನಡೆದಿದ್ದು ಏನು?

Published On - 12:22 pm, Mon, 11 October 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ