AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಮಗನನ್ನು ಬಂಧಿಸಿದ್ದ ಸಮೀರ್​ ವಾಂಖೆಡೆಗೆ ಶಾಕ್​; ಪ್ರಕರಣದ ತನಿಖೆಯಿಂದಲೇ ಕೊಕ್‌

ಎನ್​ಸಿಬಿ ಅಧಿಕಾರಿಗಳು ಖಾಲಿ ಹಾಳೆಗೆ ಸಹಿ ಮಾಡಿಸಿಕೊಂಡರು ಮತ್ತು ಬಹುಕೋಟಿ ಡೀಲ್​ ಬಗ್ಗೆ ಮಾತುಗಳನ್ನು ಕೇಳಿಸಿಕೊಂಡಿದ್ದೇನೆ ಎಂದು ಪ್ರಭಾಕರ್​ ಸೈಲ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಶಾರುಖ್​ ಮಗನನ್ನು ಬಂಧಿಸಿದ್ದ ಸಮೀರ್​ ವಾಂಖೆಡೆಗೆ ಶಾಕ್​; ಪ್ರಕರಣದ ತನಿಖೆಯಿಂದಲೇ ಕೊಕ್‌
ಸಮೀರ್​ ವಾಂಖೆಡೆ, ಆರ್ಯನ್​ ಖಾನ್​
TV9 Web
| Edited By: |

Updated on: Nov 05, 2021 | 7:42 PM

Share

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಅವರನ್ನು ಬಂಧಿಸಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಮೇಲೆ ಅನೇಕ ಆರೋಪಗಳು ಕೇಳಿಬಂದಿವೆ. ಸ್ಟಾರ್​ ಪುತ್ರನ ಬಂಧನದ ಹಿಂದೆ ಸುಲಿಗೆ ಪ್ಲ್ಯಾನ್​ ಮಾಡಲಾಗಿತ್ತು ಎಂಬ ಆರೋಪ ಬಲವಾಗಿ ಕೇಳಿ ಬಂದಿತ್ತು. ಈ ಬೆನ್ನಲ್ಲೇ, ಪ್ರಕರಣದ ತನಿಖೆಯಿಂದ ಸಮೀರ್​ ವಾಂಖೆಡೆಯನ್ನು ಹೊರಗಿಡಲಾಗಿದೆ. ಈ ಪ್ರಕರದ ಬಗ್ಗೆ ಕೇಂದ್ರದ ಉನ್ನತ ತಂಡ ತನಿಖೆ ನಡೆಸಲಿದೆ.  

ಆರ್ಯನ್​ ಖಾನ್​ ಭಾಗಿಯಾಗಿದ್ದರು ಎನ್ನಲಾದ ರೇವ್​ ಪಾರ್ಟಿ ಮೇಲೆ ದಾಳಿ ನಡೆದ ದಿನ ಎನ್​ಸಿಬಿ ಅಧಿಕಾರಿಗಳ ಜೊತೆ ಖಾಸಗಿ ಡಿಟೆಕ್ಟೀವ್​ ಕಿರಣ್​ ಗೋಸಾವಿ ಮತ್ತು ಅವರ ಬಾಡಿಗಾರ್ಡ್​ ಪ್ರಭಾಕರ್​ ಸೈಲ್​ ಕೂಡ ಹಾಜರಿದ್ದರು. ಇವರಿಬ್ಬರು ಪ್ರಮುಖ ಸಾಕ್ಷಿಗಳಾಗಿದ್ದಾರೆ. ಆದರೆ ದಾಳಿ ಬಳಿಕ ಕಿರಣ್​ ಗೋಸಾವಿ ನಾಪತ್ತೆ ಆಗಿದ್ದರು. ಈಗ ಅವರು ಪುಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಎನ್​ಸಿಬಿ ಅಧಿಕಾರಿಗಳು ಖಾಲಿ ಹಾಳೆಗೆ ಸಹಿ ಮಾಡಿಸಿಕೊಂಡರು ಮತ್ತು ಬಹುಕೋಟಿ ಡೀಲ್​ ಬಗ್ಗೆ ಮಾತುಗಳನ್ನು ಕೇಳಿಸಿಕೊಂಡಿದ್ದೇನೆ ಎಂದು ಪ್ರಭಾಕರ್​ ಸೈಲ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಅದರ ಜೊತೆ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ ಮುಖಂಡ ನವಾಬ್​ ಮಲಿಕ್​ ಕೂಡ ಸಮೀರ್​ ವಾಂಖೆಡೆ ವಿರುದ್ಧ ಅನೇಕ ಆರೋಪಗಳನ್ನು ಹೊರಿಸಿದ್ದಾರೆ. ಇವುಗಳ ಆಧಾರದ ಮೇಲೆ ಮಹಾರಾಷ್ಟ್ರ ಸರ್ಕಾರವು ತನಿಖೆ ನಡೆಸಲು ವಿಶೇಷ ತಂಡ ರಚಿಸಿದೆ. ಈಗ ತನಿಖಾ ನೇತೃತ್ವವೂ ಅವರ ಕೈತಪ್ಪಿದೆ.

ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್ ಅವರನ್ನು ಬಂಧಿಸಿದ ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ಅವರನ್ನು ಜನರು ಶ್ಲಾಘಿಸುತ್ತಿದ್ದಾರೆ. ಆದರೆ ಇನ್ನೊಂದು ಕಡೆ ಅವರ ಮೇಲೆ ಹಲವು ಅರೋಪಗಳನ್ನೂ ಹೊರಿಸಲಾಗಿದೆ. ಈ ಡ್ರಗ್ಸ್​ ಪ್ರಕರಣದ ತನಿಖೆ ಪಾರದರ್ಶಕವಾಗಿಲ್ಲ, ಇದು ರಾಜಕೀಯ ಪ್ರೇರಿತ ದಾಳಿ, ಇದರ ಹಿಂದೆ ಯಾರದ್ದೋ ಪಿತೂರಿ ಇದೆ ಎಂದೆಲ್ಲ ಹೇಳಲಾಗುತ್ತಿದೆ. ಈ ಟೀಕೆಗಳ ನಡುವೆ ಸಮೀರ್​ ವಾಂಖೆಡೆ ಅವರ ಫ್ಯಾಮಿಲಿ ವಿಚಾರವನ್ನೂ ಎಳೆದು ತರಲಾಗುತ್ತಿದೆ. ಅದು ಅತಿರೇಕಕ್ಕೆ ಕೂಡ ಹೋಗಿದೆ. ಈಗ ಎನ್​ಸಿಪಿ ಮುಖಂಡ ನವಾಬ್​ ಮಲಿಕ್​ ಅವರು ಸಮೀರ್​ ವಾಂಖೆಡೆಯ ಸಹೋದರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ: ಬಂಧನದ ಭೀತಿಯಲ್ಲಿ ಸಮೀರ್​ ವಾಂಖೆಡೆ; ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ ಎನ್​ಸಿಬಿ ಅಧಿಕಾರಿಗೆ ಹಿನ್ನೆಡೆ

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ