AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಪತ್ನಿ ಗೌರಿ ಖಾನ್​ಗೂ ಅಂಟಿತ್ತು ಗಾಂಜಾ ಕಳಂಕ; ಏರ್​ಪೋರ್ಟ್​ನಲ್ಲಿ ನಡೆದ ಆ ಘಟನೆ ನಿಜವೇ?

ಬರ್ಲಿನ್​ ಏರ್​ಪೋರ್ಟ್​ನಲ್ಲಿ ಆ ಘಟನೆ ನಡೆಯಿತು ಎನ್ನಲಾದ ಬಳಿಕ ಗೌರಿ ಖಾನ್​ ಬಗ್ಗೆ ಅನೇಕ ವದಂತಿಗಳು ಹರಿದಾಡಿದ್ದವು. ಅವರು ಮಾದಕ ವ್ಯಸನಿ ಆಗಿದ್ದಾರೆ ಎಂದೆಲ್ಲ ಸುದ್ದಿ ಹಬ್ಬಿತ್ತು.

ಶಾರುಖ್​ ಪತ್ನಿ ಗೌರಿ ಖಾನ್​ಗೂ ಅಂಟಿತ್ತು ಗಾಂಜಾ ಕಳಂಕ; ಏರ್​ಪೋರ್ಟ್​ನಲ್ಲಿ ನಡೆದ ಆ ಘಟನೆ ನಿಜವೇ?
ಶಾರುಖ್ ಖಾನ್, ಗೌರಿ ಖಾನ್, ಆರ್ಯನ್ ಖಾನ್
TV9 Web
| Edited By: |

Updated on: Oct 04, 2021 | 8:17 AM

Share

ಡ್ರಗ್ಸ್​ ಪಾರ್ಟಿ ಮಾಡುತ್ತಿರುವಾಗ ನಟ ಶಾರುಖ್​ ಖಾನ್​ ಪುತ್ರ ಆರ್ಯನ್ ಖಾನ್​ ಅವರು ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್​ಸಿಬಿ) ಅಧಿಕಾರಿಗಳ ಬಲೆಗೆ ಬಿದಿದ್ದಾರೆ. ಸದ್ಯ ಅವರನ್ನು ಎನ್​ಸಿಬಿ ಕಸ್ಟಡಿಗೆ ಒಪ್ಪಿಸಲಾಗಿದೆ. ಇದು ಶಾರುಖ್ ಕುಟುಂಬಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಮಗನನ್ನು ಕೇಸ್​ನಿಂದ ಹೊರತರಲು ಶಾರುಖ್​ ಮತ್ತು ಅವರ ಪತ್ನಿ ಗೌರಿ ಖಾನ್​ ಹರಸಾಹಸ ಮಾಡುತ್ತಿದ್ದಾರೆ. ಈ ನಡುವೆ ಗೌರಿ ಖಾನ್​ಗೆ ಸಂಬಂಧಿಸಿದ ಒಂದು ಮಾಹಿತಿ ಮತ್ತೆ ಮುನ್ನೆಲೆಗೆ ಬರುತ್ತಿದೆ. ಅವರಿಗೂ ಕೂಡ ಗಾಂಜಾ ನಂಟು ಇತ್ತು ಎಂಬ ಬಗ್ಗೆ ಚರ್ಚೆ ಆಗುತ್ತಿದೆ.

ಕೆಲವು ವರ್ಷಗಳ ಹಿಂದೆ ಗೌರಿ ಖಾನ್​ ಬಗ್ಗೆ ಒಂದು ಸುದ್ದಿ ಹಾರಿದಾಡಿತ್ತು. ಗಾಂಜಾ ಹೊಂದಿದ್ದಾರೆ ಎಂಬ ಶಂಕೆ ಮೇರೆಗೆ ಬರ್ಲಿನ್​ ಏರ್​​ಪೋರ್ಟ್​ನಲ್ಲಿ ಅವರನ್ನು ಅಧಿಕಾರಿಗಳು ತಡೆದಿದ್ದರು ಮತ್ತು ಸಂಪೂರ್ಣ ತಪಾಸಣೆ ನಡೆಸಲಾಗಿತ್ತು ಎಂಬ ವಿಚಾರ ವೈರಲ್​ ಆಗಿತ್ತು. ಆದರೆ ಆ ಬಗ್ಗೆ ಅಲ್ಲಿನ ಅಧಿಕಾರಿಗಳು ಯಾವುದೇ ರೀತಿಯ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಹಾಗಾಗಿ ಅದು ಕೇವಲ ವದಂತಿ ಎಂದು ವಾದ ಮಾಡುತ್ತಾರೆ ಶಾರುಖ್​ ಅಭಿಮಾನಿಗಳು.

ಆ ಘಟನೆ ನಡೆದ ಬಳಿಕ ಗೌರಿ ಖಾನ್​ ಬಗ್ಗೆ ಅನೇಕ ಗಾಸಿಪ್​ಗಳು ಹರಿದಾಡಿದ್ದವು. ಅವರು ಮಾದಕ ವ್ಯಸನಿ ಆಗಿದ್ದಾರೆ ಎಂದೆಲ್ಲ ಸುದ್ದಿ ಹಬ್ಬಿತು. ಖಾಸಗಿ ಮ್ಯಾಗಜಿನ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಎಲ್ಲ ವದಂತಿಗಳನ್ನು ಗೌರಿ ಖಾನ್​ ತಳ್ಳಿ ಹಾಕಿದರು. ಇಂಥ ಗಾಳಿ ಸುದ್ದಿಗಳಿಂದ ತಾವು ವಿಚಲಿತ ಆಗುವುದಿಲ್ಲ ಎಂದು ಅವರು ಹೇಳಿದ್ದರು. ಒಟ್ಟಿನಲ್ಲಿ ಅವರ ಮೇಲೆ ಗಾಂಜಾ ಕಳಂಕ ಅಂಟಿಕೊಂಡಿದ್ದು ಮಾತ್ರ ಅಭಿಮಾನಿಗಳಿಗೆ ತೀವ್ರ ಬೇಸರ ಉಂಟು ಮಾಡಿತ್ತು.

ಸದ್ಯ ಶಾರುಖ್​ ಪುತ್ರ ಆರ್ಯನ್​ ಖಾನ್​ ಭವಿಷ್ಯದ ಬಗ್ಗೆ ಅವರ ಕುಟುಂಬಕ್ಕೆ ಚಿಂತೆ ಆಗಿದೆ. ಆ ಪಾರ್ಟಿಗೆ ಆರ್ಯನ್ ಕೇವಲ ಗೆಸ್ಟ್​ ಆಗಿದ್ದರು. ಅವರು ಯಾವುದೇ ರೀತಿ ಡ್ರಗ್ಸ್​ ಸೇವಿಸಿಲ್ಲ ಎಂದು ಅವರ ಪರ ವಕೀಲರು ವಾದ ಮಾಡುತ್ತಿದ್ದಾರೆ. ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಬಂದ ಬಳಿಕ ಸತ್ಯ ಹೊರಬೀಳಲಿದೆ.

ಇದನ್ನೂ ಓದಿ:

ಶಾರುಖ್​ ಪುತ್ರನ ಅರೆಸ್ಟ್​ ಬೆನ್ನಲ್ಲೇ ಓಡೋಡಿ ಬಂದ ಸಲ್ಮಾನ್​ ಖಾನ್​; ‘ಮನ್ನತ್​’ನಲ್ಲಿ ನಡೆದಿದ್ದು ಏನು?

ಡ್ರಗ್ಸ್​ ಪಾರ್ಟಿಯಲ್ಲಿ ಸಿಕ್ಕಿಬಿದ್ದ ಶಾರುಖ್​ ಪುತ್ರನ ಹಿನ್ನೆಲೆ ಏನು? ಇಲ್ಲಿದೆ ಆರ್ಯನ್​ ಖಾನ್​ ಇತಿಹಾಸ

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ