AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಪತ್ನಿ ಗೌರಿ ಖಾನ್​ಗೂ ಅಂಟಿತ್ತು ಗಾಂಜಾ ಕಳಂಕ; ಏರ್​ಪೋರ್ಟ್​ನಲ್ಲಿ ನಡೆದ ಆ ಘಟನೆ ನಿಜವೇ?

ಬರ್ಲಿನ್​ ಏರ್​ಪೋರ್ಟ್​ನಲ್ಲಿ ಆ ಘಟನೆ ನಡೆಯಿತು ಎನ್ನಲಾದ ಬಳಿಕ ಗೌರಿ ಖಾನ್​ ಬಗ್ಗೆ ಅನೇಕ ವದಂತಿಗಳು ಹರಿದಾಡಿದ್ದವು. ಅವರು ಮಾದಕ ವ್ಯಸನಿ ಆಗಿದ್ದಾರೆ ಎಂದೆಲ್ಲ ಸುದ್ದಿ ಹಬ್ಬಿತ್ತು.

ಶಾರುಖ್​ ಪತ್ನಿ ಗೌರಿ ಖಾನ್​ಗೂ ಅಂಟಿತ್ತು ಗಾಂಜಾ ಕಳಂಕ; ಏರ್​ಪೋರ್ಟ್​ನಲ್ಲಿ ನಡೆದ ಆ ಘಟನೆ ನಿಜವೇ?
ಶಾರುಖ್ ಖಾನ್, ಗೌರಿ ಖಾನ್, ಆರ್ಯನ್ ಖಾನ್
TV9 Web
| Edited By: |

Updated on: Oct 04, 2021 | 8:17 AM

Share

ಡ್ರಗ್ಸ್​ ಪಾರ್ಟಿ ಮಾಡುತ್ತಿರುವಾಗ ನಟ ಶಾರುಖ್​ ಖಾನ್​ ಪುತ್ರ ಆರ್ಯನ್ ಖಾನ್​ ಅವರು ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಅಧಿಕಾರಿಗಳ ಬಲೆಗೆ ಬಿದಿದ್ದಾರೆ. ಸದ್ಯ ಅವರನ್ನು ಎನ್​ಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಇದು ಶಾರುಖ್ ಕುಟುಂಬಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಮಗನನ್ನು ಕೇಸ್​ನಿಂದ ಹೊರತರಲು ಶಾರುಖ್​ ಮತ್ತು ಅವರ ಪತ್ನಿ ಗೌರಿ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಈ ನಡುವೆ ಗೌರಿ ಖಾನ್​ಗೆ ಸಂಬಂಧಿಸಿದ ಒಂದು ಮಾಹಿತಿ ಮತ್ತೆ ಮುನ್ನೆಲೆಗೆ ಬರುತ್ತಿದೆ. ಅವರಿಗೂ ಕೂಡ ಗಾಂಜಾ ನಂಟು ಇತ್ತು ಎಂಬ ಬಗ್ಗೆ ಚರ್ಚೆ ಆಗುತ್ತಿದೆ.

ಕೆಲವು ವರ್ಷಗಳ ಹಿಂದೆ ಗೌರಿ ಖಾನ್​ ಬಗ್ಗೆ ಒಂದು ಸುದ್ದಿ ಹಾರಿದಾಡಿತ್ತು. ಗಾಂಜಾ ಹೊಂದಿದ್ದಾರೆ ಎಂಬ ಶಂಕೆ ಮೇರೆಗೆ ಬರ್ಲಿನ್​ ಏರ್​​ಪೋರ್ಟ್​ನಲ್ಲಿ ಅವರನ್ನು ಅಧಿಕಾರಿಗಳು ತಡೆದಿದ್ದರು ಮತ್ತು ಸಂಪೂರ್ಣ ತಪಾಸಣೆ ನಡೆಸಲಾಗಿತ್ತು ಎಂಬ ವಿಚಾರ ವೈರಲ್​ ಆಗಿತ್ತು. ಆದರೆ ಆ ಬಗ್ಗೆ ಅಲ್ಲಿನ ಅಧಿಕಾರಿಗಳು ಯಾವುದೇ ರೀತಿಯ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಹಾಗಾಗಿ ಅದು ಕೇವಲ ವದಂತಿ ಎಂದು ವಾದ ಮಾಡುತ್ತಾರೆ ಶಾರುಖ್​ ಅಭಿಮಾನಿಗಳು.

ಆ ಘಟನೆ ನಡೆದ ಬಳಿಕ ಗೌರಿ ಖಾನ್​ ಬಗ್ಗೆ ಅನೇಕ ಗಾಸಿಪ್​ಗಳು ಹರಿದಾಡಿದ್ದವು. ಅವರು ಮಾದಕ ವ್ಯಸನಿ ಆಗಿದ್ದಾರೆ ಎಂದೆಲ್ಲ ಸುದ್ದಿ ಹಬ್ಬಿತು. ಖಾಸಗಿ ಮ್ಯಾಗಜಿನ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಎಲ್ಲ ವದಂತಿಗಳನ್ನು ಗೌರಿ ಖಾನ್​ ತಳ್ಳಿ ಹಾಕಿದರು. ಇಂಥ ಗಾಳಿ ಸುದ್ದಿಗಳಿಂದ ತಾವು ವಿಚಲಿತ ಆಗುವುದಿಲ್ಲ ಎಂದು ಅವರು ಹೇಳಿದ್ದರು. ಒಟ್ಟಿನಲ್ಲಿ ಅವರ ಮೇಲೆ ಗಾಂಜಾ ಕಳಂಕ ಅಂಟಿಕೊಂಡಿದ್ದು ಮಾತ್ರ ಅಭಿಮಾನಿಗಳಿಗೆ ತೀವ್ರ ಬೇಸರ ಉಂಟು ಮಾಡಿತ್ತು.

ಸದ್ಯ ಶಾರುಖ್​ ಪುತ್ರ ಆರ್ಯನ್​ ಖಾನ್​ ಭವಿಷ್ಯದ ಬಗ್ಗೆ ಅವರ ಕುಟುಂಬಕ್ಕೆ ಚಿಂತೆ ಆಗಿದೆ. ಆ ಪಾರ್ಟಿಗೆ ಆರ್ಯನ್ ಕೇವಲ ಗೆಸ್ಟ್​ ಆಗಿದ್ದರು. ಅವರು ಯಾವುದೇ ರೀತಿ ಡ್ರಗ್ಸ್​ ಸೇವಿಸಿಲ್ಲ ಎಂದು ಅವರ ಪರ ವಕೀಲರು ವಾದ ಮಾಡುತ್ತಿದ್ದಾರೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಬಂದ ಬಳಿಕ ಸತ್ಯ ಹೊರಬೀಳಲಿದೆ.

ಇದನ್ನೂ ಓದಿ:

ಶಾರುಖ್​ ಪುತ್ರನ ಅರೆಸ್ಟ್​ ಬೆನ್ನಲ್ಲೇ ಓಡೋಡಿ ಬಂದ ಸಲ್ಮಾನ್​ ಖಾನ್​; ‘ಮನ್ನತ್​’ನಲ್ಲಿ ನಡೆದಿದ್ದು ಏನು?

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?